HomeFresh Newsಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಹುಟ್ಟುಹಬ್ಬದ ಪ್ರಯುಕ್ತ ಸುಳ್ಯ ಶ್ರೀ ಚನ್ನಕೇಶವ ಸ್ವಾಮಿ ದೇವರಿಗೆ...

ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಹುಟ್ಟುಹಬ್ಬದ ಪ್ರಯುಕ್ತ ಸುಳ್ಯ ಶ್ರೀ ಚನ್ನಕೇಶವ ಸ್ವಾಮಿ ದೇವರಿಗೆ ವಿಶೇಷ ಪೂಜೆ

ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಪರಮಪೂಜ್ಯ ಖಾವಂದರ ಹುಟ್ಟುಹಬ್ಬದ ಶುಭ ಸಂದರ್ಭದಲ್ಲಿ ಸುಳ್ಯ ತಾಲೂಕಿನ ಸುಳ್ಯ ಶ್ರೀ ಚನ್ನಕೇಶವ ಸ್ವಾಮಿ ದೇವರಿಗೆ ವಿಶೇಷ ಅಲಂಕಾರ ಪೂಜೆ ಹಾಗೂ ಮಹಾಪೂಜೆ ಮತ್ತು ವಿಶೇಷ ಪ್ರಾರ್ಥನೆಯನ್ನು ಶ್ರೀ ಕ್ಷೇತ್ರ ಧರ್ಮಸ್ಥಳ ಭಕ್ತಾಭಿಮಾನಿಗಳ ಬಳಗ ಸುಳ್ಯ ವತಿಯಿಂದ ಮಾಡಲಾಯಿತು.
ವಿಶೇಷ ಸಭಾ ಕಾರ್ಯಕ್ರಮವನ್ನು ಮಾಡಿದ್ದು ಇತರ ಕಾರ್ಯಕ್ರಮಗಳಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ ಎಂ.ಬಿ ಫೌಂಡೇಶನ್ ನ ಅಧ್ಯಕ್ಷರಾದ ಶ್ರೀ ಎಂ.ಬಿ ಸದಾಶಿವ ರವರು ಪೂಜ್ಯರ ಆದರ್ಶಗಳು ಮತ್ತು ವಿವಿಧ ಸೇವಾ ಕೈಂಕರ್ಯಯಗಳ ಬಗ್ಗೆ ತಿಳಿಸಿದರು.
ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ಸಭಾಪತಿಗಳಾದ ಸುಧಾಕರ್ ರೈ ರವರು ಶ್ರೀ ಕ್ಷೇತ್ರದ ಪೂಜ್ಯರಿಂದ ನಡೆಯಲ್ಪಡುವ ವಿವಿಧ ಸಾಮಾಜಿಕ ಚಟುವಟಿಕೆಗಳ ಬಗ್ಗೆ ತಿಳಿಸಿದರು
ಈ ಕಾರ್ಯಕ್ರಮದಲ್ಲಿ ಎಸ್.ಡಿ.ಎಮ್ ಶಿಕ್ಷಣ ಸಂಸ್ಥೆ ಮೈಸೂರಿನ ನಿವೃತ್ತ ಪ್ರಾಂಶುಪಾಲರಾದ ಎಂ. ಬಾಲಚಂದ್ರ ರವರು ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ತಾಲೂಕ ಅಧ್ಯಕ್ಷರಾದ ಶ್ರೀ ಲೋಕನಾಥ ಅಮೆಚೂರು ರವರು, ಶ್ರೀ ಮಂಜುನಾಥೇಶ್ವರ ಭಜನಾ ಪರಿಷತ್ ಸುಳ್ಯ ತಾಲೂಕಿನ ಅಧ್ಯಕ್ಷರಾದ ಶ್ರೀ ಸೋಮಶೇಖರ ಪೈಕ ರವರು ಕೇಂದ್ರ ಒಕ್ಕೂಟದ ನಿಕಟ ಪೂರ್ವ ಅಧ್ಯಕ್ಷರಾದ ಬೂಡು ರಾಧಾಕೃಷ್ಣ ರೈ ರವರು ಜನಜಾಗೃತಿ ವೇದಿಕೆಯ ಸದಸ್ಯರಾದ ಪದ್ಮನಾಭ ಜೈನ್, ಜಾಲ್ಸುರು ವಲಯದ ಅಧ್ಯಕ್ಷರಾದ ಭಾಸ್ಕರ್ ಅಡ್ಕಾರ್ ರವರು ರವರು ಒಕ್ಕೂಟದ ವಲಯದ ಅಧ್ಯಕ್ಷರುಗಳಾದ ಮನೋಹರ್ ಹಾಗೂ ವೇದಶೆಟ್ಟಿ ರವರು ಹಾಗೂ ಒಕ್ಕೂಟದ ಅಧ್ಯಕ್ಷರುಗಳು ಪದಾಧಿಕಾರಿಗಳು ಹಾಗೂ 150 ಕ್ಕಿಂತಲೂ ಹೆಚ್ಚು ಶ್ರೀ ಕ್ಷೇತ್ರ ಧರ್ಮಸ್ಥಳದ ಭಕ್ತರು ಭಾಗವಹಿಸಿ ಪೂಜ್ಯರ ಆರೋಗ್ಯಕ್ಕಾಗಿ ಸಾಮೂಹಿಕ ಪ್ರಾರ್ಥನೆಯನ್ನು ಮಾಡಿದರು

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments