ಕಾಂತಾರ ಚಿತ್ರದ ವೇಷ ಹಾಕಿ ರೀಲ್ಸ್ : ಧರ್ಮಸ್ಥಳ ಕ್ಷೇತ್ರದಲ್ಲಿ ತಪ್ಪೊಪ್ಪಿಗೆ

ಹೈದರಾಬಾದ್ ಮೂಲದ ಮೇಕಪ್ ಆರ್ಟಿಸ್ಟ್ ಶ್ವೇತ. ಎಸ್.ರೆಡ್ಡಿ. ಕಾಂತಾರ ಚಿತ್ರದಲ್ಲಿರುವಂತೆ ವೇಷ ಹಾಕಿ ರೀಲ್ಸ್ ಮಾಡಿ ಇನ್ಸ್ಟಾಗ್ರಾಮ್ ಪೇಜ್‌ನಲ್ಲಿ ಹಂಚಿಕೊಂಡಿದ್ದಳು.

ತುಳುನಾಡಿನ ಅತ್ಯಂತ ನಂಬಿಕೆಯ ದೈವ ಪಂಜುರ್ಲಿಯ ರೀಲ್ಸ್ ವೈರಲ್‌ ಆಗುತ್ತಿದ್ದಂತೆ. ಶ್ವೇತಾ ನಡೆಗೆ ಸಾಮಾಜಿಕ ಜಾಲತಾಣದಲ್ಲಿ ಭಾರೀ ವಿರೋಧ ವ್ಯಕ್ತವಾಗಿತ್ತು.

ಇದರ ಬೆನ್ನಲ್ಲೇ ಇಂದು ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಕ್ಷೇತ್ರಕ್ಕೆ ಬಂದ ಶ್ವೇತ. ಎಸ್.ರೆಡ್ಡಿ ಮಂಜುನಾಥೇಶ್ವರ ದೇವಸ್ಥಾನದಲ್ಲಿ ತಪ್ಪೊಪ್ಪಿಗೆ ಕಾಣಿಕೆ ಹಾಕಿದ್ದಾಳೆ.

ನಂತರ ಧರ್ಮಾಧಿಕಾರಿ ಡಾ. ಡಿ ವಿರೇಂದ್ರ ಹೆಗ್ಗಡೆಯವರನ್ನ ಭೇಟಿ ಮಾಡಿ ಕ್ಷಮೆ ಕೇಳಿದ್ದಾರೆ.

Related Posts

Leave a Reply

Your email address will not be published.