ಸೋಮೇಶ್ವರ : ದೋಣಿ ಮತ್ತು ಮೀನಿನ ಬಲೆ ಬೆಂಕಿಗಾಹುತಿ

ಉಳ್ಳಾಲ: ಸೋಮೇಶ್ವರ ಕಡಲ ಕಿನಾರೆಯಲ್ಲಿಟ್ಟಿದ್ದ ಎರಡು ದೋಣಿಗಳಿಗೆ ಬೆಂಕಿ ತಗುಲಿದ್ದು ದೋಣಿ ಮತ್ತು ಮೀನಿನ ಬಲೆ ಸುಟ್ಟು ಕರಕಲಾಗಿದ್ದು ಲಕ್ಷಾಂತರ ರೂಪಾಯಿ ನಷ್ಟ ಸಂಭವಿಸಿದ್ದು, ಕಿಡಿಗೇಡಿಗಳ ಕೃತ್ಯವೆಂದು ಶಂಕಿಸಲಾಗಿದೆ. ಸೋಮೇಶ್ವರದ ಮೀನುಗಾರರಾದ ಅನಿಲ್ ಮತ್ತು ಶೇಖರ್ ಎಂಬವರಿಗೆ ಸೇರಿದ ನಾಡ ದೋಣಿಗೆ ಗುರುವಾರ ಮದ್ಯಾಹ್ನ ಬೆಂಕಿ ತಗುಲಿದೆ.

ಸೋಮೇಶ್ವರ ಬಾಸಿತ್ತಾಯರ ಬೈಲಿನ ಸಮುದ್ರ ಕಿನಾರೆಯಲ್ಲಿ ಮೀನುಗಾರರು ನಾಡ ದೋಣಿಯನ್ನ ನಿಲ್ಲಿಸಿದ್ದರು.ಗುರುವಾರ ಮದ್ಯಾಹ್ನ ದೋಣಿಗಳು ಬೆಂಕಿಗಾಹುತಿಯಾಗಿದ್ದು ಬೆಂಕಿಯ ಕೆನ್ನಾಲಿಗೆ ಸಮೀಪದ ಪೇದೆಗಳಿಗೂ ವ್ಯಾಪಿಸಿದ್ದು ಸ್ಥಳೀಯರು ಬೆಂಕಿಯನ್ನ ನಂದಿಸಿದ್ದಾರೆ.ಪ್ರವಾಸಿಗರು ಎಸೆದ ಸಿಗರೇಟ್ ಅಥವಾ ಕಿಡಿಗೇಡಿಗಳೇ ಬೆಂಕಿ ಹಚ್ಚಿರುವ ಬಗ್ಗೆ ಶಂಕಿಸಲಾಗಿದೆ.

Related Posts

Leave a Reply

Your email address will not be published.