ಮಂಜೇಶ್ವರ: ನೆತ್ತಿಲ ಪದವು ಗೋವಿಂದ ಪೈ ರಸ್ತೆ ಕಳಪೆ ಕಾಮಗಾರಿ ಆರೋಪ
![](https://v4news.com/wp-content/uploads/2023/10/vlcsnap-2023-10-19-11h42m49s291.png)
ಮಂಜೇಶ್ವರದ ನೆತ್ತಿಲ ಪದವು ಗೋವಿಂದ ಪೈ ರಸ್ತೆಯ ಮರುಡಾಮರೀಕರಣಕ್ಕೆ ಲೋಕೋಪಯೋಗಿ ಇಲಾಖೆಯಿಂದ ಐದು ಕೋಟಿ ರೂಪಾಯಿ ಮಂಜೂರುಗೊಂಡು ಕಾಮಗಾರಿ ನಡೆಸಲಾಗಿದೆ. ಆದರೆ, ಇದೀಗ ಕಾಮಗಾರಿಯಲ್ಲಿ ಲೋಪದೋಷಗಳು ಕಂಡುಬಂದಿದೆ ಎಂದು ಸಾರ್ವಜನಿಕರು ಆರೋಪಿಸುತ್ತಿದ್ದಾರೆ.
ಈ ಮೊದಲು ರಸ್ತೆಯು 3 ಮೀಟರ್ 80 ಸೆಂಟಿ ಮೀಟರ್ ಅಗಲವಾಗಿತು. ಆದರೆ ನೂತನವಾಗಿ ನಿರ್ಮಾಣವಾಗುವ ರಸ್ತೆ 5 ಮೀಟರ್ 80 ಸೆಂಟಿ ಮೀಟರ್ ಇರಬೇಕೆಂಬುವುದು ಸ್ಥಳೀಯರ ಬೇಡಿಕೆಯಾಗಿತ್ತು. ಆದರೆ ಈಗಾಗಲೇ ಕಾಮಗಾರಿ ಆರಂಭಗೊಂಡಿರುವ ಹಿನ್ನೆಲೆಯಲ್ಲಿ ರಸ್ತೆಯನ್ನು ಅಗಲ ಮಾಡುವ ಉದ್ದೇಶವೇ ಇಲ್ಲವೆಂಬುದಾಗಿ ಇಂಜಿನಿಯರ್ ಹೇಳಿದ್ದಾರೆನ್ನಲಾಗಿದೆ.
![](https://v4news.com/wp-content/uploads/2023/10/WhatsApp-Image-2023-10-19-at-11.15.50-2-670x1024.jpeg)
ಇದೀಗ ಆರಂಭಗೊಂಡ ಕಾಮಗಾರಿಯಲ್ಲಿ ಕಳಪೆ ಕಾಮಗಾರಿಯ ಪ್ರದರ್ಶನವಾಗುತ್ತಿರುವುದಾಗಿಯೂ ಆರೋಪವಿದೆ. ಸ್ಥಳೀಯರ ಬೇಡಿಕೆಯಂತೆ ಮಂಜೇಶ್ವರ ಶಾಸಕ ಎಕೆಎಂ ಆಶ್ರಫ್ ಅವರು ರಸ್ತೆ ಕಾಮಗಾರಿ ನಡೆಸುವ ಸ್ಥಳಕ್ಕೆ ಭೇಟಿ ನೀಡಿದ ಪರಿಶೀಲನೆ ನಡೆಸಿದ್ದಾರೆ. ಸ್ಥಳೀಯರು ಈಗಾಗಲೇ ಈ ಬಗ್ಗೆ ಮುಖ್ಯಮಂತ್ರಿ, ಸಾರಿಗೆ ಸಚಿವ, ಜಿಲ್ಲಾಧಿಕಾರಿ, ಲೋಕೋಪಯೋಗಿ ಇಲಾಖೆಗೆ ಮನವಿಯನ್ನು ನೀಡಿದ್ದಾರೆ. ಸಂಬಂಧಪಟ್ಟವರು ಕೂಡಲೇ ಕಳಪೆ ಕಾಮಗಾರಿಯನ್ನು ಕೊನೆಗೊಳಿಸಿ ರಸ್ತೆಯನ್ನು ಅಗಲ ಮಾಡಿ ನಿರ್ಮಿಸಲು ಮುಂದಾಗಬೇಕಾಗಿದೆ. ಇಲ್ಲವಾದರೆ ಮುಂದಿನ ದಿನಗಳಲ್ಲಿ ಕಾಮಗಾರಿ ತಡೆದು ಪ್ರತಿಭಟಿಸಲಿರುವುದಾಗಿ ಸ್ಥಳೀಯರು ಎಚ್ಚರಿಸಿದ್ದಾರೆ.
![](https://v4news.com/wp-content/uploads/2023/10/WhatsApp-Image-2023-10-19-at-11.09.10-1-1024x1024.jpeg)