ಶ್ರೀ ಗೋಕರ್ಣನಾಥೇಶ್ವರ ಕಾಲೇಜಿನಲ್ಲಿ ಆ.26ರಂದು ಉದ್ಯೋಗ ಮೇಳ
ಶ್ರೀ ಗೋಕರ್ಣನಾಥೇಶ್ವರ ಕಾಲೇಜು ಮಂಗಳೂರು, ಬಿಇಡಬ್ಲ್ಯುಎಸ್ ಯುವವಾಹಿನಿ ಕೇಂದ್ರ ಸಮಿತಿ ಸಹಯೋಗದಲ್ಲಿ ಬೃಹತ್ ಉದ್ಯೋಗ ಮೇಳವು ಆಗಸ್ಟ್ ೨೬ರಂದು ನಡೆಯಲಿದೆ.
ಮಂಗಳೂರಿನ ಮಣ್ಣಗುಡ್ಡೆಯಲ್ಲಿರುವ ಶ್ರೀ ಗೋಕರ್ಣನಾಥೇಶ್ವರ ಕಾಲೇಜು ಸಭಾಂಗಣದಲ್ಲಿ ಆಗಸ್ಟ್ 26ರಂದು ನಡೆಯಲಿದೆ. ದೇಶದ ವಿವಿಧ ಕಡೆಗಳಿಂದ ಪ್ರತಿಷ್ಠಿತ ಕಂಪೆನಿಗಳು ಈ ಮೇಳದಲ್ಲಿ ಭಾಗವಹಿಸಲಿದೆ.
ಉದ್ಯೋಗ ಮೇಳವನ್ನು ಬಿಎಸ್ಡಬ್ಲ್ಯುಎಸ್ ಮಂಗಳೂರಿನ ಅಧ್ಯಕ್ಷರಾದ ಅಶೋಕ್ ಕುಮಾರ್ ಉದ್ಘಾಟಿಸಲಿದ್ದಾರೆ. ಯುವವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷರಾದ ರಾಜೇಶ್ ಬಿ. ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಶ್ರೀ ಗೋಕರ್ಣನಾಥೇಶ್ವರ ಕಾಲೇಜಿನ ಸಂಚಾಲಕರಾದ ವಸಂತ ಕಾರಂದೂರು, ಎಸಿಪಿ ಮಹೇಶ್ ಕುಮಾರ್, ಶ್ರೀ ಗೋಕರ್ಣನಾಥೇಶ್ವರ ಕಾಲೇಜಿನ ಪ್ರಾಂಶುಪಾಲರಾದ ಡಾ. ಆಶಾಲತಾ ಸುವರ್ಣ, ಉದ್ಯೋಗ ಮತ್ತು ಭವಿಷ್ಯ ನಿರ್ಮಾಣದ ನಿರ್ದೇಶಕರಾದ ನವಾನಂದ, ಶಿವಕುಮಾರ ಸ್ವಾಮಿ ಕೆ.ಎಂ. ಹಾಗೂ ಅಧ್ಯಕ್ಷರು ಪದಾಧಿಕಾರಿಗಳು ಭಾಗವಹಿಲಿದ್ದಾರೆ.