ಪುತ್ತೂರು: ಅಕ್ಷಯ ಕಾಲೇಜಿನಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿ

ಅಕ್ಷಯ ಕಾಲೇಜು ಪುತ್ತೂರು ಇಲ್ಲಿನ ಇನ್ವಿಕ್ತ ಕಾಮರ್ಸ್ ಅಸೋಸಿಯೇಷನ್ ಇದರ ವತಿಯಿಂದ ದ್ವಿತೀಯ ಮತ್ತು ತ್ರಿತೀಯ ಪದವಿ ವಿದ್ಯಾರ್ಥಿಗಳಿಗೆ “ಬ್ಯಾಂಕಿಂಗ್ ಹಾಗು ಇತರ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿ” ವಿಷಯದ ಬಗ್ಗೆ ಮಾಹಿತಿ ಕಾರ್ಯಾಗಾರ ನಡೆಯಿತು.

ಈ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ್ದ ಸ್ಮಾರ್ಟ್ ಕ್ಲಾಸ್ಸಸ್ ಅಕಾಡೆಮಿ ಇದರ ತರಬೇತುದಾರರಾದ ಡಾ.ಸರಸ್ವತಿಯವರು ವಿದ್ಯಾರ್ಥಿಗಳಿಗೆ ಬ್ಯಾಂಕಿಂಗ್ ಹಾಗು ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಎದುರಿಸುವ ಸವಾಲುಗಳು ಮತ್ತು ಅದರ ತಯಾರಿಗಳ ಬಗ್ಗೆ ಮಾಹಿತಿಯನ್ನು ನೀಡಿದರು.

ತ್ರಿತೀಯ ಬಿ.ಕಾಂ ವಿದ್ಯಾರ್ಥಿನಿ ಕು.ಸಾಕ್ಷಿ ಸ್ವಾಗತಿಸಿ, ದ್ವಿತೀಯ ಬಿ.ಕಾಂ ವಿದ್ಯಾರ್ಥಿನಿ ಕು.ಅಂಜಲಿ ವಂದಿಸಿದರು. ಹಾಗು ಕಾಲೇಜಿನ ಉಪನ್ಯಾಸಕರುಗಳು ಈ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

Related Posts

Leave a Reply

Your email address will not be published.