HomeFresh Newsಮೂಡುಬಿದಿರೆ : 15 ನೇ ವರ್ಷದ ಪಣಪಿಲ ಜಯ-ವಿಜಯ ಜೋಡುಕರೆ ಕಂಬಳಕ್ಕೆ ಅದ್ದೂರಿಯ ಚಾಲನೆ

ಮೂಡುಬಿದಿರೆ : 15 ನೇ ವರ್ಷದ ಪಣಪಿಲ ಜಯ-ವಿಜಯ ಜೋಡುಕರೆ ಕಂಬಳಕ್ಕೆ ಅದ್ದೂರಿಯ ಚಾಲನೆ

ಮೂಡುಬಿದಿರೆ ತಾಲೂಕಿನ ಪಣಪಿಲ ಜಯ-ವಿಜಯ ಜೋಡುಕರೆ ಕಂಬಳ ಸಮಿತಿ ನೇತೃತ್ವದಲ್ಲಿ ನಡೆಯುವ 15ನೇ ವರ್ಷದ ಹೊನಲು ಬೆಳಕಿನ ಜಯ-ವಿಜಯ ಜೋಡುಕರೆ ಕಂಬಳಕ್ಕೆ ಪಣಪಿಲ ಅರಮನೆಯ ವಿಮಲ್ ಕುಮಾರ್ ಶೆಟ್ಟಿ ಶನಿವಾರ ಚಾಲನೆ ನೀಡಿದರು.

ಕಂಬಳ ಸಮಿತಿ ಗೌರವಾಧ್ಯಕ್ಷ, ಶಾಸಕ ಉಮಾನಾಥ್ ಎ. ಕೋಟ್ಯಾನ್ ಬಿಜೆಪಿ ದಕ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ, ಮಾಜಿ ಅಧ್ಯಕ್ಷ ಸುದರ್ಶನ್ ಎಂ. ನಂದೊಟ್ಟು ಪಣಪಿಲ ಕಂಬಳ ಸಮಿತಿ ಅಧ್ಯಕ್ಷ, ಯವರಾಜ್ ಜೈನ್, ದರೆಗುಡ್ಡೆ ಗ್ರಾಮ ಪಂಚಾಯತ್ ಅಧ್ಯಕ್ಷ ಅಶೋಕ್ ಶೆಟ್ಟಿ ಬೇಲೊಟ್ಟು, ಮುರಳೀಕೃಷ್ಣ ಭಟ್, ಪಿದಮಲೆ, ಮಾಂಟ್ರಾಡಿ, ಪ್ರಮೋದ್ ಕುಮಾರ್ ಆರಿಗ, ಮಜಲೋಡಿಗುತ್ತು, ಸಂತ ವಿಕ್ಟರ್ ಚರ್ಚ್ ನೆಲ್ಲಿಕಾರು ಇದರ ಧರ್ಮಗುರು ರೆ.ಫಾ। ಮೆಲ್ವಿನ್ ಡಿಸೋಜ, ಮೂಡುಬಿದಿರೆ ಪುರಸಭಾ ಉಪಾಧ್ಯಕ್ಷ ನಾಗರಾಜ್ ಪೂಜಾರಿ, ಕೊಳಕೆ ಇರ್ವತ್ತೂರು ಭಾಸ್ಕರ್ ಎಸ್. ಕೋಟ್ಯಾನ್ ಶುಭಹರಿಸಿದರು.

ಪಣಪಿಲ ಕಂಬಳ ಸಮಿತಿಯ ಅಧ್ಯಕ್ಷ ಯುವರಾಜ್ ಜೈನ್ ನಂದೊಟ್ಟು, ಕಾರ್ಯಧ್ಯಕ್ಷ ಸುಭಾಶ್ಚಂದ್ರ ಚೌಟ, ದರೆಗುಡ್ಡೆ ಪ್ರಧಾನ ಕಾರ್ಯದರ್ಶಿ ಕೆ. ಅಶ್ವಥ್ ಪಣಪಿಲ ,ಜೊತೆ ಕಾರ್ಯದರ್ಶಿ ಯೋಗೀಶ್ ನಂದೊಟ್ಟು, ದೀಕ್ಷಿತ್ ಪಣಪಿಲ, ಕೋಶಾಧಿಕಾರಿ ಜಯಶ್ಚಂದ್ರ ಎನ್., ಉಪಾಧ್ಯಕ್ಷರಾದ ಮುನಿರಾಜ್ ಹೆಗ್ಡೆ, ರಮಾನಾಥ ಸಾಲ್ಯಾನ್ ರವಿ ಪೂಜಾರಿ, ಪ್ರವೀಣ್ ಕೋಟ್ಯಾನ್ ಹಾಗೂ ಪದಾಧಿಕಾರಿಗಳು, ಜಿಲ್ಲಾ ತೀರ್ಪುಗಾರರ ಸಮಿತಿಯ ಸಂಚಾಲಕ ವಿಜಯ ಕುಮಾರ್ ಕಂಗಿನ ಮನೆ, ಇಟಲ ಸೋಮನಾಥೇಶ್ವರ ದೇವಸ್ಥಾನದ ಕಾರ್ಯಧ್ಯಕ್ಷ ಸುಕೇಶ್ ಶೆಟ್ಟಿ, ಕಲ್ಲೇರಿ ಉಮಲತ್ತಡೆ. ಗರಡಿಯ ಅಧ್ಯಕ್ಷ ಪ್ರವೀಣ್ ಭಟ್ ಕಾನಂಗಿ, ವಕೀಲ ಮಯೂರಕೀರ್ತಿ, ಅಳಿಯೂರು,
ಮೂಡುಬಿದಿರೆ ಕಂಬಳ ಸಮಿತಿಯ ಪ್ರಧಾನ ಕಾರ್ಯದರ್ಶಿ ರಂಜಿತ್ ಪೂಜಾರಿ, ನವೋದಯ ಅಳಿಯೂರು ರುಕ್ಕಯ್ಯ ಪೂಜಾರಿ ಭಾಗವಹಿಸಿದ್ದರು.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments