HomeFresh Newsಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿ ನಿಯಮಿತ ಬೆಂಗಳೂರು ವತಿಯಿಂದ ಸಮಾಲೋಚನಾ ಸಭೆ

ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿ ನಿಯಮಿತ ಬೆಂಗಳೂರು ವತಿಯಿಂದ ಸಮಾಲೋಚನಾ ಸಭೆ

ಮಂಗಳೂರು: ದಿನಾಂಕ :28/09/2025 ರ ಭಾನುವಾರದಂದು ಸೌಹಾರ್ದ ಕಾಯ್ದೆ ತಿದ್ದುಪಡಿಗೆ ಸಂಬಂಧಿಸಿದಂತೆ, ಮೈಸೂರು ಪ್ರಾಂತ್ಯದ ವತಿಯಿಂದ ಸಮಾಲೋಚನಾ ಸಭೆಯನ್ನು ಹೋಟೆಲ್ ಶ್ರೀನಿವಾಸ ಹಂಪನಕಟ್ಟೆ ಮಂಗಳೂರು ಇಲ್ಲಿ ಆಯೋಜಿಸಲಾಯಿತು. ಸಭೆಯ ಉದ್ಘಾಟನೆಯನ್ನು ಸಂಯುಕ್ತ ಸಹಕಾರಿಯ ಅಧ್ಯಕ್ಷರಾದ ಮಾನ್ಯ ಶ್ರೀ ಜಿ. ನಂಜನಗೌಡ ಇವರು ನೆರವೇರಿಸಿದರು, ಈ ಸಂದರ್ಭದಲ್ಲಿ ಸಭೆಯಲ್ಲಿ ಸಂಯುಕ್ತ ಸಹಕಾರಿಯ ಮಾನ್ಯ ನಿರ್ದೇಶಕರಾದ ಶ್ರೀ ಮಂಜುನಾಥ್ ಎಸ್ ಕೆ , ಶ್ರೀಮತಿ ಭಾರತಿ ಜಿ ಭಟ್ ಉಡುಪಿ ಜಿಲ್ಲಾ ಒಕ್ಕೂಟದ ಅಧ್ಯಕ್ಷರಾದ ಶ್ರೀ ಪಿ ಜಗನ್ನಾಥ್ ಶೆಟ್ಟಿ ಮತ್ತು ದಕ್ಷಿಣ ಕನ್ನಡ ಜಿಲ್ಲಾ ಒಕ್ಕೂಟದ ಅಧ್ಯಕ್ಷರಾದ ಶ್ರೀ ಭಾಸ್ಕರ್ ದೇವಸ್ಯ ರವರು ಮತ್ತು ಮೈಸೂರು ಪ್ರಾಂತೀಯ ಅಧಿಕಾರಿಗಳಾದ ಗುರುಪ್ರಸಾದ್ ಬಂಗೇರ* ಹಾಗೂ ಸೌಹಾರ್ದ ಅಭಿವೃದ್ಧಿ ಅಧಿಕಾರಿಗಳಾದ ಶ್ರೀ ವಿಜಯ್ ಬಿ ಎಸ್ ಮತ್ತು ನಂದನ್ ಬಿ ಎನ್, ಸಿಬ್ಬಂದಿಗಳಾದ ಶ್ರೀ ರೋಹಿತ್ ಮತ್ತು ಶ್ರೀ ಅರುಣ್ , ಉಪಸ್ಥಿತರಿದ್ದರು.ಸಭೆಯಲ್ಲಿ ಕಾಯ್ದೆ ತಿದ್ದುಪಡಿಗೆ ಸಂಬಂಧಿಸಿದಂತೆ ಸಹಕಾರಿಗಳಿಂದ ಸಾಕಷ್ಟು ಪ್ರಶ್ನೆಗಳು, ಸಲಹೆ , ಅಭಿಪ್ರಾಯವನ್ನು ಸ್ವೀಕರಿಸಲಾಯಿತು.

ಸಹಕಾರಿಗಳು ಕೇಳಿದ ಎಲ್ಲಾ ಪ್ರಶ್ನೆ ಗಳಿಗೆ, ಸಂಯುಕ್ತ ಸಹಕಾರಿಯ ಮಾನ್ಯ ಅಧ್ಯಕ್ಷರಾದ ಶ್ರೀ ಜಿ. ನಂಜನಗೌಡರವರು ಉತ್ತರಿಸಿದರು.

ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯ ಸಹಕಾರಿಗಳಿಂದ ಒಟ್ಟಾರೆ 170 ಜನ ಪ್ರತಿನಿಧಿಗಳು ಸಭೆಯಲ್ಲಿ ಸಕ್ರಿಯವಾಗಿ ಭಾಗವಹಿಸಿ, ಸಭೆಯನ್ನು ಯಶಸ್ವಿಗೊಳಿಸಿದರು.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments