Home Posts tagged #accident (Page 5)

ಕದ್ರಿ : ಕಾರು ಚಾಲಕನ ನಿಯಂತ್ರಣ ತಪ್ಪಿ ಕಾರು ಅಪಘಾತ

ಮಂಗಳೂರಿನ ಕದ್ರಿ ಸಮೀಪದ ಬಟ್ಟಗುಡ್ಡೆ ಬಳಿ ಕಾರು ಅಪಘಾತ ಸಂಭವಿಸಿದ್ದು ಕಾರಿನಲ್ಲಿದ್ದ ಮೂವರು ಸಣ್ಣಪುಟ್ಟ ಗಾಯಗಳಿಂದ ಪಾರಾದ ಘಟನೆ ನಡೆದಿದೆ. ಶುಕ್ರವಾರ ಮಧ್ಯರಾತ್ರಿ ಸುಮಾರು 12.30 ರ ಸುಮಾರಿಗೆ ಈ ಅಪಘಾತ ಸಂಭವಿಸಿದ್ದು ಸರ್ಕಿಟ್ ಹೌಸ್ ಕಡೆಯಿಂದ ಬಿಜೈ ಕಡೆಗೆ ವೇಗವಾಗಿ ಸಾಗುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಡಿವೈಡರ್ ಮೇಲೇರಿ ವಿದ್ಯುತ್

ವಿಟ್ಲ : ಕಾರು ಅಪಘಾತ – ಚಾಲಕಿಗೆ ಗಾಯ

ವಿಟ್ಲ: ಡಿವೈಡರ್ ಮೇಲಿನಿಂದ ಹಾರಿದ ಕಾರೊಂದು ವಿರುದ್ಧ ಬದಿಯಲ್ಲಿ ಬರುತ್ತಿದ್ದ ಬೇರೊಂದು ಕಾರಿಗೆ ಡಿಕ್ಕಿ ಹೊಡೆದ ಪರಿಣಾಮವಾಗಿ ಕಾರು ಚಾಲಕಿ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ವಿಟ್ಲದಲ್ಲಿ ನಡೆದಿದೆ. ಸೂರಿಕುಮೇರು ಪೆಟ್ರೋಲಿಯಂ ಪಂಪ್ ಮುಂಭಾಗದಲ್ಲಿ ಈ ಅಪಘಾತ ಸಂಭವಿಸಿದೆ. ಬಂಟ್ವಾಳ ಬಿಸಿರೋಡು ನಿವಾಸಿ ರಮ್ಯ ಅವರು ಕಾರಿನಲ್ಲಿ ಬಿಸಿರೋಡಿನಿಂದ ಪುತ್ತೂರು ಕಡೆಗೆ ಹೋಗುತ್ತಿದ್ದ ವೇಳೆ ನಿಯಂತ್ರಣ ಕಳೆದುಕೊಂಡ ಕಾರು ಡಿವೈಡರ್ ಮೇಲೆ ಹತ್ತಿ ಕೆಳಗೆ ರಸ್ತೆಗೆ

ಮಂಗಳೂರು – ಮೇರಿಹಿಲ್ , ಡಿವೈಡರಿಗೆ ಬೈಕ್ ಗುದ್ದಿ ಬಾಲಕರಿಬ್ಬರು ಬಲಿ

ಮಂಗಳೂರು: ನಗರದ ಮೇರಿಹಿಲ್ ವಿಕಾಸ್ ಕಾಲೇಜಿನ ಬಳಿ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದು ಸ್ಕೂಟರ್ ಸವಾರರಿಬ್ಬರು ಬುಧವಾರ ರಾತ್ರಿ ಮೃತಪಟ್ಟಿದ್ದಾರೆ. ಮೃತರನ್ನು ಸ್ಥಳೀಯ ನಿವಾಸಿಗಳಾದ ಪವನ್ ( 16) ಹಾಗೂ ಚಿರಾಗ್ ( 15) ಎಂದು ಗುರುತಿಸಲಾಗಿದೆ. ಅಪಘಾತದಿಂದ ಒಬ್ಬ ಬಾಲಕ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದ. ಗಾಯಗೊಂಡ ಇನ್ನೊಬ್ಬ ಬಾಲಕನನ್ನು ರಾಜಲಕ್ಷ್ಮೀ ಬಸ್ಸಿನಲ್ಲಿ ತಕ್ಷಣವೇ ಕರೆದೊಯ್ದು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆಸ್ಪತ್ರೆ ತಲುಪುವಷ್ಟರಲ್ಲಿ ಆತನೂ

ಗುರುಪುರ : ಬಸ್ ಢಿಕ್ಕಿಯಾಗಿ ಯುವಕ ಸಾವು- ಕೈಕಂಬ ಜಂಕ್ಷನ್‍ನಲ್ಲಿ ಪ್ರತಿಭಟನೆ

ಮಂಗಳೂರು: ಗುರುಪುರ ಜಂಕ್ಷನ್ ಬಳಿ ಜೂನ್ 22ರಂದು ಬಸ್ ಢಿಕ್ಕಿಯಾಗಿ ಬೈಕ್ ಸವಾರ ಮೃತಪಟ್ಟ ಘಟನೆಯನ್ನು ಖಂಡಿಸಿ ಶುಕ್ರವಾರ ಸ್ಥಳೀಯರು ಕೈಕಂಬ ಜಂಕ್ಷನ್‍ನಲ್ಲಿ ಬಸ್‍ಗಳನ್ನು ತಡೆದು ಪ್ರತಿಭಟನೆ ನಡೆಸಿದರು. ಬಸ್ ಢಿಕ್ಕಿಯಾಗಿ ಬೈಕ್ ಸವಾರ ಪೊಳಲಿ ಕರಿಯಂಗಳ ನಿವಾಸಿ ಸಂತೋಷ್ ಕುಮಾರ್ ಅವರು ಮೃತಪಟ್ಟಿದ್ದು ಈ ಘಟನೆಯನ್ನು ಖಂಡಿಸಿ ನೂರಾರು ಮಂದಿ ಪ್ರತಿಭಟನೆ ಸೇರಿ ವ್ಯವಸ್ಥೆಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಪ್ರತಿಭಟನೆಯಿಂದಾಗಿ ಕೈಕಂಬ ಜಂಕ್ಷನ್

ಗುರುಪುರ ಅಪಘಾತದಲ್ಲಿ ಸ್ಥಳದಲ್ಲೇ ವ್ಯಕ್ತಿ ಮೃತ್ಯು

ಕರಿಯಂಗಳ ನಿವಾಸಿ ಸಂತೋಷ್ ಇಂದು ಮುಂಜಾನೆ ವಾಮಂಜೂರು ಕಡೆ ಕೆಲಸಕ್ಕೆಂದು ತೆರಳುತ್ತಿದ್ದ ವೇಳೆ ಗುರುಪುರದ ಬಳಿ ಖಾಸಗಿ ಬಸ್ಸಿನ ಅತೀ ವೇಗದ ಚಾಲನೆಯಿಂದ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ

ಉಳ್ಳಾಲ : ಹಿಟ್ ಆಂಡ್ ರನ್ ಅಪಘಾತ-ಯುವಕ ಸಾವು

ಉಳ್ಳಾಲ: ರಾ.ಹೆ 66ರ ಸಂಕೊಳಿಗೆ ಸಮೀಪ ತಡರಾತ್ರಿ ಬೈಕ್‍ಗೆ ಕಾರು ಢಿಕ್ಕಿ ಹೊಡೆದು ಪರಾರಿಯಾದ ಹಿಟ್ ಆಂಡ್ ರನ್ ಪ್ರಕರಣದ ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಘಟನೆಯಲ್ಲಿ ಗಾಯಾಳು ಕೋಟೆಕಾರು ವೈದ್ಯನಾಥ ದೈವಸ್ಥಾನ ರಸ್ತೆ ನಿವಾಸಿ ತೇಜಸ್ ರಾಮ ಕುಲಾಲ್ (28) ಮೃತಪಟ್ಟಿದ್ದರು. ರಾ.ಹೆ 66ರ ಸಂಕೊಳಿಗೆ ಸಮೀಪ ತಡರಾತ್ರಿ ಬೈಕಿಗೆ ಪೆಟ್ರೋಲ್ ಹಾಕಿಸಲೆಂದು ಉಚ್ಚಿಲದ ಪೆಟ್ರೋಲ್ ಪಂಪ್ ಗೆ ತೆರಳುವಾಗ ಘಟನೆ ಸಂಭವಿಸಿತ್ತು. ಘಟನೆಯಿಂದ ಬೈಕ್ ಸವಾರ ಗಂಭೀರ

ಮೀನು ಸಾಗಾಟ ವಾಹನಕ್ಕೆ ಲಾರಿ ಡಿಕ್ಕಿ – ಆಂಧ್ರದಲ್ಲಿ ಉಚ್ಚಿಲದ ಯುವಕ ಬಲಿ

ಮಂಗಳೂರಿನಿಂದ ಆಂಧ್ರ ಪ್ರದೇಶಕ್ಕೆ ಮೀನು ಹೇರಿಕೊಂಡು ಹೋಗಿದ್ದ ವಾಹನ ಹಾಗೂ ಲಾರಿ ಮಧ್ಯೆ ಆಂಧ್ರ ನಾಬೂರ ಎಂಬಲ್ಲಿ ಅಪಘಾತ ನಡೆದಿದೆ. ಮೀನು ಸಾಗಾಟ ವಾಹನ ಚಾಲಕ ಉಚ್ಚಿಲದ ಯುವಕ ಮೃತಪಟ್ಟಿದ್ದಾರೆ. ಅಪಘಾತದಲ್ಲಿ ಲಾರಿ ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೀನು ಸಾಗಾಟ ವಾಹನ ಚಾಲಕ ಕಾಪು ತಾಲೂಕಿನ ಉಚ್ಚಿಲ ಭಾಸ್ಕರ ನಗರ ಬಾಂಗ್ಲಾ ನಿವಾಸಿ ಬಶೀರ್ ಎಂದು ತಿಳಿದು ಬಂದಿದೆ. ಇಂದು ಮುಂಜಾನೆ ವೇಳೆ ಅಪಘಾತ ಸಂಭವಿಸಿದ್ದು, ಕಾಲು ಸಿಲುಕಿಕೊಂಡ ಪರಿಣಾಮ ಅವರನ್ನು ಹೊರ

ಮೂಡುಬಿದಿರೆ : ಅಪಘಾತದಿಂದ ವಿದ್ಯಾರ್ಥಿಯ ಸಾವು – ವಿವಿಧ ಕಾಲೇಜುಗಳ ವಿದ್ಯಾರ್ಥಿಗಳಿಂದ ಪ್ರತಿಭಟನೆ

ಮೂಡುಬಿದಿರೆ: ಖಾಸಗಿ ಬಸ್ ಬೈಕ್‍ಗೆ ಢಿಕ್ಕಿ ಹೊಡೆದು ವಿದ್ಯಾರ್ಥಿ ಕಾರ್ತಿಕ್ ಆಚಾರ್ಯ ಮೃತಪಟ್ಟಿದ್ದು, ಚಾಲಕನ ನಿರ್ಲಕ್ಷ್ಯತನವನ್ನು ಖಂಡಿಸಿ ಮೂಡುಬಿದಿರೆಯ ವಿವಿಧ ಕಾಲೇಜುಗಳ ವಿದ್ಯಾರ್ಥಿಗಳು ವಿದ್ಯಾಗಿರಿ ಜಂಕ್ಷನ್‍ನಲ್ಲಿ ಪ್ರತಿಭಟನೆ ನಡೆಸಿದರು. ಶಾಂತಿ ಪ್ರಸಾದ್ ಹೆಗ್ಡೆ ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿ, ಖಾಸಗಿ ಬಸ್ ಚಾಲಕರ ಅಜಾಗರೂಕತೆ ಹಾಗೂ ನಿರ್ಲಕ್ಷ್ಯದಿಂದಾಗಿ ಮೂಡುಬಿದಿರೆಯಲ್ಲಿ ಕಳೆದ ಒಂದು ವರ್ಷದ ಅವಧಿಯಲ್ಲಿ 10 ಕ್ಕೂ ಅಧಿಕ

ಬೈಕ್‌ಗೆ ಢಿಕ್ಕಿ ಹೊಡೆದ ಬಸ್‌: ಕಾಲೇಜು ವಿದ್ಯಾರ್ಥಿ ಸಾವು

ಮೂಡುಬಿದಿರೆ : ಖಾಸಗಿ ಬಸ್ಸೊಂದು ಬೈಕ್ ಗೆ ಢಿಕ್ಕಿ ಹೊಡೆದ ಪರಿಣಾಮವಾಗಿ ಬೈಕ್ ಸವಾರ, ಕಾಲೇಜು ವಿದ್ಯಾರ್ಥಿ ಸಾವನ್ನಪ್ಪಿದ ಘಟನೆ ಮಂಗಳೂರು-ಕಾರ್ಕಳ ರಾಷ್ಟ್ರೀಯ ಹೆದ್ದಾರಿಯ ತೋಡಾರಿನ ಹಂಡೇಲು ಬಳಿ ಸೋಮವಾರ ಸಂಜೆ ನಡೆದಿದೆ. ಎಂಬಲ್ಲಿ ಖಾಸಗಿ ಬಸ್‌ ಬೈಕ್‌ಗೆ ಆಳ್ವಾಸ್‌ ಕಾಲೇಜಿನ ಪ್ರಥಮ ಬಿಸಿಎ ವಿದ್ಯಾರ್ಥಿ ಎಡಪದವು ರಾಜೇಶ್ವರೀ ಜ್ಯುವೆಲ್ಲ‌ರ್ಸ್ ನ ಚಂದ್ರಹಾಸ ಆಚಾರ್ಯ ಅವರ ಪುತ್ರ ಕಾರ್ತಿಕ್‌ ಆಚಾರ್ಯ ಮೃತಪಟ್ಟ ವಿದ್ಯಾರ್ಥಿ. ಸಹಸವಾರ ಅದೇ ಕಾಲೇಜಿನ ವಿದ್ಯಾರ್ಥಿ

ಉಳ್ಳಾಲ : ಹಿಟ್ ಆಂಡ್ ರನ್ ಪ್ರಕರಣ – ಬೈಕ್ ಸವಾರನಿಗೆ ಗಂಭೀರ ಗಾಯ

ಉಳ್ಳಾಲ: ಬೈಕ್‍ಗೆ ಕಾರು ಢಿಕ್ಕಿ ಹೊಡೆದು ಪರಾರಿಯಾಗಿರುವ ಘಟನೆ ರಾ.ಹೆ 66ರ ಸಂಕೊಳಿಗೆ ಸಮೀಪ ನಿನ್ನೆ ತಡರಾತ್ರಿ ವೇಳೆ ಸಂಭವಿಸಿದೆ. ಘಟನೆಯಿಂದ ಬೈಕ್ ಸವಾರ ಗಂಭೀರ ಗಾಯಗೊಂಡಿದ್ದು, ಘಟನೆಗೆ ಕಾರಣವಾದ ಕೇರಳ ನೋಂದಾಯಿತ ಇನೋವಾ ಕಾರಿನ ದಾಖಲೆಯನ್ನು ಸಿಸಿಟಿವಿ ಮೂಲಕ ಪತ್ತೆಹಚ್ಚಲಾಗಿದೆ.ಕೋಟೆಕಾರು ವೈದ್ಯನಾಥ ದೇವಸ್ಥಾನ ರಸ್ತೆ ನಿವಾಸಿ ತೇಜಸ್ ರಾಮ ಕುಲಾಲ್ (28) ಗಾಯಾಳು. ಕೋಟೆಕಾರಿನ ಮನೆ ಕಡೆಗೆ ಬರುವ ಸಂದರ್ಭ ಕೇರಳ ಕಡೆಗೆ ತೆರಳುತ್ತಿದ್ದ ಅಪರಿಚಿತ ವಾಹನ