ಬೆಳ್ತಂಗಡಿ: ಕರ್ನಾಟಕ ಸರಕಾರ ಪ್ರಸ್ತುತ ಪಡಿಸುವ 2022ನೇ ಸಾಲಿನ ಕ್ರೀಡಾ ರತ್ನ ಪ್ರಶಸ್ತಿಗೆ ಬೆಳ್ತಂಗಡಿ ತಾಲೂಕಿನ ಮರೋಡಿ ಗ್ರಾಮದ ಶ್ರೀಧರ್ ಕುಲಾಲ್ ಆಯ್ಕೆಯಾಗಿದ್ದಾರೆ.
ಕಂಬಳ ಕ್ಷೇತ್ರದಲ್ಲಿ ಆಗಣ್ಯ ಸಾಧನೆಯನ್ನು ಮಾಡಿ ಯಶಸ್ವಿ ಕ್ರೀಡಾಪಟುವಾಗಿ ಹೊರ ಹೊಮ್ಮಿದ ಇವರನ್ನು ಸರ್ಕಾರ ಗುರುತಿಸಿ ಕ್ರೀಡಾ ರತ್ನ ಪ್ರಶಸ್ತಿಗೆ ಆಯ್ಕೆ ಮಾಡಿದೆ.

