ಸೇವಾ ಸಾಗರ ಟ್ರಸ್ಟ್ ನಿಂದ ನೂತನ ಕಟ್ಟಡ

ಸೇವಾಸಾಗರ ಟ್ರಸ್ಟ್ ಸಾಗರದ ನೂತನ ಕಟ್ಟಡದ ಶಿಲಾನ್ಯಾಸವನ್ನು ಸಂಸದರಾದ ಬಿ. ವೈ ರಾಘವೇಂದ್ರ ಅವರು ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು ಜನರ ಸೇವೆಗಾಗಿ ಸೇವಸಾಗರ ಟ್ರಸ್ಟ್ ಮುಂದೆ ಬಂದಿದ್ದು, ಇದೀಗ ನೂತನ ಕಟ್ಟಡದ ಶಿಲಾನ್ಯಾಸವನ್ನು ನೆರವೇರಿಸಲಾಗಿದೆ ಎಂದರು. ಈ ಸಂದರ್ಭದಲ್ಲಿ ಶಾಸಕರಾದ ಹೆಚ್ ಹರತಾಳು ಹಾಲಪ್ಪ, ರಾಷ್ಟ್ರೀಯ ಸ್ವಯಂ ಸೇವಕ ಸಂಘದ ದಕ್ಷಿಣ ಪ್ರಾಂತ ಸಹ ಕಾರ್ಯವಾಹರಾದ ಪಟ್ಟಾಭಿರಾಮ್, ಮಲೆನಾಡು ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಕೆ ಎಸ್ ಗುರುಮೂರ್ತಿ, ಸಂಸ್ಥೆಯ ಅಧ್ಯಕ್ಷರಾದ ಶ್ರೀ ಆ ಪು ನಾರಾಯಣಪ್ಪ, ನಗರ ಸಭೆ ಅಧ್ಯಕ್ಷರಾದ ಮಧುರ ಶಿವಾನಂದ್, ಆನಂದ್, ನವೀನ್,ಪ್ರವೀಣ, ವಾರ್ಡ್ ಸದಸ್ಯರಾದ ಸುಧ, ಮತ್ತಿತರ ಮುಖಂಡರು ಉಪಸ್ಥಿತರಿದ್ದರು