HomeFresh Newsಪುತ್ತೂರು : ಶಾಂತಾ ಪುತ್ತೂರು ಇವರಿಗೆ ಕೆಂಪಮ್ಮ ರಾಜ್ಯ ಪುರಸ್ಕಾರ

ಪುತ್ತೂರು : ಶಾಂತಾ ಪುತ್ತೂರು ಇವರಿಗೆ ಕೆಂಪಮ್ಮ ರಾಜ್ಯ ಪುರಸ್ಕಾರ

ಮೈಸೂರಿನ ಕಲಾಮಂದಿರದ ಕಿರು ರಂಗಮಂದಿರದಲ್ಲಿ ನಡೆದ ನಗೆ ಹಬ್ಬ ,ಸಾಂಸ್ಕೃತಿಕ ಕಾರ್ಯಕ್ರಮ , ಪ್ರಶಸ್ತಿ ಪ್ರದಾನ ಸಮಾರಂಭ ದಲ್ಲಿ ನಾಡಿನ ಮಹಿಳಾ ಸಾಧಕರಿಗೆ ನೀಡುವ ಕೆಂಪೇಗೌಡರ ತಾಯಿ ಕೆಂಪಮ್ಮ ನವರ ಹೆಸರಿನಲ್ಲಿ ನೀಡುವ ಕೆಂಪಮ್ಮ ರಾಜ್ಯ ಪ್ರಶಸ್ತಿ ಶಾಂತಾ ಪುತ್ತೂರು ರವರಿಗೆ ಶಿಕ್ಷಣ ಹಾಗೂ ಸಾಹಿತ್ಯ ಸೇವೆಗಾಗಿ ಲಭಿಸಿದೆ.

ಶಾಂತಾ ಪುತ್ತೂರು ಶಿಕ್ಷಕಿಯಾಗಿದ್ದು ಪ್ರಸ್ತುತ ಸರಕಾರಿ ಪ್ರೌಢಶಾಲೆ ಕಬಕ ದಲ್ಲಿ ಸೇವೆಸಲ್ಲಿಸುತ್ತಿದ್ದಾರೆ.ಸ್ನಾತಕೋತ್ತರ ಪದವೀಧರರಾಗಿದ್ದು ಯೋಗ ಡಿಪ್ಲೋಮಮಾಡಿರುವ ಇವರು ಅನೇಕ ಕವಿಗೋಷ್ಠಿ ಅಧ್ಯಕ್ಷತೆ ವಹಿಸಿದ್ದು ಹಲವು ಸಾಹಿತ್ಯ ಕಮ್ಮಟ ನಡೆಸಿರುತ್ತಾರೆ.ನಾಡಿನ ವಿವಿಧ ಪತ್ರಿಕೆಗಳಲ್ಲಿ,ದೂರದರ್ಶನದಲ್ಲಿ ಇವರ ಕವನ ಪ್ರಕಟಗೊಂಡಿದೆ. ಶಾಂತಿವನಟ್ರಸ್ಟ್ ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆ ಯ ಬಂಟ್ವಾಳ ತಾಲೂಕು ಯೋಗಸಂಘಟಕಿಯಾಗಿ,ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ಥೆ ವಿಟ್ಲ ದ ಜೊತೆ ಕಾರ್ಯದರ್ಶಿ ಯಾಗಿ ಸೇವೆ ಸಲ್ಲಿಸಿರುತ್ತಾರೆ.ಯೋಗರಾಜ್ಯ ಸಂಪನ್ಮೂಲ ವ್ಯಕ್ತಿ ಹಾಗೂ ರಾಜ್ಯಮಟ್ಟದ ಯೋಗಾಸನ ತೀರ್ಪುಗಾರರು.ಪ್ರಸ್ತುತ ಕೇಂದ್ರ ಕನ್ನಡ ಸಾಹಿತ್ಯ ವೇದಿಕೆ ಪುತ್ತೂರು ಘಟಕದ ಅಧ್ಯಕ್ಷ ರಾಗಿದ್ದು ,ಕರ್ನಾಟಕ ಚುಟುಕು ಸಾಹಿತ್ಯ ಪರಿಷತ್ತಿನ ಜಿಲ್ಲಾ ಕಾರ್ಯದರ್ಶಿ ಯಾಗಿದ್ದು ಕನ್ನಡ ಸಾಹಿತ್ಯ ಪರಿಷತ್ ಪುತ್ತೂರು ಘಟಕದ ಕಾರ್ಯಕಾರಿ ಸಮಿತಿ ಸದಸ್ಯರು.ಇವರು ಶಿಕ್ಷಣ ಜ್ಞಾನ ಪತ್ರಿಕೆ ಯವರಿಂದ ಜ್ಞಾನಸಿಂಧು ರಾಜ್ಯ ಪ್ರಶಸ್ತಿ,ಕಥಾಬಿಂದು ಪ್ರಕಾಶನದವರಿಂದ ಚೈತನ್ಯಶ್ರೀ ರಾಜ್ಯ ಪ್ರಶಸ್ತಿ,ಬರಹಗಾರರ ಬಳಗದಿಂದ ಸಾಹಿತ್ಯ ಸಿಂಧು ರಾಜ್ಯ ಪ್ರಶಸ್ತಿ,ಸಿರಿಗನ್ನಡ ವೇದಿಕೆಯಿಂದ ಗುರುಕುಲ ತಿಲಕ ಪ್ರಶಸ್ತಿ, ಬೆಳದಿಂಗಳ ಸಾಹಿತ್ಯ ಸಮ್ಮೇಳನ ಕವಿ ಕಾವ್ಯ ಸಂಭ್ರಮ ದಲ್ಲಿ ಯುಗಪುರುಷ ಅವಾರ್ಡ್ 2022ಸೇರಿದಂತೆ ಹಲವು ರಾಜ್ಯ ಪ್ರಶಸ್ತಿ ಗಳು ಲಭಿಸಿವೆ.ಗೈಡ್ಸ್ ಲಾಂಗ್ ಸರ್ವಿಸ್ ಅವಾರ್ಡ್ ,ಯೋಗಭೂಷಣ,ಗಪ್ರಶಸ್ತಿ ಪಡೆದಿರುತ್ತಾರೆ.

ವೇದಿಕೆಯಲ್ಲಿ ಡಾ.ಎಂ.ಎಸ್ ನರಸಿಂಹಮೂರ್ತಿ ಹಾಸ್ಯ ಲೇಖಕರು, ಶ್ರೀ ನಾಗೇಶ್ ಬಿ ಅಧ್ಯಕ್ಷ ರು ಜಾಗೃತಿ ಟ್ರಸ್ಟ್,ಡಾ.ಭಾಗೀರಥಿ ಡಿ.ಎಸ್ ಸಮಾಜಸೇವಕಿ,ಡಾ.ಶೇಖರ್ ಅಜೆಕಾರು ಬೆಳದಿಂಗಳು ಸಾಹಿತ್ಯ ಸಮ್ಮೇಳನ ಅಧ್ಯಕ್ಷ ರು,ಶ್ರೀ ಲಿಂಗರಾಜ ಅರಸು ಚುಟುಕು ಸಾಹಿತ್ಯ ಪರಿಷತ್ ಅಧ್ಯಕ್ಷ ರು ,ಶ್ರೀ.ಬಿ.ಧನಪಾಲ ಕನ್ನಡ ಪರ ಹೋರಾಟಗಾರರು ಮೊದಲಾದ ಗಣ್ಯರು ಉಪಸ್ಥಿತರಿದ್ದರು.

dr m v shetty
RELATED ARTICLES

LEAVE A REPLY

Please enter your comment!
Please enter your name here

Most Popular

Recent Comments