HomeFresh Newsಪೂರ್ಣಿಮಾ ಸುರೇಶ್ ಉಡುಪಿ ಮತ್ತು ಕಾವ್ಯಶ್ರೀ ಮಹಾಗಾಂವಕರ ಕಲಬುರ್ಗಿ ಅವರಿಗೆ 2024ರ ಸಾಲಿನ ಮುದ್ದಣ...

ಪೂರ್ಣಿಮಾ ಸುರೇಶ್ ಉಡುಪಿ ಮತ್ತು ಕಾವ್ಯಶ್ರೀ ಮಹಾಗಾಂವಕರ ಕಲಬುರ್ಗಿ ಅವರಿಗೆ 2024ರ ಸಾಲಿನ ಮುದ್ದಣ ಕಾವ್ಯ ಪ್ರಶಸ್ತಿ

ಮೂಡುಬಿದಿರೆ : ಕಾಂತಾವರ ಕನ್ನಡ ಸಂಘದ ಪಠೇಲ್ ಪುನರೂರು ವಾಸುದೇವರಾವ್ ಟ್ರಸ್ಟ್ ಪ್ರಾಯೋಜಕತ್ವದ 2024ರ ಸಾಲಿನ ಪ್ರತಿಷ್ಠಿತ ಮುದ್ದಣ ಕಾವ್ಯ ಪ್ರಶಸ್ತಿಯನ್ನು ಉಡುಪಿಯ ಪೂರ್ಣಿಮ ಸುರೇಶ್ ಅವರ ‘ಸಂತೆಯೊಳಗಿನ ಏಕಾಂತ’ ಮತ್ತು ಕಲಬುರ್ಗಿಯ ಕಾವ್ಯಶ್ರೀ ಮಹಾಗಾಂವಕರ ಅವರ ‘ಒಲವ ಒರತೆಯ ಜಾಡಿನಲ್ಲಿ’ ಎಂಬ ಎರಡು ಹಸ್ತಪ್ರತಿಗಳು ಗೆದ್ದುಕೊಂಡಿವೆ.

ಈ ಎರಡೂ ಹಸ್ತಪ್ರತಿಗಳು ತೀರ್ಪುಗಾರರಿಂದ ಸಮಾನ ಅಂಕಗಳನ್ನು ಪಡೆದಿರುವುದರಿಂದ ಎರಡು ಹಸ್ತಪ್ರತಿಗಳನ್ನು ಕೂಡಾ ಪ್ರಶಸ್ತಿಗೆ ಆಯ್ಕೆ ಮಾಡಿರುವುದಾಗಿ ಕನ್ನಡ ಸಂಘದ ಸ್ಥಾಪಕಾಧ್ಯಕ್ಷ ಡಾ.ನಾ.ಮೊಗಸಾಲೆ ಅವರು ಘೋಷಿಸಿದ್ದಾರೆ. ಈ ಸಾಲಿನ ಸ್ಪರ್ಧೆಗೆ ಐವತ್ತ ಒಂಬತ್ತು ಹಸ್ತಪ್ರತಿಗಳು ಬಂದಿದ್ದು ಪ್ರಸಿದ್ಧ ವಿಮರ್ಶಕ ಮತ್ತು ಕತೆಗಾರ ಬೆಳಗೋಡು ರಮೇಶ ಭಟ್ (ವಿಭಾವರಿ ಭಟ್), ಮೈಸೂರು ಮತ್ತು ಹೊಸಪೀಳಿಗೆಯ ಮಹತ್ವದ ವಿಮರ್ಶಕರಾಗಿ ಬೆಳೆಯುತ್ತಿರುವ ವಿಕಾಸ ಹೊಸಮನಿ ಹಾವೇರಿ ಹಾಗೂ ಡಾ. ರವಿಶಂಕರ ಜಿ.ಕೆ. ಉಜಿರೆ ಅವರುಗಳು ನೀಡಿದ ಅಂಕಗಳ ಆಧಾರದಲ್ಲಿ ಈ ಪ್ರಶಸ್ತಿಗಳನ್ನು ನಿರ್ಣಯಿಸಲಾಗಿದೆ.
1979ರಲ್ಲಿ ನಂದಳಿಕೆಯ ವರಕವಿ ಮುದ್ದಣನ ಹೆಸರಿನಲ್ಲಿ ಸ್ಥಾಪಿಸಲಾದ ಈ ಪ್ರಶಸ್ತಿಯು ತಲಾ ಹತ್ತು ಸಾವಿರದ ಗೌರವ ಸಂಭಾವನೆ, ತಾಮ್ರಪತ್ರ ಮತ್ತು ಸನ್ಮಾನವನ್ನು ಒಳಗೊಂಡಿದ್ದು ಪ್ರತೀ ವರುಷದಂತೆ ಈ ವರುಷದ ಪ್ರಶಸ್ತಿ ಪ್ರದಾನ ಸಮಾರಂಭವು 2025ರ ಫೆಬ್ರವರಿ ತಿಂಗಳಲ್ಲಿ ಕಾಂತಾವರದ ‘ಕನ್ನಡ ಭವನ’ದಲ್ಲಿ ನಡೆಯಲಿದ್ದು ಪ್ರಶಸ್ತಿಯ ಪ್ರಾಯೋಜಕರಾದ ಧರ್ಮದರ್ಶಿ ಶ್ರೀ ಹರಿಕೃಷ್ಣ ಪುನರೂರು ಅವರು ಪ್ರಶಸ್ತಿ ಪ್ರದಾನವನ್ನು ನೆರವೇರಿಸಲಿರುವರು ಎಂದು ಸಂಘದ ಪ್ರಧಾನ ಕಾರ್ಯದರ್ಶಿ ಸದಾನಂದ ನಾರಾವಿ ತಿಳಿಸಿದ್ದಾರೆ.

add - BDG
RELATED ARTICLES

LEAVE A REPLY

Please enter your comment!
Please enter your name here

Most Popular

Recent Comments