ಮೂಡುಬಿದಿರೆ: ಲೋಕಾಯುಕ್ತ ಅಧಿಕಾರಿಗಳಿಂದ ಸಾರ್ವಜನಿಕ ಅಹವಾಲು ಸ್ವೀಕಾರ

ಮೂಡುಬಿದಿರೆಯ ತಾಲೂಕು ಆಡಳಿತ ಸೌಧದಲ್ಲಿ ಲೋಕಾಯುಕ್ತ ಅಧಿಕಾರಿಗಳು, ಸಾರ್ವಜನಿಕರಿಂದ ಅಹವಾಲು ಸ್ವೀಕರಿಸುವ ಕಾರ್ಯಕ್ರಮ ನಡೆಯಿತು. ನಂತರ ಲೋಕಾಯುಕ್ತ ಡಿವೈಎಸ್‍ಪಿ ಕಲಾವತಿ ಮಾಧ್ಯಮದವರಿಗೆ ಮಾಹಿತಿ ನೀಡಿ ತಾಲೂಕಿನಲ್ಲಿ ಕಂದಾಯ ಇಲಾಖೆಗೆ ಸಂಬಂಧಪಟ್ಟಂತೆ 8 ದೂರುಗಳು ಸಾರ್ವಜನಿಕರಿಂದ ಬಂದಿದ್ದು, ಆರ್ ಟಿಸಿ ಸಂಬಂಧಪಟ್ಟಂತೆ ಒಂದು ಪ್ರಕರಣವನ್ನು ಮಂಗಳವಾರ ಇತ್ಯರ್ಥ ಮಾಡಲಾಗಿದೆ. ಮೂರು ದೂರುಗಳಿಗೆ ಸೂಕ್ತ ನಮೂನೆ `ಸಲ್ಲಿಸುವಂತೆ ದೂರುದಾರರಿಗೆ ಸೂಚಿಸಲಾಗಿದೆ, ಕಂದಾಯ ಇಲಾಖೆಗೆ ಸಂಬಂಧ ಪುಟ್ಟ ಕರ್ತವ್ಯ ನಿರ್ಲಕ್ಷದ ದೂರುಗಳು ಸಾರ್ವಜನಿಕರಿಂದ ಬಂದಿದೆ ಎಂದು ಹೇಳಿದರು.ಲೋಕಾಯುಕ್ತ ಕಾನ್ಸಸ್ಟೇಬಲ್ ಸುರೇಂದ್ರ ಈ ಸಂದರ್ಭದಲ್ಲಿದ್ದರು.

Related Posts

Leave a Reply

Your email address will not be published.