HomeFresh Newsಪುತ್ತೂರು ನಗರ ವ್ಯಾಪ್ತಿಯಲ್ಲಿ ಗಾಳಿಮಳೆ- ಮರ ಬಿದ್ದು ಮನೆಗೆ ಹಾನಿ

ಪುತ್ತೂರು ನಗರ ವ್ಯಾಪ್ತಿಯಲ್ಲಿ ಗಾಳಿಮಳೆ- ಮರ ಬಿದ್ದು ಮನೆಗೆ ಹಾನಿ

ಪುತ್ತೂರು: ಭಾನುವಾರ ಸಂಜೆ ಪುತ್ತೂರು ನಗರ ವ್ಯಾಪ್ತಿಯಲ್ಲಿ ಭಾರೀ ಗಾಳಿಮಳೆ ಬಂದಿದ್ದು ಬಪ್ಪಳಿಗೆಯ ಸಿಂಗಾಣಿ ಎಂಬಲ್ಲಿ ಮನೆಯ ಮೇಲೆ ಮರ ಬಿದ್ದು ಬಾಗಶ: ಜಖಂಗೊಂಡಿದ್ದು, ಮನೆ ಮಂದಿ ಅಪಾಯದಿಂದ ಪಾರಾದ ಘಟನೆ ನಡೆದಿದೆ.

ಬಪ್ಪಳಿಗೆಯ ಸಿಂಗಾಣಿಯ ಕಮಲ ಎಂಬaವರ ಮನೆಯ ಮಾಡಿನ ಶೀಟು ಗಾಳಿಗೆ ಹಾರಿ ಹೋಗಿದ್ದು, ಉರ್ಲಾಂಡಿಯಲ್ಲಿ ಶೋಭಾ ಹೆಗ್ಡೆ ಎಂಬವರ ಮನೆಯ ಮೇಲೆ ಮರ ಬಿದ್ದು ಬಾಗಶ: ಜಖಂಗೊಂಡಿದೆ. ಮನೆ ಮಂದಿ ಅಪಾಯದಿಂದ ಪಾರಾಗಿದ್ದಾರೆ.

ಘಟನೆಯ ಸುದ್ದಿ ತಿಳಿದು ತಕ್ಷಣ ಸ್ಥಳಕ್ಕೆ ಭೇಟಿ ನೀಡಿದ ಶಾಸಕರು ಸಿಂಗಾನಿಯ ಕಮಲ ಅವರ ಮನೆಗೆ ತಾತ್ಕಾಲಿಕವಾಗಿ ಶಾಸಕರು ಟರ್ಪಾಲ್ ಹಾಕಿಸಿದ್ದಾರೆ. ಉರ್ಲಾಂಡಿಗೆ ಭೇಟಿ ನೀಡಿದ ಶಾಸಕರು ಮನೆ ಮೇಲೆ ಬಿದ್ದಿರುವ ಮರವನ್ನು ತಕ್ಷಣ ತೆರವು ಮಾಡುವಂತೆ ಸೂಚನೆಯನ್ನು ನೀಡಿದ್ದಾರೆ. ತಾತ್ಕಾಲಿಕವಾಗಿ ಎರಡೂ ಮನೆಗೂ ನೆರವಿನ ಭರವಸೆಯನ್ನು ನೀಡಿದ್ದಾರೆ. ಬಿಸಿಲಿನಿಂದ ಕಂಗೆಟ್ಟಿದ್ದ ಪುತ್ತೂರು ಜನತೆಗೆ ಮೊದಲ ಮಳೆಯೇ ಶಾಕ್ ಕೊಟ್ಟಿದೆ.

ಈ ಸಂದರ್ಭದಲ್ಲಿ ಕಾಂಗ್ರೆಸ್ ಕಾರ್ಯಕರ್ತರಾದ ದಿನೇಶ್ ಪಿ ವಿ, ಮೋನು ಬಪ್ಪಳಿಗೆ, ಇಸ್ಮಾಯಿಲ್ ಬೊಳುವಾರು, ವಿಲ್ಫಿ, ಕೇಶವ ಉಲಾಂಡಿ, ಕುಮಾರ್ ಉರ್ಲಾಂಡಿ, ಸೂರ್ಯ,ವಿಲ್ಪ್ರೆಡ್ ಪೆರ್ನಾಂಡಿಸ್, ಶ್ರೀಕಾಂತ್, ದೀಕ್ಷಿತ್ ಮೊದಲಾದವರು ಉಪಸ್ತಿತರಿದ್ದರು.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments