ನವೆಂಬರ್ 27 ರಿಂದ 29 ರ ತನಕ ನೆಲಪ್ಪಾಲು ಶ್ರೀ ವೀರಾಂಜನೇಯ ದೇವರ ಸನ್ನಿಧಿಯಲ್ಲಿ ನಡೆಯಲಿರುವ ಪಂಚಮುಖಿ ಆಂಜನೇಯ ಯಾಗದ ಪೂರ್ವಭಾವಿಯಾಗಿ ಬ್ರಹ್ಮಶ್ರೀ ಕುಂಟಾರು ರವೀಶ ತಂತ್ರಿಗಳ ಮುಖೇನ ನೆಲಪ್ಪಾಲು ಶ್ರೀ ವೀರಾಂಜನೇಯ ಸನ್ನಿಧಿಯಲ್ಲಿ ಪ್ರಾರ್ಥನೆ ಸಲ್ಲಿಸಲಾಯಿತು.

ಈ ಸಂದರ್ಭ ಬಿಜೆಪಿ ಮಾಜಿ ರಾಜ್ಯಾಧ್ಯಕ್ಷರಾದ ನಳಿನ್ ಕುಮಾರ್ ಕಟೀಲ್, ನಗರಸಭಾ ಮಾಜಿ ಅಧ್ಯಕ್ಷರಾದ ಹಾಗು ಕ್ಷೇತ್ರ ಸಮಿತಿಯ ಗೌರವಾಧ್ಯಕ್ಷರಾದ ಜೀವಂಧರ್ ಜೈನ್, ಅಧ್ಯಕ್ಷರಾದ ಸಂಕಪ್ಪ ಗೌಡ, ಮುರಳೀಕೃಷ್ಣ ಹಸಂತ್ತಡ್ಕ, ಉಜ್ವಲ್ ಪ್ರಭು ಹಾಗು ವಿಶ್ವ ಹಿಂದೂ ಪರಿಷತ್ತಿನ ಪದಾದಿಕಾರಿಗಳು ಉಪಸ್ಥಿತರಿದ್ದರು.



