HomeFresh Newsಶಿಬರೂರು: "ಬಾಲೆಗ್ ಒಲಿಯಿನ ಭ್ರಾಮರಿ" ತುಳು ನಾಟಕಕ್ಕೆ ಮುಹೂರ್ತ

ಶಿಬರೂರು: “ಬಾಲೆಗ್ ಒಲಿಯಿನ ಭ್ರಾಮರಿ” ತುಳು ನಾಟಕಕ್ಕೆ ಮುಹೂರ್ತ

ಶ್ರೀ ಕೊಡಮಣಿತ್ತಾಯ ಕ್ಷೇತ್ರ ಶಿಬರೂರು ದೇಲಂತಬೆಟ್ಟು ಇಲ್ಲಿ ಎಪ್ರಿಲ್ ತಿಂಗಳಲ್ಲಿ ನಡೆಯುವ ಬ್ರಹ್ಮಕಲಶೋತ್ಸವದ ಪ್ರಯುಕ್ತ ನಡೆಯುವ ಸಾಂಸ್ಕೃತಿಕ ಕಾರ್ಯಕ್ರಮದಂಗವಾಗಿ ಪರಮಾನಂದ ಸಾಲ್ಯಾನ್ ರಚಿಸಿ ನಿರ್ದೇಶಿಸಿರುವ “ಬಾಲೆಗ್ ಒಲಿಯಿನ ಭ್ರಾಮರಿ” ತುಳು ಭಕ್ತಿಪ್ರಧಾನ ನಾಟಕದ ಮುಹೂರ್ತ ಸಮಾರಂಭವು ಶಿಬರೂರು ಶ್ರೀ ಕೊಡಮಣಿತ್ತಾಯ ಕ್ಷೇತದಲ್ಲಿ ನಡೆಯಿತು.
ಶುಭಮುಹೂರ್ತಕ್ಕೆ ಶಿಬರೂರು ಗುತ್ತು ಉಮೇಶ್ ಎನ್ ಶೆಟ್ಟಿ ಚಾಲನೆ ನೀಡಿದರು. ಬ್ರಹ್ಮಕಲಶೋತ್ಸವದ ಪ್ರಯುಕ್ತ ಮಹಿಳಾ ಮಂಡಳಿಯ ಸದಸ್ಯೆಯರು ಅಭಿನಯಿಸುವ ಬಾಲೆಗ್ ಒಲಿಯಿನ ಭ್ರಾಮರಿ ನಾಟಕ ಯಶಸ್ವಿಯಾಗಲಿ. ಈ ನಾಟಕದಲ್ಲಿ ಅಭಿನಯಿಸಿದ ಎಲ್ಲಾ ಕಲಾವಿದರಿಗೆ ಶ್ರೀ ಕ್ಷೇತ್ರದ ದೈವದ ಆಶೀರ್ವಾದ, ಅನುಗ್ರಹ ಇರಲಿ. ಕಟೀಲು ಭ್ರಾಮರಂಭಿಕೆಯ ಕತೆಯನ್ನಾಧರಿಸಿದ ನಾಟಕ ಕೊಡಮಣಿತ್ತಾಯ ಕ್ಷೇತ್ರದಲ್ಲಿ ಯಶಸ್ಸು ಕಾಣಲಿ. ಇದಕ್ಕೆ ಎಲ್ಲರ ಸಹಕಾರವೂ ಅಗತ್ಯ ಎಂದರು. ಸಮಾರಂಭದಲ್ಲಿ ಪ್ರದ್ಯುಮ್ನ ರಾವ್ ಕಯ್ಯೂರು ಗುತ್ತು, ಸುಧಾಕರ್ ಶಿಬರೂರು, ತುಕಾರಾಮ್ ಶೆಟ್ಟಿ ಪರ್ಲಬೈಲು ಗುತ್ತು, ಸುಷಾಮ ಶೆಟ್ಟಿ ಶಿಬರೂರು ಗುತ್ತು, ಜಿತೇಂದ್ರ ಶೆಟ್ಟಿ ಕೊರ್ಯಾರ್ ಗುತ್ತು, ಸುಬ್ರಹ್ಮಣ್ಯ ಪ್ರಸಾದ್ ಕೊರಿಯರ್, ಮಹಿಳಾ ಮಂಡಳಿಯ ಅಧ್ಯೆಕ್ಷೆ ಸುಪ್ರಜಾ ಪ್ರಸಾದ್, ಸುಜಾತ ಶೆಟ್ಟಿ, ಸೂರಿಂಜೆ ಗ್ರಾಮ‌ಪಂಚಾಯತ್ ಅಧ್ಯೆಕ್ಷೆ ಗೀತಾ ಶೆಟ್ಟಿ, ಆಶಾ ಶೆಟ್ಟಿ ಶಿಬರೂರು, ಸಾರಿಕಾ ಶೆಟ್ಟಿ, ಸುಲೋಚನಾ ನವೀನ್, ನಾಟಕ ರಚನೆಕಾರ, ನಿರ್ದೇಶಕ ಪರಮಾನಂದ ಸಾಲ್ಯಾನ್ ಸಸಿಹಿತ್ಲು, ಪತ್ರಕರ್ತ ಬಾಳ ಜಗನ್ನಾಥ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.
ಬಳಿಕ ಬಾಲೆಗ್ ಒಲಿಯಿನ ಭ್ರಾಮರಿ ನಾಟಕದ ಪಾತ್ರಧಾರಿಗಳಿಗೆ ಪಾತ್ರಗಳ ವಿತರಣೆಯನ್ನು ಪರಮಾನಂದ ಸಾಲ್ಯಾನ್ ಮಾಡಿದರು. ಭಕ್ತಿ ಪ್ರಧಾನ ನಾಟಕದಲ್ಲಿ ಕಲಾವಿದರು ಶ್ರದ್ದಾ ಭಕ್ತಿಯಿಂದ ಪಾತ್ರ ನಿರ್ವಹಿಸುವಂತೆ ವಿನಂತಿಸಿದರು. ಮಹಿಳಾ ಮಂಡಳಿಯ ಸದಸ್ಯೆಯರಿಂದ ನಾಟಕ ಪ್ರದರ್ಶನಗೊಳ್ಳುತ್ತಿದೆ. ಆಶಾ ಶೆಟ್ಟಿ ಕಾರ್ಯಕ್ರಮ‌ ನಿರ್ವಹಿಸಿದರು.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments