ಕಾರ್ಕಳದ ಹಿಂದೂ ರುದ್ರಭೂಮಿಯ ಮೇಲ್ಚಾವಣಿಗೆ ಬಿದ್ದ ಮರ

ಕಾರ್ಕಳ ಪುರಸಭಾ ವ್ಯಾಪ್ತಿಯ ಕರಿಯಕಲ್ಲು ಎಂಬಲ್ಲಿರುವ ಸಾರ್ವಜನಿಕ ಹಿಂದೂ ರುದ್ರಭೂಮಿಯಲ್ಲಿ ಶವಸಂಸ್ಕಾರದ ವೇಳೆ ಸುರಿದ ಭಾರಿ ಗಾಳಿ ಮಳೆಗೆ ಬೃಹತ್ ಗಾತ್ರದ ಮರ ಉರುಳಿ ರುದ್ರಭೂಮಿಯ ಮೇಲ್ಟಾವಣಿಗೆ ಬಿದ್ದಿರುವ ಘಟನೆ ನಡೆದಿದೆ.
ಮರ ಉರುಳಿ ಬಿದ್ದ ಪರಿಣಾಮವಾಗಿ ಅಂದಾಜು 50 ಸಾ. ರೂ. ನಷ್ಟ ಸಂಭವಿಸಿದೆ. ರೆಂಜಾಳ ಮತ್ತು ಸಾಣೂರು ಗ್ರಾಮದ ಮೃತದೇಹಗಳನ್ನು ಸುಡುವ ವೇಳೆ ಈ ಘಟನೆ ನಡೆದಿದೆ. ಈ ಸಂದರ್ಭದಲ್ಲಿ ರುದ್ರಭೂಮಿಯಲ್ಲಿ ಕೆಲಸ ಮಾಡುತ್ತಿದ್ದ ಪ್ರಕಾಶ್ ರಾವ್, ಗೋವಿಂದ ರಾವ್, ಮಹೇಶ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
