ಪಕ್ಷೇತರ ಅಭ್ಯರ್ಥಿಯಾಗಿ ಪ್ರಮೋದ್ ಮುತಾಲಿಕ್ ನಾಮಪತ್ರ ಸಲ್ಲಿಕೆ

ಕಾರ್ಕಳ ವಿಧಾನಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿಯಾಗಿ ಶ್ರೀರಾಮ ಸೇನೆ ಅಧ್ಯಕ್ಷ ಪ್ರಮೋದ್ ಮುತಾಲಿಕ್ ತಾಲೂಕು ಕಚೇರಿಯಲ್ಲಿ ಚುನಾವಣೆ ಅಧಿಕಾರಿ ಮದನ್ ಮೋಹನ್ ಅವರಿಗೆ ನಾಮಪತ್ರ ಸಲ್ಲಿಸಿದರು. ಈ ಸಂದರ್ಭ ಶ್ರೀರಾಮ ಸೇನೆಯ ಮುಖಂಡ ಗಂಗಾಧರ್ ಕುಲಕರ್ಣಿ, ನಿಟ್ಟೆ ಗ್ರಾಮ ಪಂಚಾಯತ್ ಸದಸ್ಯ ಸುಭಾಸ್ ಹೆಗ್ಡೆ, ಶ್ರೀರಾಮ ಸೇನೆ ರಾಜ್ಯ ಪ್ರಧಾನ ಕಾರ್ಯದರ್ಶಿ ಆನಂದ ಶೆಟ್ಟಿ, ಪ್ರಮೋದ್ ಮುತಾಲಿಕ್ ಅಭಿಮಾನಿ ಸಂಘದ ಅಧ್ಯಕ್ಷ ಹರೀಶ ಅಧಿಕಾರಿ, ಚಿತ್ತರಂಜನ್ ಶೆಟ್ಟಿ ದುರ್ಗಾ ಸೇನೆ ಅಧ್ಯಕ್ಷ ವಿನಯ, ರಾನಡೆ ಕಾರ್ಯದರ್ಶಿ ರೂಪ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು

Related Posts

Leave a Reply

Your email address will not be published.