ದ.ಕ.ಜಿಲ್ಲೆಯಲ್ಲಿ ಇಂದು ಮುಂಜಾನೆಯಿಂದಲೇ ಅತ್ಯಂತ ಸಡಗರ, ಸಂಭ್ರಮದಿಂದ `ಈದುಲ್ ಅಝ್ಹಾ’ ಆಚರಿಸಲಾಗುತ್ತಿದೆ. ಜಿಲ್ಲೆಯ ಮುಸ್ಲಿಮರು ಮಸೀದಿ, ಈದ್ಗಾಗಳಲ್ಲಿ ಸಾಮೂಹಿಕ ನಮಾಝ್ ನಿರ್ವಹಿಸಿ, ಈದ್ ಖುತ್ಬಾ ಮತ್ತು ಪ್ರವಚನ ಆಲಿಸಿ, ಈದ್ ಸಂದೇಶ ಸ್ವೀಕರಿಸುವುದು ಮತ್ತು ನೆರೆಮನೆ ಹಾಗೂ ಸಂಬಂಧಿಕರ ಮನೆಗೆ ಸೌಹಾರ್ದ ಭೇಟಿ ನೀಡುತ್ತಿರುವುದು ಕಂಡು ಬಂತು. ಮಂಗಳೂರಿನ
ದೇಶದಾದ್ಯಂತ ಇಂದು ಮುಸ್ಲಿಮರು ಬಕ್ರೀದ್ ಹಬ್ಬವನ್ನು ಸಂಭ್ರಮದಿಂದ ಆಚರಿಸುತ್ತಿದ್ದಾರೆ. ಹಬ್ಬದ ಹಿನ್ನೆಲೆಯಲ್ಲಿ ಮಂಗಳೂರಿನ ಉಳ್ಲಾಲದ ಕೇಂದ್ರ ಜುಮಾ ಮಸೀದಿಯಲ್ಲಿ ಈದ್ ನಮಾಝ್ ನಿರ್ವಹಿಸಿದರು. ಕೋವಿಡ್ ಹಿನ್ನೆಲೆಯಲ್ಲಿ ಈ ಬಾರಿ ಹಸ್ತಲಾಘವ, ಆಲಿಂಗನ ಇಲ್ಲದೇ ಪರಸ್ಪರ ಶುಭಾಶಯ ವಿನಿಮಯ ಮಾಡಿಕೊಂಡರು.
ತ್ಯಾಗ ಮತ್ತು ಬಲಿದಾನದ ಸಂಕೇತವಾದ ಬಕ್ರೀದ್ ಹಬ್ಬವನ್ನು ಇಂದು ಕರಾವಳಿಯಾದ್ಯಂತ ಅಚರಿಸಲಾಗುತ್ತಿದೆ. ದಕ್ಷಿಣ ಕೋವಿಡ್-19 ಹಿನ್ನೆಲೆಯಲ್ಲಿ ಸರಕಾರ ಹೊರಡಿಸಿದ ಹೊಸ ಮಾರ್ಗಸೂಚಿಯಂತೆ ದ.ಕ. ಮತ್ತು ಉಡುಪಿ ಹಾಗೂ ಕಾಸರಗೋಡು ಜಿಲ್ಲೆಯಾದ್ಯಂತ ಹಬ್ಬವನ್ನು ಆಚರಿಸಲಾಗುತ್ತಿದೆ. ಇಂದು ಬೆಳಿಗ್ಗೆ 6:30ಕ್ಕೆ ಕೆಲವು ಮಸೀದಿಗಳಲ್ಲಿ ಈದ್ ನಮಾಝ್ ಮತ್ತು ಖುತ್ಬಾ ಆರಂಭಗೊಂಡಿದೆ. ಕಳೆದ ಬಾರಿಯೂ ಕೋವಿಡ್-19 ಹಿನ್ನೆಲೆಯಲ್ಲಿ ಸರಕಾರ ಕೆಲವೊಂದು ನಿರ್ಬಂಧ ಹೇರಿದ್ದರಿಂದ ಹಬ್ಬದ