ಇತಿಹಾಸ ಪ್ರಸಿದ್ಧ ಪುತ್ತೂರು ಶ್ರೀ ಮಹತೋಭಾರ ಮಹಾಲಿಂಗೇಶ್ವರ ದೇವರ ವರ್ಷಾವಧಿ ಜಾತ್ರೋತ್ಸವಕ್ಕೆ ಇಂದು ಧ್ವಜಾರೋಹಣದ ಮೂಲಕ ಚಾಲನೆ ನೀಡಲಾಯಿತು.
ವೃಷಭ ಲಗ್ನ ಮುಹೂರ್ತದಲ್ಲಿ ಭಕ್ತಾಧಿಗಳ ಜಯಘೋಷದೊಂದಿಗೆ ದೇವಸ್ಥಾನದ ಪ್ರಧಾನ ಅರ್ಚಕರಾದ ವಿಎಸ್ ಭಟ್ ಹಾಗೂ ವಸಂತ ಕೆದಿಲಾಯ ಧ್ವಜಾರೋಹಣ ನೆರವೇರಿಸಿದ್ರು. ಈ ಸಂದರ್ಭದಲ್ಲಿ ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿ, ವ್ಯವಸ್ಥಾಪನ ಸಮಿತಿಯ ಅಧಯಕ್ಷರು ಸದಸ್ಯರು ಸೇರಿದಂತೆ ಭಕ್ತಾಧಿಗಳು ಪಾಲ್ಗೊಂಡಿದ್ದರು.

