ಪುತ್ತೂರು ತಾಲೂಕು ಶಿಕ್ಷಣ ಸಂಪನ್ಮೂಲ ಕೇಂದ್ರದ ಮಹಾಸಭೆ

ಪುತ್ತೂರು ತಾಲೂಕು ಶಿಕ್ಷಣ ಸಂಪನ್ಮೂಲ ಕೇಂದ್ರಕ್ಕೆ ಮುಂದಿನ ಎರಡು ವರ್ಷ ಅವಧಿಗೆ ನೂತನ ಅದ್ಯಕ್ಷ ಕಾರ್ಯದರ್ಶಿ ಕಾರ್ಯಕಾರಿ ಸಮೀತಿ ರಚಿಸಲಾಯಿತು.


ಶಿಕ್ಷಣ ಸಂಪನ್ಮೂಲ ಒಕ್ಕೂಟದ ಪ್ರತಿನಿಧಿಯಾಗಿ ನಾರಾಯಣ ಕಿಲಂಗೊಡಿ ಆಗಮಿಸಿದ್ದರು. ಸಲಹಾ ಸಮೀತಿಗೆ ಕಸ್ತೂರಿ ಬೊಳುವಾರ್ ಮತ್ತು ನಯನಾ ರೈ, ಪತ್ರಕರ್ತ ಸಂಶುದ್ದೀನ್ ಸಂಪ್ಯ, ನೋಟರಿ ಸಾಹಿರಾ ಜುಬೈರ್ ಇವರನ್ನು ಆಯ್ಕೆ ಮಾಡಲಾಯಿತು.
ನೂತನ ಅದ್ಯಕ್ಷರಾಗಿ ಮೊಹಮ್ಮದ್ ರಫೀಕ್ ದರ್ಬೆ, ಉಪಾದ್ಯಕ್ಷರಾಗಿ ರೋಹಿಣಿ ರಾಘವ, ಕಾರ್ಯದರ್ಶಿಯಾಗಿ ಸುಮಂಗಳಾ ಶೆಣೈ, ಜೊತೆ ಕಾರ್ಯದರ್ಶಿಯಾಗಿ ಆರ್ಲಪದವು ಅಬೂಬಕ್ಕರ್ ಕೋಶಾಧಿಕಾರಿಯಾಗಿ ವತ್ಸಲಾ ನಾಯಕ್, ಸಂಘಟನಾ ಕಾರ್ಯದರ್ಶಿಯಾಗಿ ಪ್ರಶಾಂತ್ ಮುರ, ಕಾರ್ಯಕಾರಿ ಸಮೀತಿ ಸದಸ್ಯರಾಗಿ, ಹರಿಣಾಕ್ಷಿ ಶೆಟ್ಟಿ, ಇಸ್ಮಾಯಿಲ್ ನೆಲ್ಯಾಡಿ, ಪ್ರೇಮಲತಾ ಬನ್ನೂರು, ಸುಚಿತ್ರಾ, ಅಂಬಿಕಾ, ಶಾರದಾ ಅರಸ್, ಪೂರ್ಣಿಮಾ ಮಲ್ಯ ಆಯ್ಕೆಯಾದರು.
