Home Posts tagged #alvascollege (Page 2)

ಮೂಡುಬಿದಿರೆ: ಆಘಾತ ತರಂಗ ಮಾಪನ ವ್ಯವಸ್ಥೆ: ಆಳ್ವಾಸ್ ಇಂಜಿನಿಯರಿಂಗ್ ಕಾಲೇಜಿಗೆ ಪೇಟೆಂಟ್

ಮೂಡುಬಿದಿರೆ: ಸಂಶೋಧನಾ ಕ್ಷೇತ್ರದಲ್ಲಿ ಮತ್ತೊಂದು ಕ್ರಾಂತಿಕಾರಿ ಹೆಜ್ಜೆ ಇರಿಸಿದ ಆಳ್ವಾಸ್ ಇಂಜಿನಿಯರಿಂಗ್ ಮತ್ತು ತಂತ್ರಜ್ಞಾನ ಕಾಲೇಜು, ಸ್ಮಾರ್ಟ್ ಶಾಕ್‌ವೇವ್ ವೆಲಾಸಿಟಿ ಮೆಷರ್‌ಮೆಂಟ್ ಸಿಸ್ಟಮ್ (ಸ್ಮಾರ್ಟ್ ಆಘಾತ ತರಂಗಗಳ ವೇಗ ಮಾಪನ ವ್ಯವಸ್ಥೆ) ಪೇಟೆಂಟ್ ಪಡೆದುಕೊಂಡಿದೆ.ಈ ಆವಿಷ್ಕಾರವು ಕೇವಲ ಆಘಾತ ತರಂಗಗಳ ವೇಗ ಮಾಪನ ಮಾತ್ರವಲ್ಲ, ವಿವಿಧ ಅನುಷ್ಠಾನಗಳು

ಮೂಡುಬಿದಿರೆ : ಆಳ್ವಾಸ್ ನಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ

ಮೂಡುಬಿದಿರೆ : ‘ದೇಶದ ಅಭಿವೃದ್ಧಿಗೆ ಮಹಿಳೆಯರ ಸಶಕ್ತೀಕರಣ, ಮೌಲ್ಯ ಹಾಗೂ ಗೌರವವು ಅವಶ್ಯವಾಗಿದೆ. ಮಹಿಳೆಯರ ಆಶಯ ಪರಿಗಣಿಸದೇ ಯಾವುದೇ ಪ್ರಗತಿ ಸಾಧ್ಯವಿಲ್ಲ ಎಂಬುದನ್ನು ಪುರುಷರು ಅರಿತುಕೊಳ್ಳಬೇಕಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಡಾ.ಆನಂದ ಕೆ. ಹೇಳಿದರು.ಅವರು ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ -2024ರ ಪ್ರಯುಕ್ತ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನವು ವಿವಿಧ ಸಂಘ -ಸಂಸ್ಥೆಗಳ ಸಹಭಾಗಿತ್ವದಲ್ಲಿ ಆಳ್ವಾಸ್ ಕಾಲೇಜಿನ

ಮೂಡುಬಿದಿರೆ: ಆಳ್ವಾಸ್‌ನಲ್ಲಿ ಪಟ್ಲ ಫೌಂಡೇಶನ್‌ನ ಯಕ್ಷಧ್ರುವ ವಿದ್ಯಾರ್ಥಿ ಸಮ್ಮಿಲನ

ಮೂಡುಬಿದಿರೆ: ಯಕ್ಷಗಾನವನ್ನು ಒಂದು ಪರಿಪೂರ್ಣ ಕಲೆಯನ್ನಾಗಿ ಮಾಡುವ ಮಹತ್ಕಾರ್ಯವನ್ನು ಕಲಾವಿದರು, ಭಾಗವತರು, ವೇಷಧಾರಿಗಳು ಮಾಡುತ್ತಿದ್ದಾರೆ. ಇವರ ಕೊಡುಗೆಯಿಂದ ಯಕ್ಷಗಾನ ಅತ್ಯುನ್ನತ ಸ್ಥಾನಕ್ಕೇರಿದೆ. ಸಂಗೀತ, ಭಾಗವತಿಗೆ, ಹಿಮ್ಮೇಳ, ವೇಷಭೂಷಣ, ನೃತ್ಯಗಳನ್ನು ಒಳಗೊಂಡ ಸರ್ವ ಗುಣ ಸಂಪನ್ನವಾದAತ ಕಲೆ ಯಕ್ಷಗಾನ. ಪಟ್ಲ ಸತೀಶ್ ಶೆಟ್ಟಿ ಕೇವಲ ಕಲಾವಿದ ಮಾತ್ರವಲ್ಲ. ಪಟ್ಲ ಫೌಂಡೇಶನ್ ಸ್ಥಾಪಿಸಿ ಅನೇಕ ಕಲಾವಿದರಿಗೆ ಬದುಕು ಕೊಡುತ್ತಿದ್ದಾರೆ ಎಂದು ಯಕ್ಷಧ್ರುವ ಪಟ್ಲ

ಮೂಡುಬಿದಿರೆ: ರಾಷ್ಟ್ರಮಟ್ಟದ ವೇಯ್ಟ್ ಲಿಫ್ಟಿಂಗ್ ಚಾಂಪಿಯನ್ ಶಿಫ್ : ಆಳ್ವಾಸ್ ನ ಉಷಾಗೆ ಬೆಳ್ಳಿ ಪದಕ

ಮೂಡುಬಿದಿರೆ: ಅರುಣಾಚಲ ಪ್ರದೇಶದ ಇಟಾ ನಗರದಲ್ಲಿ ನಡೆದ ರಾಷ್ಟ್ರ ಮಟ್ಟದ ವೇಯ್ಟ್ ಲಿಫ್ಟಿಂಗ್ ಚಾಂಪಿಯನ್ ಷಿಪ್ ನಲ್ಲಿ ಕರ್ನಾಟಕ ರಾಜ್ಯವನ್ನು ಪ್ರತಿನಿಧಿಸಿದ ಆಳ್ವಾಸ್ ಕಾಲೇಜಿನ ಕ್ರೀಡಾಪಟು ಉಷಾ ಎಸ್.‌ ಆರ್‌ ಬೆಳ್ಳಿ ಪದಕ ಗೆದ್ದುಕೊಂಡಿದ್ದಾರೆ. ಸ್ನಾಚ್ ವಿಭಾಗದಲ್ಲಿ 91 ಕೆ.ಜಿ, ಕ್ಲೀನ್ ಅಂಡ್ ಜೆರ್ಕ್ ವಿಭಾಗದಲ್ಲಿ118 ಕೆ.ಜಿ ಒಟ್ಟು 209 ಕೆಜಿ ಭಾರ ಎತ್ತಿದ್ದಾರೆ. ಕರ್ನಾಟಕ ರಾಜ್ಯ ದಾಖಲೆ ಆಗಿದೆ. 87 ಕೆ.ಜಿ ತೂಕದ ವಿಭಾಗದಲ್ಲಿ ಸ್ವರ್ಧಿಸಿದ್ದರು.

ಮೂಡುಬಿದಿರೆ: ಬಲಿಷ್ಠ ಭಾರತ ನಿರ್ಮಾಣಕ್ಕೆ ಮೌಲ್ಯಾಧಾರಿತ ಶಿಕ್ಷಣ ಅಗತ್ಯ : ಸಭಾಪತಿ ಯು.ಟಿ.ಖಾದರ್

ಮೂಡುಬಿದಿರೆ: ಬಲಿಷ್ಠ ಭಾರತ ನಿರ್ಮಾಣವಾಗಬೇಕಾದರೆ ತರಗತಿಯಲ್ಲಿ ಮಕ್ಕಳಿಗೆ ಮೌಲ್ಯಾಧಾರಿತ ಶಿಕ್ಷಣ ಸಿಗಬೇಕು. ಶಿಕ್ಷಣ ಸಂಸ್ಥೆಗಳು ಸಮಾಜಕ್ಕೆ ಓರ್ವ ಉತ್ತಮವಾದ ಡಾಕ್ಟರ್, ಎಂಜಿನಿಯರ್, ಸಿ.ಎ ಹಾಗೂ ವಕೀಲರನ್ನು ಮಾತ್ರ ತಯಾರು ಮಾಡುವುದಲ್ಲ ಬದಲಾಗಿ ಎಲ್ಲಾ ಕ್ಷೇತ್ರಗಳನ್ನು ನಿಭಾಯಿಸಬಲ್ಲ ಓರ್ವ ಉತ್ತಮವಾದ ರಾಜಕರಣಿಯನ್ನು ನೀಡುವ ಶಕ್ತಿ ಕೇಂದ್ರಗಳಾಗಬೇಕು ಎಂದು ರಾಜ್ಯ ವಿಧಾನಸಭೆಯ ಸಭಾಪತಿ ಯು.ಟಿ.ಖಾದರ್ ಹೇಳಿದರು. ಅವರು ವಿದ್ಯಾಗಿರಿಯ ಕೃಷಿಸಿರಿ ವೇದಿಕೆಯಲ್ಲಿ

ಮೂಡುಬಿದಿರೆ:ಆಳ್ವಾಸ್ ಕಾಲೇಜಿಗೆ ಸ್ವಾಯತ್ತ ಸ್ಥಾನಮಾನ (ಅಟೋನೊಮಸ್)

ಶಿಕ್ಷಣ, ಕ್ರೀಡೆ ಹಾಗೂ ಸಾಂಸ್ಕೃತಿಕ ಸಾಧನೆಯ ಮೂಲಕ ಅನನ್ಯವಾಗಿ ಗುರುತಿಸಿಕೊಂಡಿರುವ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಆಳ್ವಾಸ್ ಕಾಲೇಜು 2023-24ನೇ ಶೈಕ್ಷಣಿಕ ವರ್ಷದಿಂದ ಸ್ವಾಯತ್ತ ಸ್ಥಾನಮಾನ ಪಡೆದಿದೆ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ ಮೋಹನ ಆಳ್ವ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.ಕಾಲೇಜಿಗೆ 2023-24ರಿಂದ ಮುಂದಿನ ಹತ್ತು ವರ್ಷಗಳಿಗೆ ಅನ್ವಯವಾಗುವಂತೆ ಸ್ವಾಯತ್ತ ಸ್ಥಾನಮಾನ ನೀಡುವ ಕುರಿತು ವಿಶ್ವವಿದ್ಯಾಲಯ ಧನ ಸಹಾಯ ಆಯೋಗವು

ಮೂಡುಬಿದರೆ: ಆಳ್ವಾಸ್ ವಿರಾಸತ್ – ಸಪ್ತ ಮೇಳಗಳನ್ನು ಉದ್ಘಾಟಿಸಿದ ಮಾಜಿ ಸಚಿವ ಪಿ.ಜಿ.ಆರ್. ಸಿಂಧ್ಯಾ

ಮೂಡುಬಿದಿರೆ : ಲಕ್ಷಾಂತರ ಮಕ್ಕಳನ್ನು ಸತ್ಪ್ರಜೆ ಮಾಡುವ ಆಳ್ವಾಸ್, ವಿರಾಸತ್ ಹಾಗೂ ವಿವಿಧ ಮೇಳಗಳ ಮೂಲಕ ಎಲ್ಲರ ಹೃದಯದ ಕಣ್ಣು ತೆರೆಸುವ ಕೆಲಸ ಮಾಡುತ್ತಿದೆ ಎಂದು ಕರ್ನಾಟಕ ಭಾರತ್ ಸ್ಕೌಟ್ಸ್-ಗೈಡ್ಸ್ ಮುಖ್ಯ ಆಯುಕ್ತ, ಮಾಜಿ ಸಚಿವ ಪಿ. ಜಿ. ಆರ್. ಸಿಂಧ್ಯಾ ಶ್ಲಾಘಿಸಿದರು. ವಿದ್ಯಾಗಿರಿಯಲ್ಲಿ ಅಳ್ವಾಸ್ ಶಿಕ್ಷಣ ಪ್ರತಿಷ್ಠಾನ ಹಮ್ಮಿಕೊಂಡ ರಾಷ್ಟ್ರೀಯ ಸಾಂಸ್ಕೃತಿಕ ಉತ್ಸವ ’೨೯ನೇ ಆಳ್ವಾಸ್ ವಿರಾಸತ್’ ಅಂಗವಾಗಿ ಕೃಷಿಸಿರಿ ಆವರಣದಲ್ಲಿ ಅನ್ವೇಷಣಾತ್ಮಕ ಕೃಷಿಕ,

ಮೂಡುಬಿದಿರೆ: ಆಳ್ವಾಸ್ ವಿರಾಸ್-2023ರ ಮಾಧ್ಯಮ ಕೇಂದ್ರ ಉದ್ಘಾಟನೆ

ಮೂಡುಬಿದಿರೆ : ಡಿ.14.ರಿಂದ 17ರ ವರೆಗೆ ನಡೆಯುವ ‘ಆಳ್ವಾಸ್‌ವಿರಾಸತ್-23’ರ ಮಾಧ್ಯಮ ಕೇಂದ್ರವನ್ನು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ, ವಿರಾಸತ್ ನ ರೂವಾರಿ ಡಾ.ಎಂ.ಮೋಹನ ಆಳ್ವ ಉದ್ಘಾಟಿಸಿದರು. ನಂತರ  ಮಾತನಾಡಿದ ಅವರು  ಸಣ್ಣಮಟ್ಟದಿಂದ ಆರಂಭಗೊಂಡ ಆಳ್ವಾಸ್ ವಿರಾಸತ್ ಇಂದು ಲೋಕ ಪ್ರಸಿದ್ಧವಾಗಿದೆ. ವಿವಿಧತೆಯಲ್ಲಿ ಏಕತೆಯನ್ನು ಸಾರುವ ಸಂದೇಶವನ್ನು  ಹೊಂದಿದೆ. ವಿರಾಸತ್ ಯಶಸ್ಸಿನಲ್ಲಿ ಮಾಧ್ಯಮದ ಪಾತ್ರ ಮಹತ್ತರವಾದುದು ಎಂದರು. ವನ್ಯಜೀವ ಛಾಯಾಗ್ರಾಹಕ,

ಮೂಡುಬಿದಿರೆ: ರಾಷ್ಟ್ರೀಯ ಸಾಂಸ್ಕೃತಿಕ ಉತ್ಸವ ಆಳ್ವಾಸ್ ವಿರಾಸತ್‌ಗೆ ಕ್ಷಣಗಣನೆ

ಮೂಡುಬಿದಿರೆ: ಕಳೆದ 28 ವರ್ಷಗಳಿಂದ ರಾಷ್ಟ್ರ- ಅಂತರಾಷ್ಟ್ರಮಟ್ಟದ ಕಲಾವಿದರನ್ನು ಮೂಡುಬಿದಿರೆಯ ಎಂಬ ಗ್ರಾಮೀಣ ಪ್ರದೇಶಕ್ಕೆ ಕರೆಸಿ ವಿವಿಧ ರೀತಿಯ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಸಾದರಪಡಿಸುವ ಮೂಲಕ  ಮೂಡುಬಿದಿರೆಯ ಹೆಸರನ್ನು ಅಂತರಾಷ್ಟ್ರೀಯ ಮಟ್ಟದಲ್ಲಿ  ಪರಿಚಯಿಸಿದ ರಾಷ್ಟ್ರೀಯ ಸಾಂಸ್ಕೃತಿಕ ಉತ್ಸವ ಆಳ್ವಾಸ್ ವಿರಾಸತ್ ಇದೀಗ 29ನೇ ವರ್ಷದ ಸಡಗರಕ್ಕೆ ಸಜ್ಜಾಗಿದ್ದು  ಇಂದಿನಿಂದ ನಾಲ್ಕು ದಿನಗಳ ಕಾಲ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಕಲಾಸಕ್ತರಿಗೆ ರಸದೌತಣ

ಮೂಡುಬಿದಿರೆ: ಮುಸ್ರಾಲೊ ಪಟ್ಟೊ ತುಳು ಸಾಹಿತ್ಯದ ಶ್ರೇಷ್ಠ ಸಾಂಸ್ಕೃತಿಕ ಕಥನ : ಡಾ ಕೆ ಚಿನ್ನಪ್ಪ ಗೌಡ

ಮೂಡುಬಿದಿರೆ: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಹಾಗೂ ಆಳ್ವಾಸ್ ತುಳು ಸಂಸ್ಕೃತಿ ಅಧ್ಯಯನ ಕೇಂದ್ರದ ಸಹಯೋಗದಲ್ಲಿ ರಾಜಶ್ರೀ ಟಿ ರೈ ಪೆರ್ಲ ಅವರು ಬರೆದ ಮುಸ್ರಾಲೊ ಪಟ್ಟೊ ಕಾದಂಬರಿ ಬಿಡುಗಡೆ ಹಾಗೂ ಅವಲೋಕನ ಕಾರ್ಯಕ್ರಮವು ಶುಕ್ರವಾರ ವಿದ್ಯಾಗಿರಿಯ ಕುವೆಂಪು ಸಭಾಂಗಣದಲ್ಲಿ ನಡೆಯಿತು. ಕರ್ನಾಟಕ ಜಾನಪದ ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿ ಡಾ ಕೆ ಚಿನ್ನಪ್ಪ ಗೌಡ ಅವರು ಮುಸ್ರಾಲೊ ಪಟ್ಟೊ ಕಾದಂಬರಿಯ ಬಗ್ಗೆ ಅವಲೋಕನಗೈದು ಸಮಾಜದ ಸಂಬಂಧಗಳು ಛಿದ್ರಗೊಂಡು ನೈತಿಕ