HomeFresh Newsಪುತ್ತೂರು: ಶಿವಮೊಗ್ಗ ಘಟನೆ ಬಗ್ಗೆ ರಾಷ್ಟ್ರೀಯ ತನಿಖಾ ತಂಡದಿಂದ ತನಿಖೆಯಾಗಲಿ, ವಿಹಿಂಪ, ಬಜರಂಗದಳ ಆಗ್ರಹ

ಪುತ್ತೂರು: ಶಿವಮೊಗ್ಗ ಘಟನೆ ಬಗ್ಗೆ ರಾಷ್ಟ್ರೀಯ ತನಿಖಾ ತಂಡದಿಂದ ತನಿಖೆಯಾಗಲಿ, ವಿಹಿಂಪ, ಬಜರಂಗದಳ ಆಗ್ರಹ

ಪುತ್ತೂರು: ಶಿವಮೊಗ್ಗದಲ್ಲಿ ಮಿಲಾದ್ ಆಚರಣೆ ಸಂದರ್ಭ ನಡೆದ ದಾಳಿಯನ್ನು ವಿಶ್ವ ಹಿಂದೂ ಪರಿಷತ್, ಬಜರಂಗಳ ತೀವ್ರವಾಗಿ ಖಂಡಿಸುತ್ತದೆ. ಈ ಘಟನೆಯಲ್ಲಿ ಭಾಗಿಯಾದವರನ್ನು ತಕ್ಷಣ ಬಂಧಿಸಿ ಸೂಕ್ತ ಶಿಕ್ಷೆ ವಿಧಿಸಬೇಕು ಎಂದು ವಿಹಿಂಪ, ಬಜರಂಗದಳ ಆಗ್ರಹಿಸಿದೆ.

ಬಜರಂಗಳ ದಕ್ಷಿಣಪ್ರಾಂತ ಸಹಸಂಯೋಜಕ ಮುರಳೀಕೃಷ್ಣ ಹಸಂತಡ್ಕ ಸುದ್ದಿಗೋಷ್ಠಿಯಲ್ಲಿ ಖಂಡನೆ ವ್ಯಕ್ತಪಡಿಸಿ, ಮಿಲಾದ್ ಮೆರವಣಿಗೆ ವೇಳೆ ಅಳವಡಿಸಿದ ಬೃಹತ್ ಕಟೌಟ್‍ಗಳನ್ನು ಪೆÇಲೀಸರು ತೆಗೆಸಿದ್ದಾರೆ. ಇದನ್ನು ನೆಪವಾಗಿಟ್ಟುಕೊಂಡು ರ್ಯಾಲಿ ವೇಳೆ ತಳವಾರು ಹಿಡಿದ ಸುಮಾರು 400ಕ್ಕೂ ಅಧಿಕ ಮಂದಿ ಗ್ರಾಮವೊಂದರ ಹಿಂದೂಗಳ ಮನೆಗಳಿಗೆ ನುಗ್ಗಿ ಹಿಂದೂಗಳ ಮೇಲೆ ಹಲ್ಲೆ ನಡೆಸಿರುವುದು ಸಹಿಸಲಸಾಧ್ಯ ಎಂದ ಅವರು, ತಕ್ಷಣ ಘಟನೆಯನ್ನು ರಾಷ್ಟ್ರೀಯ ತನಿಖಾ ತಂಡಕ್ಕೆ ತನಿಖೆಗಾಗಿ ಒಪ್ಪಿಸಿ ತಪ್ಪಿತಸ್ಥರಿಗೆ ಸೂಕ್ತ ಶಿಕ್ಷೆ ವಿಧಿಸಬೇಕು.

ಮುಂದೆ ಇಂತಹಾ ಘಟನೆ ನಡೆಯಬಾರದು. ಈ ವಿಚಾರದಲ್ಲಿ ಸರಕಾರ ತುಷ್ಠೀಕರಣ ಮಾಡಿದರೆ ಮುಂದೆ ಆಗಬಹುದಾದ ಅನಾಹುತಕ್ಕೆ ಸರಕಾರ ಕಾರಣವಾಗಲಿದೆ ಎಂದು ಎಚ್ಚರಿಕೆ ನೀಡಿದರು.

ಸುದ್ದಿಗೋಷ್ಠಿಯಲ್ಲಿ ಶೌರ್ಯ ಜಾಗರಣ ರಥಯಾತ್ರೆ ಸ್ವಾಗತ ಸಮಿತಿ ಅಧ್ಯಕ್ಷ ಕಿಶೋರ್ ಕುಮಾರ್ ಬೊಟ್ಯಾಡಿ, ಕಾರ್ಯದರ್ಶಿ ವಿರೂಪಾಕ್ಷ ಭಟ್ ಮಚ್ಚಿಮಲೆ, ಸಂಚಾಲಕ ಕೃಷ್ಣಪ್ರಸಾದ್ ಬೆಟ್ಟ, ವಿಹಿಂಪ ಜಿಲ್ಲಾ ಸಹಸಂಚಾಲಕ ಶ್ರೀಧರ್ ತೆಂಕಿಲ ಉಪಸ್ಥಿತರಿದ್ದರು.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments