ಮೂಡುಬಿದಿರೆ: ಸಿಬಿಎಸ್ಸಿ 10ನೇ ತರಗತಿಯ ಪರೀಕ್ಷೆಯಲ್ಲಿ ಆಳ್ವಾಸ್ ಕೇಂದ್ರೀಯ ಶಾಲೆಯು ಸತತ ಮೂರನೇ ವರ್ಷವೂ ಶೇ.100 ಫಲಿತಾಂಶ ದಾಖಲಿಸಿದೆ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ ಮೋಹನ್ ಆಳ್ವ ಹೇಳಿದರು. 173 ಬಾಲಕರು ಮತ್ತು 71 ಬಾಲಕಿಯರು ಸೇರಿದಂತೆ ಒಟ್ಟು 244 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, ಎಲ್ಲರೂ ತೇರ್ಗಡೆಯಾಗಿದ್ದಾರೆ. 8
ಮೂಡುಬಿದಿರೆ: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವತಿಯಿಂದ ಭಗವಾನ್ ಮಹಾವೀರ ಜಯಂತಿಯನ್ನು ಭಾನುವಾರ ಕೃಷಿ ಸಿರಿ ವೇದಿಕೆಯಲ್ಲಿ ಆಚರಿಸಲಾಯಿತು. ಶ್ರೀ ಕ್ಷೇತ್ರ ಧರ್ಮಸ್ಥಳದ ಹೇಮಾವತಿ ಹೆಗ್ಗಡೆ ಅವರು ಮಾತನಾಡಿ ಜೈನ ಧರ್ಮದಲ್ಲಿ ಸಂಯಮಕ್ಕೆ ಹೆಚ್ಚಿನ ಪ್ರಾಶಸ್ತ್ಯವಿದೆ. ಬದುಕಿನಲ್ಲಿ ತಾಳ್ಮೆ ಬಹು ಮುಖ್ಯ. ಇಲ್ಲವಾದರೆ ವ್ಯಕ್ತಿಯ ಜೀವನ ಅಸ್ತವ್ಯಸ್ತವಾಗುತ್ತದೆ. ಬದಲಾಗುತ್ತಿರುವ ಸಮಾಜದಲ್ಲಿ ಸರಳತೆಯನ್ನು ದೌರ್ಬಲ್ಯವೆಂದು
ಕರ್ನಾಟಕ ಪ್ರೌಢ ಶಿಕ್ಷಣ ಮಂಡಳಿ ನಡೆಸಿರುವ ಹಿಂದೂಸ್ತಾನೀ ತಬಲ ಜ್ಯೂನಿಯರ್ ಪರೀಕ್ಷೆಯಲ್ಲಿ ಆಳ್ವಾಸ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯ 9ನೇ ತರಗತಿ ವಿದ್ಯಾರ್ಥಿ ಮನುಜ ನೇಹಿಗ ಸುಳ್ಯ ಪ್ರಥಮ ಶ್ರೇಣಿಯಲ್ಲಿ ತೇರ್ಗಡೆ ಹೊಂದಿರುತ್ತಾನೆ. ಯಕ್ಷಗಾನ,ನಾಟಕ,ಜಾದೂ,ಹಾರ್ಮೋನಿಯಂ,ತಬಲ,ಮಣಿಪುರಿ ಸ್ಟಿಕ್ ಡ್ಯಾನ್ಸ್ ಇತ್ಯಾದಿಯಾಗಿ ಬಹುಮುಖ ಪ್ರತಿಭೆ ಹೊಂದಿರುವ ಈತ ಆರಂಭದಲ್ಲಿ ಆಳ್ವಾಸ್ ನಲ್ಲಿ ತಬಲ ಶಿಕ್ಷಕರಾಗಿದ್ದ ದಯಾನಂದ ಧಾರವಾಡ ಮತ್ತು ಪ್ರಸ್ತುತ ವಿದ್ವಾನ್ ವಿನೋದ್
ಮಿಜಾರು: ಪರಿಶ್ರಮ ಇಲ್ಲದೆ ಸಾಧನೆ ಅಸಾಧ್ಯ. ಶ್ರಮದಿಂದ ಮಾತ್ರ ನಮ್ಮ ಗುರಿ ತಲುಪಲು ಸಾಧ್ಯ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವ್ಯವಸ್ಥಾಪಕ ಟ್ರಸ್ಟಿ ವಿವೇಕ್ ಆಳ್ವ ಹೇಳಿದರು.ಆಳ್ವಾಸ್ ಎಂಜಿನಿಯರಿಂಗ್ ಮತ್ತು ತಾಂತ್ರಿಕ ಕಾಲೇಜಿನ ಯಂಗ್ ಇಂಡಿಯಾದ ‘ಯುವ’ ಕಾರ್ಯ ನಿರ್ವಹಣಾ ಮಂಡಳಿಯ ಪ್ರತಿಷ್ಠಾಪನಾ ಕಾರ್ಯಕ್ರಮದಲ್ಲಿ ಬುಧವಾರ ಅವರು ಮಾತನಾಡಿದರು. ಸಮಯಕ್ಕೆ ತಕ್ಕಂತೆ ನಾವು ಬದಲಾಗಬೇಕು. ನಮ್ಮ ಆಲೋಚನೆಗಳನ್ನು ಬದಲಾಯಿಸಿಕೊಳ್ಳಬೇಕು. ಜೀವನದಲ್ಲಿ ನೀತಿ-ನಿಯಮ
ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ(ರಿ.) ಮೂಡುಬಿದಿರೆ ,ಆಳ್ವಾಸ್ ರಂಗ ಅಧ್ಯಯನ ಕೇಂದ್ರ ಇದರ ಆಶ್ರಯದಲ್ಲಿ, ವಿದ್ಯಾಗಿರಿಯ ವಿ.ಎಸ್.ಆಚಾರ್ಯ ಸಭಾಂಗಣದಲ್ಲಿ ನಾಳೆ (ಜ.20)ಸಂಜೆ 6.45 ಕ್ಕೆ ಯಕ್ಷ ರಂಗಾಯಣ ಕಾರ್ಕಳ ಇದರ ಕಲಾವಿದರು ಅಭಿನಯಿಸುವ ಪರಶುರಾಮ ನಾಟಕ ಪ್ರದರ್ಶನವನ್ನು ಏರ್ಪಡಿಸಲಾಗಿದೆ. ಶಶಿರಾಜ್ ಕಾವೂರು ರಚಿಸಿದ ಈ ನಾಟಕವನ್ನು ಡಾ||ಜೀವನ್ ರಾಂ ಸುಳ್ಯ ನಿರ್ದೇಶಿಸಿದ್ದಾರೆ. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷರಾದ ಡಾ.ಎಂ.ಮೋಹನ ಆಳ್ವರು ನಾಟಕ
ವಿದ್ಯಾಗಿರಿ ಮೂಡುಬಿದಿರೆಯಲ್ಲಿ ನಡೆಯುತ್ತಿರುವ ಭಾರತ್ ಸ್ಕೌಟ್ಸ್ ಮತ್ತು ಅಂತಾರಾಷ್ಟ್ರೀಯ ಸಾಂಸ್ಕೃತಿಕ ಜಾಂಬೂರಿ 2022 ಕಾರ್ಯಕ್ರಮದಲ್ಲಿ ಆಳ್ವಾಸ್ ರಂಗ ಅಧ್ಯಯನ ಕೇಂದ್ರ ನಿರ್ದೇಶಕ ಜೀವನ್ ರಾಂ ಸುಳ್ಯ ಅವರ ಸಾರಥ್ಯದಲ್ಲಿ ಕಳೆದ ನಾಲ್ಕು ದಿನಗಳಿಂದ 5 ಸಾವಿರಕ್ಕೂ ಅಧಿಕ ವಿದ್ಯಾರ್ಥಿಗಳಿಗೆ ರಂಗ ತರಬೇತಿ ಶಿಬಿರ ಆಯೋಜಿಸಲಾಗುತ್ತಿದೆ. ಶ್ರೀಲಂಕಾ , ಕೊರಿಯಾ, ಸೇರಿದಂತೆ ದೇಶ ವಿದೇಶಗಳಿಂದ ಆಗಮಿಸಿದ ವಿದ್ಯಾರ್ಥಿಗಳಿಗೆ ರಂಗ ವ್ಯಾಯಾಮ, ಗೀತಾಭಿನಯ , ರಂಗ ಚಾಲನೆ ,
ಮೂಡುಬಿದಿರೆ: ಅಂತಾರಾಷ್ಟ್ರೀಯ ಸ್ಕೌಟ್-ಗೈಡ್ಸ್ ಸಾಂಸ್ಕೃತಿಕ ಜಾಂಬೂರಿಗೆ ವಿದ್ಯಾಗಿರಿಯು ವಿವಿಧ ರೂಪದಲ್ಲಿ ಸಜ್ಜಾಗೊಳ್ಳುತ್ತಿದ್ದು ಜನರಿಗೆ ಮತ್ತು ವಿದ್ಯಾರ್ಥಿಗಳಿಗೆ ಪ್ರಕೃತಿ ಸಂರಕ್ಷಣೆಯ ಬಗ್ಗೆ ಮಹತ್ವ ಮತ್ತು ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಮೂಡುಬಿದಿರೆಯ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಸತೀಶ್ ಕೆ.ಅವರ ಮಾರ್ಗದರ್ಶನದಲ್ಲಿ ವಲಯ ಅರಣ್ಯಾಧಿಕಾರಿ ಹೇಮಗಿರಿ ಅಂಗಡಿ ನೇತೃತ್ವದಲ್ಲಿ ಕಳೆದ ಮೂರು ವಾರಗಳಿಂದ 50ರಿಂದ 60 ಮಂದಿ ಕಾರ್ಮಿಕರು ಕೆಲಸ ಮಾಡುವ ಮೂಲಕ 10
ಆಳ್ವಾಸ್ ಜಾಂಬೂರಿಗೆ 50 ಅಡಿ ಗಾತ್ರದ ಬ್ರಹತ್ ಗಾಳಿಪಟ ನಿರ್ಮಾಣವು ಡಿಸೆಂಬರ್ 21ರಂದು ಬೆಳಗ್ಗೆ 10 ಗಂಟೆಯಿಂದ ಸಂಜೆ 3ರ ತನಕ ಮಂಗಳೂರಿನ ಗೋಕುಲ್ ಸಭಾಂಗಣದಲ್ಲಿ ನೆರವೇರಲಿದೆ. 50 ಅಡಿ ಎತ್ತರದ 16 ಅಡಿ ಅಗಲದ ಈ ಗಾಳಿಪಟದಲ್ಲಿ ತುಳುನಾಡಿನ ಸಾಂಸ್ಕೃತಿಕ ವಿಚಾರಗಳ ಕಲಾಕೃತಿಗಳನ್ನು ಬಣ್ಣ ಗಳ ಮೂಲಕ ಅಭಿವ್ಯಕ್ತ ಪಡಿಸಲಾಗುವುದು. ಅಂತರಾಷ್ಟ್ರೀಯ ಖ್ಯಾತಿಯ ಟೀಮ್ ಮಂಗಳೂರು ಹವ್ಯಾಸಿ ಗಾಳಿಪಟ ತಂಡದ ಕಲಾವಿದರು ಮತ್ತು ಗಾಳಿಪಟ ವಿನ್ಯಾಸಕಾರರಾದ ದಿನೇಶ್ ಹೊಳ್ಳ ಮತ್ತು
ಮೂಡುಬಿದಿರೆ: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಸಂಯೋಜನೆಯಲ್ಲಿ ಡಿ.21ರಿಂದ ನಡೆಯುವ ಅಂತಾರಾಷ್ಟ್ರೀಯ ಸಾಂಸ್ಕೃತಿಕ ಜಾಂಬೂರಿಗೆ ಗದಗ ಜಿಲ್ಲೆಯಿಂದ 2 ಲಕ್ಷ ಜೋಳದ ರೊಟ್ಟಿಯನ್ನು ಕಳುಹಿಸಲಾಗಿದೆ.ಉತ್ತರ ಕರ್ನಾಟಕದ ಗಟ್ಟಿ ಆಹಾರ ಎನಿಸಿಕೊಂಡಿರುವ ಜೋಳದ ರೊಟ್ಟಿ, ಶೇಂಗಾ ಚಟ್ನಿಯನ್ನು ಉಣಬಡಿಸುವ ನಿಟ್ಟಿನಲ್ಲಿ 2 ಲಕ್ಷ ಮಾಲದಂಡಿ ಜೋಳದ ರೊಟ್ಟಿಗಳನ್ನು ಕಳುಹಿಸಲಾಗುತ್ತಿರುವದು ಎಲ್ಲರ ಗಮನ ಸೆಳೆದಿದೆ. ಗದಗದಿಂದ 2 ಲಕ್ಷ ರೊಟ್ಟಿ, 2 ಕ್ವಿಂಟಲ್ ಶೇಂಗಾ ಚಟ್ನಿಯನ್ನು
ಕನ್ನಡ ಮಾಧ್ಯಮದಲ್ಲಿ ಕಲಿಯುತ್ತಿರುವ ವಿದ್ಯಾರ್ಥಿಗಳ ಆತ್ಮವಿಶ್ವಾಸ ವೃದ್ಧಿ ಹಾಗೂ ವಿದ್ಯಾರ್ಥಿ ಸಮುದಾಯದಲ್ಲಿ ಭಾಷೆ, ಸಾಹಿತ್ಯ ಮತ್ತು ಸಂಸ್ಕøತಿ ಕುರಿತ ಅರಿವನ್ನು ವಿಸ್ತರಿಸುವ ಉದ್ದೇಶದಿಂದ ಕೇಶವ ಸ್ಮøತಿ ಸಂವರ್ಧನ ಸಮಿತಿಯು ಕನ್ನಡ ಶಾಲಾ ಮಕ್ಕಳ ಹಬ್ಬವನ್ನು ನವೆಂಬರ್ 19 ಮತ್ತು 20ರಂದು ನಗರದ ಸಂಘನಿಕೇತನದಲ್ಲಿ ಬೃಹತ್ ವಿದ್ಯಾರ್ಥಿ ಸಮಾವೇಶದ ಮೂಲಕ ಹಮ್ಮಿಕೊಳ್ಳಲಾಗಿದೆ ಎಂದು ಸ್ವಾಗತಿ ಸಮಿತಿಯ ಅಧ್ಯಕ್ಷರಾದ ಡಾ. ಮೋಹನ್ ಆಳ್ವ ಹೇಳಿದರು. ಅವರು ನಗರದ ಓಶಿಯನ್