HomeUncategorizedಕುದ್ರೋಳಿ ಗೋಕರ್ಣನಾಥ ಕ್ಷೇತ್ರದಲ್ಲಿ ಧವಸ ಧಾನ್ಯದಿಂದ ಮೂಡಿಬಂದ ತ್ರಿವರ್ಣ

ಕುದ್ರೋಳಿ ಗೋಕರ್ಣನಾಥ ಕ್ಷೇತ್ರದಲ್ಲಿ ಧವಸ ಧಾನ್ಯದಿಂದ ಮೂಡಿಬಂದ ತ್ರಿವರ್ಣ

ಕುದ್ರೋಳಿ ಗೋಕರ್ಣನಾಥ ಕ್ಷೇತ್ರದಲ್ಲಿ 75ನೇ ಸ್ವಾತಂತ್ರ್ಯೋತ್ಸವ ಪ್ರಯುಕ್ತ ಅತ್ಯಂತ ವಿಶಿಷ್ಟವಾಗಿ ತ್ರಿವರ್ಣ ರಚಿಸಲಾಗಿದೆ. ದೇವಸ್ಥಾನದ ಮುಂದಿನ ಅಂಗಣದಲ್ಲಿ ಧವಸ ಧಾನ್ಯಗಳನ್ನಷ್ಟೇ ಬಳಸಿಕೊಂಡು ಆಕರ್ಷಕ ತ್ರಿವರ್ಣ ರಚಿಸಿದ್ದು ನೋಡುಗರ ಗಮನ ಸೆಳೆದಿದೆ.

ಗುರು ಬೆಳದಿಂಗಳು ಸಂಸ್ಥೆಯ ಆಶ್ರಯದಲ್ಲಿ ಮಂಗಳೂರಿನ ಕಲಾವಿದ ಮತ್ತು ಛಾಯಾಗ್ರಾಹಕ ಪುನಿಕ್ ಶೆಟ್ಟಿ ನೇತೃತ್ವದಲ್ಲಿ ಕ್ಷೇತ್ರದ ಸಿಬಂದಿ ಮತ್ತು ಗುರು ಬೆಳದಿಂಗಳು ಸಂಸ್ಥೆಯ ಸದಸ್ಯರು ಸೇರಿ 18 ಗಂಟೆಗಳ ಪರಿಶ್ರಮದಿಂದ ಆಕರ್ಷಕ ತ್ರಿವರ್ಣ ರಚಿಸಿದ್ದಾರೆ. ಯಾವುದೇ ಬಣ್ಣಗಳನ್ನು ಬಳಸದೆ ಕೇವಲ ಧಾನ್ಯ, ತರಕಾರಿ, ಹೂಗಳನ್ನಷ್ಟೇ ಬಳಸ್ಕೊಂಡು ತ್ರಿವರ್ಣದ ಆಕರ್ಷಣೆ ಮೂಡಿಸಿದ್ದು ವಿಶೇಷ.

ಒಟ್ಟು 900 ಕೇಜಿ ಧಾನ್ಯ, 100 ಕೇಜಿ ತರಕಾರಿ, 38 ಅಡಿ ವೃತ್ತ, 54 ಕಲಶ, 108 ಬಾಳೆಎಲೆ, 500 ವೀಳ್ಯದೆಲೆ, 100 ಕೇಜಿ ಬೆಳ್ತಿಗೆ ಅಕ್ಕಿಯನ್ನು ಬಳಸಲಾಗಿದೆ. 38 ಅಡಿ ವ್ಯಾಸದ ವೃತ್ತದಲ್ಲಿ ಹೆಸರು ಬೇಳೆಯನ್ನು ಹಸಿರು ಬಣ್ಣಕ್ಕೆ ಬಳಸಿದರೆ, ಬಿಳಿ ಬಣ್ಣವನ್ನು ಸೂಚಿಸಲು ಸಾಗುವನ್ನು ಬಳಸಲಾಗಿದೆ. ಕೇಸರಿ ಬಣ್ಣ ಸೂಚಿಸಲು ಕಡ್ಲೆ ಬೇಳೆಯನ್ನು ಉಪಯೋಗಿಸಲಾಗಿದೆ. ಅದರ ಸುತ್ತಲೂ ಬಾಳೆ ಎಲೆಯಲ್ಲಿ ಕಲಶಗಳನ್ನಿಟ್ಟು ವೀಳ್ಯದೆಲೆ ಮತ್ತು ಅಡಿಕೆ ಇರಿಸಲಾಗಿದೆ. ದೇವಸ್ಥಾನದ ಆವಣರಣ ಆಗಿರುವುದರಿಂದ ಧಾರ್ಮಿಕತೆಯ ಟಚ್ ಕೊಡಲಾಗಿದೆ.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments