“ಕೋಟಿ-ಚೆನ್ನಯ” ಹೆಸರಿನಲ್ಲಿ ಬಸ್ ನಿಲ್ದಾಣ

ಪುತ್ತೂರು: ಇನ್ಮುಂದೆ ಪುತ್ತೂರು ಕೆಎಸ್‌ಆರ್‌ಟಿಸಿಗೆ ಬಸ್‌ ನಿಲ್ದಾಣಕ್ಕೆ ತುಳುನಾಡಿನ ಅವಳಿ ವೀರಪುತ್ರರ ಹೆಸರಿನಲ್ಲಿ “ಕೋಟಿ-ಚೆನ್ನಯ” ಬಸ್ ನಿಲ್ದಾಣ ಎಂಬುದಾಗಿ ನಾಮಕರಣ ಮಾಡಲು ಸರ್ಕಾರದ ಅನುಮೋದನೆ ನೀಡಿದೆ. ಈ ಹಿಂದೆ ಪಡುಮಲೆ ಕೋಟಿ ಚೆನ್ನಯ್ಯ ಸಂಚಲನ ಟ್ರಸ್ಟ್‌ ನಿಯೋಗದಿಂದ ಶಾಸಕ ಸಂಜೀವ ಮಠಂದೂರು ಅವರಿಗೆ ಈ ಬಗ್ಗೆ ಮನವಿ ನೀಡಲಾಗಿತ್ತು.ಈ ಪ್ರಸ್ತಾವನೆಯನ್ನು ಪರಿಶೀಲಿಸಿ, ದಕ್ಷಿಣ ಕನ್ನಡ ಜಿಲ್ಲೆ, ಪುತ್ತೂರು ನಗರದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್ ನಿಲ್ದಾ ಣಕ್ಕೆ “ಕೋಟಿ ಚೆನ್ನಯ ಬಸ್ ನಿಲ್ದಾಣ” ಎಂದು ನಾಮಕರಣ ಮಾಡಲು ಸರಕಾರದ ಅಧೀನ ಕಾರ್ಯದರ್ಶಿ ಸುತ್ತೋಲೆ ಹೊರಡಿಸಿದ್ದಾರೆ.

Related Posts

Leave a Reply

Your email address will not be published.