HomeFresh Newsಆಶ್ರಮದಲ್ಲಿ ಶಾಸಕ ವೇದವ್ಯಾಸ್ ಕಾಮಾತ್ ರ ಹುಟ್ಟುಹಬ್ಬ ದ ಸಂಭ್ರಮಾಚರಣೆ

ಆಶ್ರಮದಲ್ಲಿ ಶಾಸಕ ವೇದವ್ಯಾಸ್ ಕಾಮಾತ್ ರ ಹುಟ್ಟುಹಬ್ಬ ದ ಸಂಭ್ರಮಾಚರಣೆ

ಬಿಜೆಪಿಯ ರಾಜ್ಯಧ್ಯಕ್ಷರು ಹಾಗೂ ಸಂಸದರಾದ ಶ್ರೀಯುತ ನಳಿನ್ ಕುಮಾರ್ ಕಟೀಲ್ ಹಾಗೂ ಜನಪ್ರಿಯ ಶಾಸಕರು, ಬಡವರ ಬಂಧು, ಜನ ನಾಯಕ ಮಾನ್ಯ ಶ್ರೀ ಡಿ ವೇದವ್ಯಾಸ್ ಕಾಮತ್ ರವರ ಹುಟ್ಟುಹಬ್ಬದ ಪ್ರಯುಕ್ತ ಬಿಜೆಪಿ ಯುವಮೋರ್ಚಾ ದಕ್ಷಿಣ ಮಂಡಲದ ವತಿಯಿಂದ ಶ್ರದ್ದಾನಂದ ಆಶ್ರಮ ಆರ್ಯ ಸಮಾಜ ಹಾಗೂ ಭಗಿನಿ ಸಮಾಜ ಅನಾಥಾಶ್ರಮದ ಮಕ್ಕಳಿಗೆ ಉಪಹಾರದ ವ್ಯವಸ್ಥೆ ಕಲ್ಪಿಸಿ ಮಕ್ಕಳ ಸಮ್ಮುಖದಲ್ಲಿ ಶಾಸಕರ ಹುಟ್ಟುಹಬ್ಬವನ್ನು ದೀಪ ಬೆಳಗಿಸಿ ಕೇಕ್ ಕತ್ತರಿಸುವ ಮೂಲಕ ಆಚರಿಸಲಾಯಿತು.

ಈ ಸಂದರ್ಭದಲ್ಲಿ ಸನ್ಮಾನ್ಯ ಶಾಸಕರಾದ ಶ್ರೀ ಡಿ ವೇದವ್ಯಾಸ್ ಕಾಮತ್ ಅವರು ಮಾತನಾಡಿ ಮಕ್ಕಳಿಗೆ ಪರೀಕ್ಷೆ ಎದುರಿಸುವ ಬಗ್ಗೆ, ಹಾಗೂ ಜೀವನದಲ್ಲಿ ಉತ್ತಮ ವ್ಯಕ್ತಿಗಳಾಗಿ ಹೇಗೆ ರೂಪಿಸಿಗೊಳ್ಳಬಹುದೆಂದು ಕೆಲವು ಸಲಹೆಗಳನ್ನು ನೀಡಿದರು. ಇದಾದ ಬಳಿಕ ಲೇಡಿಗೋಶನ್ ಆಸ್ಪತ್ರೆಯಲ್ಲಿ ಹಣ್ಣು ಹಂಪಲು ವಿತರಿಸಲಾಯಿತು. ಈ ಸಂದರ್ಭದಲ್ಲಿ ಬಿಜೆಪಿ ಯುವಮೋರ್ಚಾ ದಕ್ಷಿಣ ಮಂಡಲದ ಅಧ್ಯಕ್ಷರಾದ ಶ್ರೀ ಸಚಿನ್ ರಾಜ್ ರೈ, ಉಪಾಧ್ಯಕ್ಷರುಗಳಾದ ಶ್ರೀ ಮೌನಿಶ್ ಚೌಟ, ಶ್ರೀ ಜಯರಾಜ್ ಶೆಟ್ಟಿ, ಮಂಡಲ ಉಪಾಧ್ಯಕ್ಷರಾದ ಶ್ರೀ ದೀಪಕ್ ಪೈ, ಸ್ಥಳೀಯ ಮ ನ ಪಾ ಸದಸ್ಯರಾದ ಶ್ರೀಮತಿ ಭಾನುಮತಿ, ಯುವ ಮೋರ್ಚಾ ಜಿಲ್ಲಾ ಕಾರ್ಯದರ್ಶಿ ಶ್ರೀ ವರುಣ್ ಅಂಬಟ್,ಬಿಜೆಪಿ ಮುಖಂಡರಾದ ಶ್ರೀ ಉಮಾನಾಥ್ ಶೆಟ್ಟಿಗಾರ್, ನಿಲೇಶ್ ಕಾಮತ್, ವಸಂತ್ ಪೂಜಾರಿ,ಉತ್ತರ ಮಹಾಶಕ್ತಿ ಕೇಂದ್ರದ ಉಪಾಧ್ಯಕ್ಷರಾದ ಚರಿತ್ ಪೂಜಾರಿ, ದಕ್ಷಿಣ ಮಂಡಲ ಯುವಮೋರ್ಚಾ ಕಾರ್ಯದರ್ಶಿ ದೀಕ್ಷಿತ್, ಚರಣ್ ಶೆಟ್ಟಿ, ಯುವ ಮೋರ್ಚಾ ದಕ್ಷಿಣ ಮಹಾಶಕ್ತಿ ಕೇಂದ್ರದ ಅಧ್ಯಕ್ಷರಾದ ನಿತಿನ್ ಭಂಡಾರಿ, ಪ್ರಧಾನ ಕಾರ್ಯದರ್ಶಿ ಪ್ರೀತಮ್ ಅಂಚನ್, ಮುಖಂಡರಾದ,ಶಿವಪ್ರಸಾದ್ ಬೋಳೂರ್ ಉಪಸ್ಥಿತರಿದ್ದ

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments