ಕಿರಿಮಂಜೇಶ್ವರ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಡುಪಿ ಇವರ ಸಹಯೋಗದಲ್ಲಿ ಪೋಷಣ್ ಮಾಸಾಚರಣೆ ಕಾರ್ಯಕ್ರಮ

ಕಿರಿಮಂಜೇಶ್ವರ ಗ್ರಾಮ ಪಂಚಾಯತ್ ಆಶ್ರಯದಲ್ಲಿ ಬುಧವಾರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಡುಪಿ ಇವರ ಸಹಯೋಗದಲ್ಲಿ ನಡೆದ ಪೆÇೀಷಣ್ ಮಾಸಾಚರಣೆ ಕಾರ್ಯಕ್ರಮದಲ್ಲಿ ಪೌಷ್ಟಿಕಾಂಶ ಆಹಾರಗಳ ಬಗ್ಗೆ ಮಾಹಿತಿ ಶಿಬಿರ ಶಾಂತೇರಿ ಕಾಮಾಕ್ಷಿ ಕಲ್ಯಾಣ ಮಂಟಪ ನಾಗೂರಿನಲ್ಲಿ
ಸಂಭ್ರಮದಿಂದ ನಡೆಯಿತು.
ಕಿರಿಮಂಜೇಶ್ವರ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶೇಖರ್ ಖಾರ್ವಿ ಕಾರ್ಯಕ್ರಮನ ಉದ್ಘಾಟಿಸಿ ಮಾತನಾಡಿ ನಮ್ಮ ಹಿರಿಯರ ಸಾಂಪ್ರದಾಯಿಕ ಆಹಾರ ಪದ್ಧತಿ ಹಾಗೂ ನಮ್ಮ ಸುತ್ತಮುತ್ತಲ ಬೆಳೆಯುವ ಸೊಪ್ಪು ತರಕಾರಿಗಳು ಪೆÇೀಷಕಾಂಶಗಳ ಆಗರವಾಗಿದೆ. ದಿನನಿತ್ಯದ ಆಹಾರದಲ್ಲಿ ಇದನ್ನ ಉಪಯೋಗಿಸುವುದರಿಂದ ನಮಗೆ ಪೌಷ್ಟಿಕಾಂಶಗಳ ಕೊರತೆ ಉಂಟಾಗದು ಎಂದರು
ಅಂಗನವಾಡಿ ಮೇಲ್ವಿಚಾರಕಿ ಶ್ರೀಮತಿ ರೇಖಾ ಮಾತನಾಡಿ ಕೇವಲ ಮಕ್ಕಳು, ಮಹಿಳೆಯರಿಗೆ ಮಾತ್ರವಲ್ಲ ಪುರುಷರಿಗೂ ಕೂಡ ಪೌಷ್ಟಿಕಾಂಶವುಳ್ಳ ಆಹಾರ ಅಗತ್ಯನಮ್ಮ ದಿನಚರ್ಯೆ, ಆಹಾರ ವಿಹಾರ ಪದ್ಧತಿ ಹಾಗೂ ಮಾನಸಿಕ ಸಂಕುಲತೆಯನ್ನು ಜೀವನದಲ್ಲಿ ಅನುಸರಿಸರಿಸುವುದೇ ನಮ್ಮ ಮೂಲ ಮಂತ್ರ. ಇದನ್ನು ಎಲ್ಲರೂ ಕೂಡ ಸರಿಯಾಗಿ ಅರ್ಥಮಾಡಿಕೊಳ್ಳಬೇಕು. ಇಂದಿನ ಯುವಜನರು ಸಾಂಪ್ರದಾಯಿಕ ಪೌಷ್ಟಿಕಾಂಶದ ಆಹಾರ ಸೇವನೆ ಬಿಟ್ಟು ಪಾಶ್ಚಿಮಾತ್ಯ ಆಹಾರದ ಕಡೆಗೆ ಒಲವು ತೋರುತ್ತಿದ್ದಾರೆ. ಇದರಿಂದ ರಕ್ತಹೀನತೆ, ಅಪೌಷ್ಟಿಕತೆ, ಬೊಜ್ಜುತನ ಉಂಟಾಗುತ್ತದೆ. ಈ ನೆಲೆಯಲ್ಲಿ ಕೇಂದ್ರ ಸರ್ಕಾರ ಆಹಾರ ಕ್ರಮಗಳ ಅರಿವು ಮೂಡಿಸಲು ಪೆÇೀಷಣ್ ಅಭಿಯಾನ ಜಾರಿಗೆ ತಂದಿದೆ ಎಂದರು.
ಕಿರಿಮಂಜೇಶ್ವರ ಗ್ರಾಮ ಪಂಚಾಯತ್ ಪಿ.ಡಿ ಓ ರಾಜೇಶ್ ಮಾತನಾಡಿ ಪ್ರತಿಯೊಬ್ಬರು ವೈದ್ಯರ ಸಲಹೆ ಪಡೆದುಕೊಂಡು ಮಕ್ಕಳಿಗೆ ಆಹಾರ ಪದ್ಧತಿಯನ್ನು ತೊಡಗಿಸಬೇಕು ಆದಷ್ಟು ಮನೆಯಲ್ಲೇ ಬೆಳೆದ ಆಹಾರವನ್ನು ಬಳಸುವುದರಿಂದ ಉತ್ತಮ ಎಂದರು.
ಮಹಿಳೆಯರು ಮನೆಯಿಂದ ತಯಾರಿಸಿ ತಂದಿರುವ ಪೌಷ್ಟಿಕಾಂಶಭರಿತ ತಿಂಡಿಗಳ ಪ್ರದರ್ಶನ ನಂತರ ಆಯ್ಕೆಯಾದ ತಿನಿಸುಗಳಿಗೆ ಬಹುಮಾನ ನೀಡಲಾಯಿತು.ಗರ್ಭಿಣಿಯರಿಗೆ ಸೀಮಂತಪೂಜೆ ನೆರವೇರಿಸಲಾಯಿತು.
ಈ ಸಂದರ್ಭದಲ್ಲಿ ವೈದ್ಯಾಧಿಕಾರಿ ನಿಶಾ ರೆಬೆಲ್ಲೊ ಕಿರಿಮಂಜೇಶ್ವರ ಗ್ರಾಮ ಪಂಚಾಯತ್ ಸದಸ್ಯರಾದ
ರಾಜು ದೇವಾಡಿಗ,ಕೃಷ್ಣ ಖಾರ್ವಿ,ಈಶ್ವರ್ ದೇವಾಡಿಗ,ಆನಂದ ಪೂಜಾರಿ,ಸರಸ್ವತಿ ನಾಯರಿ,ನೇತ್ರಾವತಿ, ಶಶಿಕಲಾ,ಜಯಲಕ್ಷ್ಮಿ, ಮತ್ತು ಅಂಗನವಾಡಿ ಕಾರ್ಯಕರ್ತೆಯರು, ಅಂಗನವಾಡಿ ಸಹಾಯಕಿಯರು, ಸಂಜೀವಿನಿ ಸಂಘದ ಸದಸ್ಯರು, ಆಶಾ ಕಾರ್ಯಕರ್ತರು, ಪ್ರಾಥಮಿಕ ಆರೋಗ್ಯ ಕೇಂದ್ರ ಸಿಬ್ಬಂದಿಗಳು,ಊರಿನ ಗ್ರಾಮಸ್ಥರು ಉಪಸ್ಥಿತರಿದ್ದರು.
ಅಂಗನವಾಡಿ ಕಾರ್ಯಕರ್ತೆ ಪ್ರವೀಣಾ ಹೊಸಹಿತ್ಲು ಸ್ವಾಗತಿಸಿ, ಪದ್ಮನಾಭ ಹೆಬ್ಬಾರ್ ಕಾರ್ಯಕ್ರಮ ನಿರೂಪಿಸಿದರು. ಪ್ರವೀಣಾ ನಾಗೂರು ವಂದಿಸಿದರು.