HomeFresh Newsಪೋಷಣ್ ಮಾಸಾಚರಣೆ ಕಾರ್ಯಕ್ರಮ

ಪೋಷಣ್ ಮಾಸಾಚರಣೆ ಕಾರ್ಯಕ್ರಮ

ಉಪ್ಪುಂದ ಗ್ರಾಮ ಪಂಚಾಯತ್ ಆಶ್ರಯದಲ್ಲಿ ಗುರುವಾರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಡುಪಿ ಇವರ ಸಹಯೋಗದಲ್ಲಿ ನಡೆದ ಪೆÇೀಷಣ್ ಮಾಸಾಚರಣೆ ಕಾರ್ಯಕ್ರಮ

ಗ್ರಾಮ ಪಂಚಾಯತ್ ಉಪ್ಪುಂದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಕುಂದಾಪುರ ಉಪ್ಪುಂದ ಗ್ರಾಮ ಪಂಚಾಯತ್ ವ್ಯಾಪ್ತಿಯ 9 ಅಂಗನವಾಡಿ ಕೇಂದ್ರಗಳು ಸಹಯೋಗದಲ್ಲಿ ನಡೆದ ಪೆÇೀಷಣ್ ಅಭಿಯಾನ ಮತ್ತು ಸೀಮಂತ ಹಾಗೂ ಅನ್ನಪ್ರಾಶನ ಕಾರ್ಯಕ್ರಮ ಖಂಬದಕೋಣೆ ಸೇವಾ ಸಹಕಾರಿ ಸಭಾಭವನ ಉಪ್ಪುಂದ ಸಂಭ್ರಮದಲ್ಲಿ ನಡೆಯಿತು.

ಉಪ್ಪುಂದ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಮೋಹನ್‍ಚಂದ್ರ ಉಪ್ಪುಂದ
ಕಾರ್ಯಕ್ರಮನ ಉದ್ಘಾಟಿಸಿ ಮಾತನಾಡಿ ನಮ್ಮ ಹಿರಿಯರ ಸಾಂಪ್ರದಾಯಿಕ ಆಹಾರ ಪದ್ಧತಿ ಹಾಗೂ ನಮ್ಮ ಸುತ್ತಮುತ್ತಲ ಬೆಳೆಯುವ ಸೊಪ್ಪು ತರಕಾರಿಗಳು ಪೆÇೀಷಕಾಂಶಗಳ ಆಗರವಾಗಿದೆ. ದಿನನಿತ್ಯದ ಆಹಾರದಲ್ಲಿ ಇದನ್ನ ಉಪಯೋಗಿಸುವುದರಿಂದ ನಮಗೆ ಪೌಷ್ಟಿಕಾಂಶಗಳ ಕೊರತೆ ಉಂಟಾಗದು
ಕೇವಲ ಮಕ್ಕಳು, ಮಹಿಳೆಯರಿಗೆ ಮಾತ್ರವಲ್ಲ ಪುರುಷರಿಗೂ ಕೂಡ ಪೌಷ್ಟಿಕಾಂಶವುಳ್ಳ ಆಹಾರ ಅಗತ್ಯನಮ್ಮ ದಿನಚರ್ಯೆ, ಆಹಾರ ವಿಹಾರ ಪದ್ಧತಿ ಹಾಗೂ ಮಾನಸಿಕ ಸಂಕುಲತೆಯನ್ನು ಜೀವನದಲ್ಲಿ ಅನುಸರಿಸರಿಸುವುದೇ ನಮ್ಮ ಮೂಲ ಮಂತ್ರ. ಇದನ್ನು ಎಲ್ಲರೂ ಕೂಡ ಸರಿಯಾಗಿ ಅರ್ಥಮಾಡಿಕೊಳ್ಳಬೇಕು. ಇಂದಿನ ಯುವಜನರು ಸಾಂಪ್ರದಾಯಿಕ ಪೌಷ್ಟಿಕಾಂಶದ ಆಹಾರ ಸೇವನೆ ಬಿಟ್ಟು ಪಾಶ್ಚಿಮಾತ್ಯ ಆಹಾರದ ಕಡೆಗೆ ಒಲವು ತೋರುತ್ತಿದ್ದಾರೆ. ಇದರಿಂದ ರಕ್ತಹೀನತೆ, ಅಪೌಷ್ಟಿಕತೆ, ಬೊಜ್ಜುತನ ಉಂಟಾಗುತ್ತದೆ. ಈ ನೆಲೆಯಲ್ಲಿ ಕೇಂದ್ರ ಸರ್ಕಾರ ಆಹಾರ ಕ್ರಮಗಳ ಅರಿವು ಮೂಡಿಸಲು ಪೆÇೀಷಣ್ ಅಭಿಯಾನ ಜಾರಿಗೆ ತಂದಿದೆ ಎಂದರು.

ಮಹಿಳೆಯರು ಮನೆಯಿಂದ ತಯಾರಿಸಿ ತಂದಿರುವ ಪೌಷ್ಟಿಕಾಂಶಭರಿತ ತಿಂಡಿಗಳ ಪ್ರದರ್ಶನ ನಂತರ ಆಯ್ಕೆಯಾದ ತಿನಿಸುಗಳಿಗೆ ಬಹುಮಾನ ನೀಡಲಾಯಿತು.ಗರ್ಭಿಣಿಯರಿಗೆ ಸೀಮಂತಪೂಜೆ ನೆರವೇರಿಸಲಾಯಿತು.

ಈ ಸಂದರ್ಭದಲ್ಲಿ ಗ್ರಾಮ ಪಂಚಾಯತಿ ಉಪಾಧ್ಯಕ್ಷರಾದ ಮಹಾಲಕ್ಷ್ಮಿ ಗಾಣಿಗ, ಗ್ರಾಮ ಪಂಚಾಯತ್ ಸದಸ್ಯರಾದ ಮಂಜುನಾಥ್ ದೇವಾಡಿಗ, ಸುಶೀಲಾ ಖಾರ್ವಿ, ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಮಂಜುನಾಥ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಕುಂದಾಪುರ ಮೇಲ್ವಿಚಾರಕರಾದ ಶ್ರೀಮತಿ ರೇವತಿ, ಆರೋಗ್ಯ ಇಲಾಖೆ ಬೈಂದೂರು ಅಊಔ ಸಹನಾ,ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರು ಉಪ್ಪುಂದ ಗ್ರಾಮ ಪಂಚಾಯತ್ ವ್ಯಾಪ್ತಿ,

ಅಧ್ಯಕ್ಷರು ಮತ್ತು ಸದಸ್ಯರು ಹಾಗೂ ಮಕ್ಕಳ ಪೆÇೀಷಕರು ಅಂಗನವಾಡಿ ಬಾಲವಿಕಾಸ ಸಮಿತಿ ಉಪ್ಪುಂದ, ಉಪಸ್ಥಿತರಿದ್ದರು ಸಿಂಚನ ಸ್ವಾಗತಿಸಿದರು,
ಉಷಾ ನಿರೂಪಿಸಿದರು ಸಾವಿತ್ರಿ ವಂದಿಸಿದರು

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments