ಮಂಗಳೂರು: ಹೆದ್ದಾರಿಯಲ್ಲಿ ಹೊತ್ತಿ ಉರಿದ ಬಿಎಂಡಬ್ಲ್ಯೂ ಕಾರು

ಹೆದ್ದಾರಿ ಮಧ್ಯೆ ಬಿಎಂಡಬ್ಲ್ಯೂ ಕಾರೊಂದು ಹೊತ್ತಿ ಉರಿದ ಘಟನೆ ನಗರದ ಹೊರವಲಯದ ಅಡ್ಯಾರ್ ಸಹ್ಯಾದ್ರಿ ಕಾಲೇಜ್ ಬಳಿ ನಡೆದಿದೆ.

ಶಾರ್ಟ್ ಸರ್ಕ್ಯೂಟ್‌ನಿಂದ ಕಾರಿಗೆ ಬೆಂಕಿ ಹೊತ್ತಿಕೊಂಡಿದೆ ಎನ್ನಲಾಗುತ್ತಿದ್ದು, ಕಾರಿನಲ್ಲಿ ಹೊಗೆ ಕಾಣಿಸಿಕೊಂಡ ಕೂಡಲೇ ಚಾಲಕ ಕಾರಿನಿಂದ ಕೆಳಗಿಳಿದಿದ್ದಾನೆ ಎಂದು ತಿಳಿದು ಬಂದಿದೆ.

ದೆಹಲಿ ನೋಂದಾಯಿತ ಬಿಎಂಡಬ್ಲ್ಯೂ ಕಾರು ಅರ್ಧಗಂಟೆಯಿಂದ ಹೊತ್ತಿ ಉರಿಯುತ್ತಿದ್ದು, ಸಂಪೂರ್ಣ ಭಸ್ಮವಾಗಿದೆ. ಆದರೆ ಈ ವರೆಗೂ ಸ್ಥಳಕ್ಕೆ ಯಾವುದೇ ಅಗ್ನಿಶಾಮಕ ದಳದವರು ಆಗಮಿಸಿಲ್ಲ ಎನ್ನಲಾಗಿದೆ.

add - BDG

Related Posts

Leave a Reply

Your email address will not be published.