ದಕ್ಷಿಣ ಕನ್ನಡ ಜಿಲ್ಲಾ ಗೃಹರಕ್ಷಕದಳದ ಪುತ್ತೂರು ಘಟಕವು ಸುಮಾರು 50 ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದು, ಹೊಸ ಕಛೇರಿ ನಿರ್ಮಿಸುವ ಸಲುವಾಗಿ ಸರಕಾರದಿಂದ 10 ಸೆಂಟ್ಸ್ ಖಾಲಿ ಜಾಗ ಕೊಟೆಚಾ ಸಭಾಂಗಣದ ಸಮೀಪದ ಶಿವನಗರದಲ್ಲಿ ಮಂಜೂರಾಗಿದೆ.

ದಕ್ಷಿಣ ಕನ್ನಡ ಜಿಲ್ಲಾ ಸಮಾದೇಷ್ಟರಾದ ಡಾ|| ಮುರಲೀ ಮೋಹನ್ ಚೂಂತಾರು ಅವರು ಪುತ್ತೂರು ಘಟಕಕ್ಕೆ ಭೇಟಿ ನೀಡಿ ಹೊಸತಾಗಿ ಮಂಜೂರಾದ ಜಾಗದ ವೀಕ್ಷಣೆ ಮಾಡಿದರು. ಈ ಸಂದರ್ಭದಲ್ಲಿ ಪುತ್ತೂರು ಘಟಕದ ಘಟಕಾಧಿಕಾರಿ ಅಭಿಮನ್ಯು ರೈ, ಹಿರಿಯ ಗೃಹರಕ್ಷಕರಾದ ಜಗನ್ನಾಥ್, ಸುದರ್ಶನ್ ಜೈನ್ ಹಾಗೂ ಗೃಹರಕ್ಷಕ ಗೃಹರಕ್ಷಕಿಯರು ಉಪಸ್ಥಿತರಿದ್ದರು.
