HomeFresh Newsಬೀದಿಬದಿ ವ್ಯಾಪಾರಿಗಳ ಮೇಲೆ ಪೊಲೀಸ್ ದೌರ್ಜನ್ಯ: ಸಂಘದಿಂದ ಪೊಲೀಸ್ ಠಾಣೆಗೆ ಮುತ್ತಿಗೆ

ಬೀದಿಬದಿ ವ್ಯಾಪಾರಿಗಳ ಮೇಲೆ ಪೊಲೀಸ್ ದೌರ್ಜನ್ಯ: ಸಂಘದಿಂದ ಪೊಲೀಸ್ ಠಾಣೆಗೆ ಮುತ್ತಿಗೆ

ಮಂಗಳೂರು: ಬೀದಿಬದಿ ವ್ಯಾಪಾರ ಮಾಡುತ್ತಿದ್ದ ಇಬ್ಬರ ಮೇಲೆ ಬಂದರ್ ಪೊಲೀಸರು ದೌರ್ಜನ್ಯ ಎಸಗಿ ವಶಕ್ಕೆ ಪಡೆದು, ಬಳಿಕ ಬಿಡುಗಡೆ ಗೊಳಿಸಿರುವ ಘಟನೆ ಶನಿವಾರ ವರದಿಯಾಗಿದೆ.

ಮೈದಾನ್ ಬಳಿಯ ಬೀದಿ ಬದಿಯಲ್ಲಿ ವ್ಯಾಪಾರ ಮಾಡುತ್ತಿದ್ದ ಅಬ್ದುಲ್ ಖಾಲಿದ್ ಮತ್ತು ಮುಹಮ್ಮದ್ ರಿಯಾಜ್ ಎಂಬವರನ್ನು ಅವರ ತಳ್ಳಿ ಗಾಡಿಯ ಸಹಿತ ಬಂದರ್ ಪೊಲೀಸರು ಬಂಧಿಸಿದ್ದರು. ಬಂಧಿತರು ಮಹಾ ನಗರಪಾಲಿಕೆಯ ಪಟ್ಟಣ ವ್ಯಾಪಾರ ಸಮಿತಿಯಿಂದ ಅನುಮೋದಿಸಲ್ಪಟ್ಟ ಬೀದಿಬದಿ ವ್ಯಾಪಾರಿಗಳಾಗಿದ್ದರು.

ಘಟನೆಯ ಮಾಹಿತಿ ತಿಳಿದು ಪೊಲೀಸ್ ಠಾಣೆಗೆ ನೂರಾರು ಬೀದಿ ವ್ಯಾಪಾರಿಗಳೊಂದಿಗೆ ದೌಡಾಯಿಸಿದ ಬೀದಿಬದಿ ವ್ಯಾಪಾರಿಗಳ ಸಂಘದ ಗೌರವಾಧ್ಯಕ್ಷ ಹಾಗೂ ಡಿವೈಎಫ್ಐ ದ.ಕ. ಜಿಲ್ಲಾಧ್ಯಕ್ಷ ಬಿ.ಕೆ. ಇಮ್ತಿಯಾಝ್ ಮತ್ತು ಸಂಘದ ಪದಾಧಿಕಾರಿಗಳು ಪೊಲೀಸರ ದೌರ್ಜನ್ಯವನ್ನು ಖಂಡಿಸಿ ಪ್ರತಿಭಟನೆಯ ಎಚ್ಚರಿಕೆ ನೀಡಿದ ಪರಿಣಾಮ ಬಂಧಿತರಿಬ್ಬರನ್ನು ಬಿಡುಗಡೆಗೊಳಿಸಿದ್ದಾರೆ ಎಂದು ತಿಳಿದು ಬಂದಿದೆ.

ಅಲ್ಲದೆ, ಬಂಧಿಸಲ್ಪಟ್ಟಿದ್ದವರು ವ್ಯಾಪಾರ ಮಾಡುತ್ತಿದ್ದ ಮೈದಾನ್ ರಸ್ತೆಗೆ ಪೊಲೀಸರನ್ನು ಕರೆಸಿಕೊಂಡ ಬೀದಿಬದಿ ವ್ಯಾಪಾರಿಗಳ ಸಂಘದ ಗೌರವಾಧ್ಯಕ್ಷ ಇಮ್ತಿಯಾಝ್, ಫುಟ್ ಪಾತ್ ಮೇಲೆ ನಿರ್ಮಿಸಲಾಗಿರುವ ಕಟ್ಟಡಗಳು, ಅಂಗಡಿ, ಮಳಿಗೆಗಳನ್ನು ಮೊದಲು ತೆರವುಗೊಳಿಸಿ ಬಳಿಕ ಬಡ ಬೀದಿಬದಿ ವ್ಯಾಪಾರಿಗಳ ತಳ್ಳುಗಾಡಿಗಳನ್ನು ತೆರವು ಗೊಳಿಸುವಂತೆ ತರಾಟೆಗೆ ತೆಗೆದುಕೊಂಡರು ಎಂದು ತಿಳಿದು ಬಂದಿದೆ. ಸಂಘದ ಪದಾಧಿಕಾರಿಗಳ ತರಾಟೆಗೆ ಪೊಲೀಸರು ಹಿಂದಿರುಗಿದ್ದಾರೆ ಎಂದು ತಿಳಿದು ಬಂದಿದೆ.

mangalore news

ಬಿಡುಗಡೆ ಯಾದ ಬೀದಿವ್ಯಾಪಾರಿಗಳ ಜೊತೆ ಮೈದಾನ ರಸ್ತೆವರೆಗೆ ಮೆರವಣಿಗೆ ನಡೆಸಿ ಅದೇ ಸ್ಥಳದಲ್ಲಿ ವ್ಯಾಪಾರ ನಡೆಸುವುದಾಗಿ ಪಟ್ಟು ಹಿಡಿದ ಸಂಘದ ಮುಖಂಡರು ಅಲ್ಲೇ ಮತ್ತೆ ವ್ಯಾಪಾರ ಆರಂಭಿಸಿದರು ಮತ್ತು ನಗರದಲ್ಲಿ ಬಡ ಬೀದಿ ವ್ಯಾಪಾರಿಗಳು ತಮ್ಮ ಬದುಕಿಗಾಗಿ ವ್ಯಾಪಾರ ಮಾಡಿದರೆ ಬಂಧನ ಕೇಸು ಹಾಕಲಾಗುತ್ತದೆ ಶ್ರೀಮಂತರು ಬೀದಿಯಲ್ಲಿ ಆಹಾರದ ಉತ್ಸವ ನಡೆಸಿದರೆ ರಸ್ತೆಗಳನ್ನು ಮುಚ್ಚಿ ವಾಹನಗಳನ್ನು ತಡೆದು ರಸ್ತೆಯಲ್ಲೇ ಕಸಗಳನ್ನು ರಾಶಿ ಹಾಕುವವರಿಗೆ ಪೊಲೀಸ್ ಕಾವಲಿನಲ್ಲಿ ಅವಕಾಶ ನೀಡಲಾಗುತ್ತಿದೆ ಎಂದು ಬೀದಿ ವ್ಯಾಪಾರಿಗಳು ಅಸಮಾಧಾನ ವ್ಯಕ್ತಪಡಿಸಿದರು

ಈ ಸಂಧರ್ಭದಲ್ಲಿ ಸಂಘದ ಅಧ್ಯಕ್ಷರಾದ ಮೊಹಮ್ಮದ್ ಮುಸ್ತಫಾ, ಪ್ರಧಾನ ಕಾರ್ಯದರ್ಶಿ ಹರೀಶ್ ಪೂಜಾರಿ, ಮುಖಂಡರಾದ ಸಂತೋಷ್ ಆರ್.ಎಸ್, ಆಸೀಫ್ ಬಾವ ಉರುಮನೆ, ಆನಂದ, ರಹಿಮಾನ್ ಅಡ್ಯಾರ್, ನೌಶಾದ್ ಉಳ್ಳಾಲ, ರಿಯಾಜ್ ಎಲ್ಯರ್ ಪದವು, ರಿಹಾಬ್ ಬಂದರ್, ಶೌಕತ್ ಆಲಿ, ಮುಝಫ್ಫರ್ ಮುಂತಾದವರು ಉಪಸ್ಥಿತರಿದ್ದರು.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments