ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮೊದಲಿನದು : ಪಣಂಬೂರು ಬೀಚಿನಲ್ಲಿ ತೇಲು ಸೇತುವೆ

ಪಣಂಬೂರು ಬೀಚಿಗೆ ಹೊಸ ಆಕರ್ಷಣೆ ಆಗಿರುವ ತೇಲುವ ಸೇತುವೆಯನ್ನು ವಿಧಾನಸಭಾಧ್ಯಕ್ಷರಾದ ಯು. ಟಿ. ಖಾದರ್ ಅವರು ಸಾರ್ವಜನಿಕರಿಗೆ ತೆರೆದಿಟ್ಟರು.ಬೀಚ್ ಪ್ರವಾಸೋದ್ಯಮವನ್ನು ಮತ್ತಷ್ಟು ಬಲಪಡಿಸಲು ಪ್ರವಾಸೋದ್ಯಮ ಸಚಿವರ ಜೊತೆಗೆ ಮಾತನಾಡುವುದಾಗಿ ಈ ಸಂದರ್ಭದಲ್ಲಿ ಖಾದರ್ ಹೇಳಿದರು. 150 ಮೀಟರ್ ಉದ್ದ ಇರುವ ಈ ತೇಲು ಸೇತುವೆಯು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮೊದಲನೆಯದಾಗಿದೆ. ಇದರ ಮೇಲೆ ನಿಂತು ಸೂರ್ಯ ಮುಳುಗುವುದನ್ನು ನೋಡಬಹುದು. ಸದಾ 12 ಮಂದಿ ಜೀವ ರಕ್ಷಕರು ಅಲ್ಲಿ ಇರುವಂತೆ ವ್ಯವಸ್ಥೆ ಮಾಡಲಾಗಿದೆ. ಬೀಚ್ ನಿರ್ವಹಣಾ ಸಂಸ್ಥೆಗೆ ಸೇರಿದ ಲಕ್ಷ್ಮೀಶ ಭಂಡಾರಿ, ರಾಜೇಶ ಹುಕ್ಕೇರಿ ಉಪಸ್ಥಿತರಿದ್ದರು.

Related Posts

Leave a Reply

Your email address will not be published.