ನೆಲ್ಯಾಡಿ: ಚಲಿಸುತ್ತಿರುವ ಲಾರಿಯಿಂದ ಜಿಗಿದು ಸಾವು

ನೆಲ್ಯಾಡಿ: ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಗುಂಡ್ಯ ಸಮೀಪದ ಅಡ್ಡಹೊಳೆ ಎಂಬಲ್ಲಿ ಚಲಿಸುತ್ತಿರುವ ಲಾರಿಯಿಂದ ಜಿಗಿದು ನಿರ್ವಾಹಕ ಸಾವನ್ನಪ್ಪಿದ ಘಟನೆ ಮಂಗಳವಾರ ಮುಂಜಾನೆ ನಡೆದಿದೆ.

ಲಕ್ಷ್ಮಣನ್ ಸೆಂಗುತ್ತುವನ್(46) ಚಿನ್ನತೂಬುರ್ ನಾಗಪಟ್ಟಿನಮ್, ತಮಿಳುನಾಡಿನ ವ್ಯಕ್ತಿ ಎಂದು ಗುರುತಿಸಲಾಗಿದೆ.

ತಮಿಳುನಾಡಿನ ಕೃಷ್ಣಗಿರಿಯಿಂದ ಕಲ್ಲಂಗಡಿಯನ್ನು ತುಂಬಿಕೊಂಡು ಮಂಗಳೂರಿಗೆ ಬರುತ್ತಿದ್ದ ಲಾರಿಯು ಗುಂಡ್ಯ ಸಮೀಪದ ಅಡ್ಡಹೊಳೆ ತಲುಪುತಿದ್ದಂತೆ ಏಕಾಏಕಿಯಾಗಿ ನಿರ್ವಾಹಕ ಲಾರಿಯಿಂದ ಜಿಗಿದು ರಸ್ತೆಗೆ ಬಿದ್ದು ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ.

ಮೃತ ದೇಹವನ್ನು ಪುತ್ತೂರಿನ ಶವಗಾರಕ್ಕೆ ಕೊಂಡಯ್ಯಲಾಗಿದೆ.ಘಟನಾ ಸ್ಥಳಕ್ಕೆ ನೆಲ್ಯಾಡಿ ಹೊರ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.

Related Posts

Leave a Reply

Your email address will not be published.