ಕನ್ನಡಿಗ ಶ್ರೀನಿವಾಸ್ ಎನ್ ಕಾಂಚನ್ ಅವರಿಗೆ ರಾಷ್ಟ್ರೀಯ ನಿರ್ಮಾಣ ರತನ್ ಅವಾರ್ಡ್ ಫಾರ್ ಇಂಡಸ್ಟ್ರಿ ಡೆವಲಪ್ಮೆಂಟ್’ ಪ್ರಶಸ್ತಿ

ಅಖಿಲ ಭಾರತ ಉದ್ಯಮ ಅಭಿವೃದ್ಧಿ ಸಂಘವು ಮುಂಬೈ ಉದ್ಯಮಿ ಕನ್ನಡಿಗ ಶ್ರೀನಿವಾಸ್ ಎನ್ ಕಾಂಚನ್ ಅವರಿಗೆ ರಾಷ್ಟ್ರೀಯ ನಿರ್ಮಾಣ ರತನ್ ಅವಾರ್ಡ್ ಫಾರ್ ಇಂಡಸ್ಟ್ರಿ ಡೆವಲಪ್ಮೆಂಟ್’ ಎಂಬ ರಾಷ್ಟ್ರೀಯ ಪ್ರಶಸ್ತಿಯ ಗೌರವ ಪಡೆದರು.

ಶ್ರೀನಿವಾಸ್ ಕಾಂಚನ್ ಅವರು ಹಿಂದುಳಿದ ಪ್ರದೇಶವಾದ ಮಹಾರಾಷ್ಟ್ರ ದ ನಾಸಿಕ್ ಗ್ರಾಮೀಣ ಪ್ರದೇಶದಲ್ಲಿ ಪಂಚಾವಟಿ ವಲ್ವೇಸ್ ಆಂಡ್ ಫ್ಲಾಲೆಂಗ್ಸ್ ಎಂಬ ಕಾರ್ಖಾನೆಯನ್ನು ಸ್ಥಾಪಿಸಿ ಗ್ರಾಮೀಣ ಪ್ರದೇಶದ ಅಭಿವೃದ್ಧಿಗೆ ಹಾಗೂ ಸ್ಥಳೀಯರಿಗೆ ಉದ್ಯೋಗ ನೀಡುವಲ್ಲಿ ಶ್ರಮಿಸಿರುವದರಿಂದ ಈ ಪ್ರತಿಷ್ಟಿತ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಅವರ ಉದ್ಯೋಗ ವೃದ್ಧಿಯಲ್ಲಿ ಅವರ ಪುತ್ರ ಸಾಯಿಪ್ರಸಾದ್ ಸಹಾಯ ಮಾಡುತ್ತಿದ್ದಾರೆ.

Related Posts

Leave a Reply

Your email address will not be published.