ಶಿಬರೂರು ಕ್ಷೇತ್ರದಲ್ಲಿ ಮಹಾ ಸಂಪ್ರೋಕ್ಷಣೆ, ಮಂಗಳ ಮಂತ್ರಾಕ್ಷತೆ

ಸುರತ್ಕಲ್ : ಶಿಬರೂರು ಶ್ರೀ ಕೊಡಮಣಿತ್ತಾಯ ಕ್ಷೇತ್ರದಲ್ಲಿ ನಡೆದ ಬ್ರಹ್ಮಕುಂಭಾಭಿಷೇಕ ಮತ್ತು ಅಷ್ಟಪವಿತ್ರ ನಾಗಮಂಡಲೋತ್ಸವ ಪ್ರಯುಕ್ತ ಮಹಾ ಸಂಪ್ರೋಕ್ಷಣೆ, ಮಂಗಳ ಮಂತ್ರಾಕ್ಷತೆ, ಬ್ರಹ್ಮಶ್ರೀ ವೇದವ್ಯಾಸ ತಂತ್ರಿಗಳ ನೇತೃತ್ವದಲ್ಲಿ, ಕಟೀಲು ಹರಿನಾರಾಯಣ ದಾಸ ಆಸ್ರಣ್ಣರ ಉಪಸ್ಥಿತಿಯಲ್ಲಿ ನಡೆಯಿತು.

ತಿಬಾರ್ ಗುತ್ತಿನಾರ್ ಉಮೇಶ್ ಎನ್ ಶೆಟ್ಟಿ, ಜೀರ್ಣೋದ್ದಾರ ಮತ್ತು ಬ್ರಹ್ಮಕಲಶೋತ್ಸವ ಸಮಿತಿಯ ಅಧ್ಯಕ್ಷರು, ಪದಾಧಿಕಾರಿಗಳು, ಗುತು ಮನೆಯವರು, ವಿವಿಧ ಉಪಸಮಿತಿಗಳ ಅಧ್ಯಕ್ಷರು, ಪದಾಧಿಕಾರಿಗಳು ಸದಸ್ಯರು, ಭಕ್ತಾಧಿಗಳು ಉಪಸ್ಥಿತರಿದ್ದರು.

Related Posts

Leave a Reply

Your email address will not be published.