HomeFresh Newsಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಭೇಟಿ ನೀಡಿದ ಕೇಂದ್ರ ಸಚಿವೆ ಸ್ಮೃತಿ ಇರಾನಿ

ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಭೇಟಿ ನೀಡಿದ ಕೇಂದ್ರ ಸಚಿವೆ ಸ್ಮೃತಿ ಇರಾನಿ

ಕಡಬ: ಕೇಂದ್ರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಸ್ಮೃತಿ ಇರಾನಿ ನಾಗಾರಾಧನೆಯ ಪುಣ್ಯ ತಾಣ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ ನೀಡಿದರು. ಕುಟುಂಬ ಸಮೇತರಾಗಿ ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಆಗಮಿಸಿದ ಸಚಿವರು ಆರಂಭದಲ್ಲಿ ಸಂಕಲ್ಪ ನೆರವೇರಿಸಿದರು. ಬಳಿಕ ಶ್ರೀ ದೇವರ ದರುಶನ ಪಡೆದು ಪಂಚಾಮೃತ ಮಹಾಭಿಷೇಕ ಸೇವೆಯನ್ನು ಸಮರ್ಪಿಸಿದರು. ನಂತರ ಮದ್ಯಾಹ್ನ ಶ್ರೀ ದೇವರ ಮಹಾಪೂಜೆ ವೀಕ್ಷಿಸಿ ಮಹಾಪೂಜಾ ಸೇವೆ ನೆರವೇರಿಸಿದರು.ಬಳಿಕ ಪ್ರಾರ್ಥನೆ ಸೇವೆ ನಡೆಸಿ ತನ್ನ ಅಭೀಷ್ಠೆಗಳನ್ನು ಶ್ರೀ ದೇವರಲ್ಲಿ ನಿವೇದಿಸಿದರು. ಶ್ರೀ ದೇವಳದ ಪ್ರಧಾನ ಅರ್ಚಕ ವೇದಮೂರ್ತಿ ಸೀತಾರಾಮ ಎಡಪಡಿತ್ತಾಯರು ಸಚಿವರಿಗೆ ಶಾಲು ಮತ್ತು ಶ್ರೀ ದೇವರ ಮಹಾಪ್ರಸಾದ ನೀಡಿ ಹರಸಿದರು.

ನಂತರ ಶ್ರೀ ಹೊಸಳಿಗಮ್ಮನ ದರುಶನ ಮಾಡಿ ಪ್ರಸಾದ ಸ್ವೀಕರಿಸಿದರು. ನಂತರ ಶ್ರೀ ದೇವಳದಲ್ಲಿ ಪ್ರಸಾದ ಬೋಜನ ಸ್ವೀಕರಿಸಿದರು. ತದನಂತರ ಆಡಳಿತ ಕಚೇರಿಗೆ ಭೇಟಿ ನೀಡಿದ ಸಚಿವರಿಗೆ ಶ್ರೀ ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಮೋಹನರಾಂ ಸುಳ್ಳಿ ಶಾಲು ಹೊದಿಸಿ ಶ್ರೀ ದೇವರ ಮಹಾಪ್ರಸಾದ ನೀಡಿ ಗೌರವಿಸಿದರು. ಸಚಿವರೊಂದಿಗೆ ಅವರ ಪತಿ ಜುಬಿನ್ ಇರಾನಿ ಮತ್ತು ಮಗಳು ಜೊಯಿಸ್, ಆಂದ್ರ ಪ್ರದೇಶದ ಬಿಜೆಪಿ ವಕ್ತಾರ ತಿರುಪತಿ ಭಾನುಪ್ರಸಾದ್ ಆಗಮಿಸಿದ್ದರು. ಈ ಸಂದರ್ಭ ಶ್ರೀ ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಮೋಹನ್ ರಾಮ್ ಸುಳ್ಳಿ, ದೇವಳದ ಕಾರ್ಯನಿರ್ವಹಣಾಧಿಕಾರಿ ಡಾ. ನಿಂಗಯ್ಯ, ಉಪಸ್ಥಿತರಿದ್ದರು.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments