HomeFresh Newsಮೂಡುಬಿದಿರೆ : ವಿಕಲಚೇತನ ವಿದ್ಯಾರ್ಥಿಗಳಿಗೆ ಸಾಧನಾ ಸಲಕರಣೆ ವಿತರಣೆ

ಮೂಡುಬಿದಿರೆ : ವಿಕಲಚೇತನ ವಿದ್ಯಾರ್ಥಿಗಳಿಗೆ ಸಾಧನಾ ಸಲಕರಣೆ ವಿತರಣೆ

ಮೂಡುಬಿದಿರೆ: ಕ್ಷೇತ್ರ ಸಮನ್ವಯ ಸಂಪನ್ಮೂಲ ಕೇಂದ್ರ ಮೂಡುಬಿದಿರೆ ಇಲ್ಲಿ ಮಂಗಳವಾರ ವಲಯದ 15 ವಿಕಲಚೇತನ ವಿದ್ಯಾರ್ಥಿಗಳಿಗೆ ಸಾಧನ ಸಲಕರಣೆಗಳನ್ನು ವಿತರಿಸಲಾಯಿತು.

ಕ್ಷೇತ್ರದ ಶಾಸಕ ಉಮಾನಾಥ ಕೋಟ್ಯಾನ್ ಅವರು ಸಾಧನ ಸಲಕರಣೆ ವಿತರಿಸಿ ಮಾತನಾಡಿ ಪೋಷಕರು ತಮ್ಮ ಮಕ್ಕಳಿಗೆ ಮತ್ತಷ್ಟು ಉತ್ತೇಜನ ನೀಡಿ ಈ ಮಕ್ಕಳು ಮುಖ್ಯವಾಹಿನಿ ಬರುವಂತೆ ಮಾಡಬೇಕು. ಸರ್ಕಾರದ ವ್ಯವಸ್ಥೆ ಮತ್ತು ಇಲಾಖೆಯ ಅಧಿಕಾರಿಗಳೊಂದಿಗೆ ಸಹಯೋಗದಿಂದ ಸಲಕರಣೆಗಳ ಸದುಪಯೋಗ ಪಡೆದುಕೊಳ್ಳಬೇಕೆಂದರು.

ಕ್ಷೇತ್ರ ಶಿಕ್ಷಣಾಧಿಕಾರಿ ಡಾ.ರಾಜಶ್ರೀ ಬಿ.,ಪತ್ರಾಂಕಿತ ವ್ಯವಸ್ಥಾಪಕರಾದ ನರೇಶ್ ನಾಯಕ್, ಕ್ಷೇತ್ರ ಸಮನ್ವಯಾಧಿಕಾರಿಗಳಾದ ಸೌಮ್ಯ ಎನ್.,ನಗರ ಪುನರ್ವಸತಿ ಕಾರ್ಯಕರ್ತೆ ಕುಮಾರಿ ಸವಿತಾ, ಕ.ರಾ.ಸ.ನೌ.ಸಂಘದ ಅಧ್ಯಕ್ಷ ನಾಗೇಶ್ ಎಸ್. ರವರು ಉಪಸ್ಥಿತರಿದ್ದರು.
ಬಿ.ಐ.ಈ.ಆರ್.ಟಿ ಸುಶೀಲಾರವರು ಪ್ರಾಸ್ತಾವಿಕ ಮಾತುಗಳನ್ನಾಡಿದ್ದರು. ಬಿ.ಐ.ಈ.ಆರ್.ಟಿ. ಜ್ಯೋತಿ ಡಿಸೋಜ ವಿದ್ಯಾರ್ಥಿಗಳ ಪಟ್ಟಿ ವಾಚಿಸಿದ್ದರು. ಬಿ.ಐ.ಈ.ಆರ್.ಟಿ. ಫ್ಲೇವಿ ಡಿಸೋಜ ಕಾರ್ಯಕ್ರಮ ನಿರೂಪಿಸಿದ್ದರು.ಸಿ.ಆರ್.ಪಿ‌ಗಳಾದ ಆದರ್ಶ, ದಿನಕರ, ಮಹೇಶ್ವರಿ ಎನ್.,ನಾಗರತ್ನ ಶಿರೂರು ಸಹಕರಿಸಿದ್ದರು.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments