ತುಳುನಾಡಿನ ಮೌಖಿಕ ಸಾಹಿತ್ಯ : ಇತಿಹಾಸ, ಪರಂಪರೆಯ ಕೊಂಡಿಗಳು ; ಡಾ .ತುಕರಾಮ ಪೂಜಾರಿ

ಮಂಗಳೂರು : ತುಳುನಾಡಿನ ಮೌಖಿಕ ಸಾಹಿತ್ಯಿಕ ರೂಪಕಗಳನ್ನು ಉಲ್ಲೇಖ ಮಾಡದೆ ತುಳುನಾಡಿನ ಇತಿಹಾಸವನ್ನು ಕಟ್ಟಿಕೊಡಲು ಸಾಧ್ಯವಿಲ್ಲ ಎಂದು ರಾಣಿ ಅಬ್ಬಕ್ಕ ಅಧ್ಯಯನ ಕೇಂದ್ರದ ನಿರ್ದೇಶಕ ಡಾ. ತುಕರಾಮ ಪೂಜಾರಿ ಅವರು ಹೇಳಿದರು.
ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಹಾಗೂ ಕೂಳೂರಿನ ಯೆನೆಪೋಯ ಕಾಲೇಜಿನ ಭಾಷಾಶಾಸ್ತ್ರ ವಿಭಾಗ ಹಾಗೂ ಸಾಹಿತ್ಯ ಸಂಘದ ಸಹಯೋಗದಲ್ಲಿ ಆಯೋಜಿಸಲಾದ ‘ತುಳು ಸಾಹಿತ್ಯ ಸಾಂಸ್ಕೃತಿಕ ಬದುಕು’ ವಿಚಾರ ಕೂಟದಲ್ಲಿ ಅವರು ದಿಕ್ಸೂಚಿ ಭಾಷಣ ಮಾಡಿದರು.
ತುಳು ಭಾಷೆಯಲ್ಲಿ ಇರುವ ಸಂಧಿ, ಪಾಡ್ದನ, ಉರಲ್ , ಎದುರು ಕಥೆಗಳು ಅಗಾಧವಾದ ಜ್ಞಾನ ಭಂಡಾರದ ಪ್ರತೀಕಗಳಾಗಿವೆ, ಈ ಮೌಖಿಕ ಸಾಹಿತ್ಯಗಳಲ್ಲಿ ಅಪಾರವಾದ ಮಾಹಿತಿಯ ಕಣಜವೇ ಇದೆ. ಈ ಮಾಹಿತಿಯ ಮೂಲಕ ತುಳುನಾಡಿನ ಇತಿಹಾಸ ಹಾಗೂ ಪರಂಪರೆಯನ್ನು ಅರಿತುಕೊಳ್ಳಲು ಸಾಧ್ಯವಾಗುವುದು ಎಂದು ಡಾ.ತುಕರಾಮ ಪೂಜಾರಿ ಅವರು ಹೇಳಿದರು.
ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ತಾರಾನಾಥ ಗಟ್ಟಿ ಕಾಪಿಕಾಡ್ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ಶಾಲಾ ಕಾಲೇಜ್ಗಳಲ್ಲಿ ತುಳು ಭಾಷೆಯ ಕಾರ್ಯಕ್ರಮ ಆಯೋಜಿಸುವ ಮೂಲಕ ಹೊಸ ತಲೆಮಾರಿಗೆ ತುಳುವಿನ ಬಗ್ಗೆ ಅಭಿರುಚಿ, ಅಭಿಮಾನವನ್ನು ಮೂಡಿಸುವ ಕೆಲಸವನ್ನು ಮಾಡಿಕೊಂಡು ಬರಲಾಗುತ್ತಿದೆ ಎಂದರು.

ಕಾರ್ಯಕ್ರಮದ ಮುಖ್ಯಗಳಾಗಿ ಪಾಲ್ಗೊಂಡು ಮಾತನಾಡಿದ ಯೆನೆಪೋಯ ಹೋಮಿಯೋಪಥಿಕ್ ವೈದ್ಯಕೀಯ ಕಾಲೇಜ್ ಹಾಗೂ ಆಸ್ಪತ್ರೆಯ ಅಧೀಕ್ಷಕ ಡಾ.ಶಿವಪ್ರಸಾದ್ ಕೆ, ,ಇಂತಹ ಕಾರ್ಯಕ್ರಮದ ಮೂಲಕ ತುಳು ಇನ್ನಷ್ಟ ಪಸರಿಸಲು ಸಾಧ್ಯವಾಗುತ್ತದೆ ಎಂದು ಹೇಳಿದರು.

ಕಾಲೇಜಿನ ಪ್ರಾಂಶುಪಾಲ ಪ್ರೊ.ಜೀವನ್ ರಾಜ್ ಕುತ್ತಾರ್ ಅಧ್ಯಕ್ಷತೆ ವಹಿಸಿ, ಮಾತನಾಡಿ,ಒಂದು ಕಾಲದಲ್ಲಿ ತುಳು ಭಾಷೆಯಿಂದ ಉದ್ದಿಮೆಯನ್ನ ರೂಪುಗೊಂಡಿತು. ಭಾಷೆಯ ಮುಖಾಂತರ ಒಡನಾಟ ಮೂಡುತ್ತಿದೆ. ಜೊತೆಗೆ ಸೌಹಾರ್ದ ಮೂಡಿಸುವ ಕೆಲಸ ಆಗ್ತಾ ಇದೆ ಎಂದು ಹೇಳಿದರು.

ಈ ವೇಳೆ ಉಪ ಪ್ರಿನ್ಸಿಪಾಲರಾದ ಶರೀನಾ ಪಿ., ನಾರಾಯಣ ಸುಕುಮಾರ್ ಎ., ಭಾಷಾಶಾಸ್ತ್ರ ವಿಭಾಗ ಮುಖ್ಯಸ್ಥರಾದ ಶಾಲಿನಿ ಸಿಕ್ವೇರಾ, ಮಾನವಿಕ ವಿಭಾಗದ ಡೀನ್ ಪ್ರೊ. ವಸಂತ ಕುಮಾರ್, ಅಕಾಡೆಮಿ ಸದಸ್ಯ ಸಂಚಾಲಕ ಪಾಂಗಾಳ ಬಾಬು ಕೊರಗ ಮೊದಲಾದವರು ಉಪಸ್ಥಿತರಿದ್ದರು.
ಯೆನೆಪೋಯ ಕಾಲೇಜ್ನ ಸಾಹಿತ್ಯ ಸಂಘ ಸಂಯೋಜಕ ಡಾ.ದಿನಕರ ಪಚ್ಚನಾಡಿ ಸ್ವಾಗತಿಸಿದರು. ಉಪನ್ಯಾಸಕಿ ಪ್ರಿಯಾ ನಿರೂಪಿಸಿದರು. ಡಾ.ರತ್ನಾಕರ ಶೆಟ್ಟಿ ವಂದಿಸಿದರು.

Related Posts

Leave a Reply

Your email address will not be published.