ಬಂಟ್ವಾಳ : ನದಿಯಲ್ಲಿ ನೀರು ಕಡಿಮೆಯಾಗಿರುವ ಕಾರಣ ಪಾಣೆಮಂಗಳೂರಿನಲ್ಲಿ ನೇತ್ರಾವತಿ ನದಿಗೆ ನಿರ್ಮಾಣಗೊಳ್ಳುತ್ತಿರುವ ಸೇತುವೆ ಕಾಮಗಾರಿ ಸಾಂಗವಾಗಿ ಸಾಗುತ್ತಿದೆ. ಈಗಾಗಲೇ ಎಲ್ಲಾ ಫಿಲ್ಲರ್ ನಿರ್ಮಾಣ ಕಾರ್ಯ ಪೂರ್ಣಗೊಂಡಿದ್ದು ಎರಡು ಫಿಲ್ಲರ್ಗಳ ಮಧ್ಯೆ ಬೀಮ್ ಅಳವಡಿಸುವ ಕಾರ್ಯ ನಡೆಯುತ್ತಿದೆ. ಬಿ.ಸಿ.ರೋಡು ಅಡ್ಡಹೊಳೆ ಚತುಷ್ಪಥ ಹೆದ್ದಾರಿಯ ಭಾಗವಾಗಿ
ಬಂಟ್ವಾಳ,: ಕಲಾವಿದರು ಯಾವ ರೀತಿ ಬದುಕಬೇಕು ಎನ್ನುವುದಕ್ಕೆ ಆದರ್ಶ ಪಟ್ಲ ಸತೀಶ್ ಶೆಟ್ಟಿ. ಕಲಾವಿದರ ಕಷ್ಟ ತಿಳಿದು ಅವರ ಕಷ್ಟದಲ್ಲಿ ತಾನು ಭಾಗಿಯಾಗುವ ನಿಟ್ಟಿನಲ್ಲಿ ಇಂತಹ ಫೌಂಡೇಷನ್ ಹಾಕಿ ಕೊಂಡು ವಿಶ್ವವ್ಯಾಪಿಯಾಗಿ ಕೆಲಸ ನಿರ್ವಹಿಸುವ ಈ ಫೌಂಡೇಶನ್ ಇನ್ನಷ್ಟು ಸಮಾಜ ಮುಖಿ ಸೇವೆ ನೀಡಲಿ ಎಂದು ಒಡಿಯೂರು ಶ್ರೀ ಗುರುದೇವಾನಂದ ಸ್ವಾಮೀಜಿ ಹೇಳಿದರು. ಅವರು ಬಿ.ಸಿ.ರೋಡಿನ ಹೋಟೆಲ್ ರಂಗೋಲಿ ಸಭಾಂಗಣದಲ್ಲಿ ನಡೆದ ಯಕ್ಷಧ್ರುವ ಪಟ್ಲ ಫೌಂಡೇಶನ್ ಬಂಟ್ವಾಳ ಘಟಕದ ಉದ್ಘಾಟನೆ
ಬಂಟ್ವಾಳ: ಧರ್ಮಸ್ಥಳ- ಮಂಗಳೂರು ಸರಕಾರಿ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಮುಂಭಾಗದ ಸೀಟಿನಲ್ಲಿದ್ದ ಮಹಿಳೆಯ ಜಡೆಯನ್ನು ಹಿಂಭಾಗದ ಸೀಟಿನಲ್ಲಿದ್ದ ವ್ಯಕ್ತಿಯೋರ್ವ ಸವರುವ ವಿಡಿಯೋ ತುಣುಕು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಘಟನೆಯ ಬಗ್ಗೆ ಹಿಂದು ಜಾಗರಣ ವೇದಿಕೆ ಬಂಟ್ವಾಳ ತಾಲೂಕು ಘಟಕ ಬಂಟ್ವಾಳ ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದು ಆರೋಪಿಯನ್ನು ಶೀಘ್ರವಾಗಿ ಬಂಧಿಸುವಂತೆ ಒತ್ತಾಯಿಸಿದೆ.
ಬಂಟ್ವಾಳ: ಬಂಟ್ವಾಳ ಪುರಸಭಾ ಕಚೇರಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಎಚ್ ಡಿಎಫ್ಸಿ ಬ್ಯಾಂಕ್ನಲ್ಲಿ 2 ಸಾವಿರ ರೂ.ಗಳ ನೋಟುಗಳನ್ನು ನಿರಾಕರಿಸಿರುವ ಘಟನೆ ಬೆಳಕಿಗೆ ಬಂದಿದೆ.ಪುರಸಭಾ ಕಚೇರಿಯಲ್ಲಿ ನೀರಿನ ಶುಲ್ಕ, ತೆರಿಗೆ ಮೊದಲಾದ ಶುಲ್ಕ ಪಾವತಿಗೆ ಕಾರ್ಯನಿರ್ವಹಿಸುತ್ತಿರುವ ಎನ್ಡಿಎಫ್ಸಿ ಬ್ಯಾಂಕಿನ ಕೌಂಟರ್ನಲ್ಲಿ ಪುರಸಭಾವಾಸಿಗಳಿಂದ 2 ಸಾವಿರ ರೂ.ಗಳ ನೋಟು ನಿರಾಕರಿಸಲಾಗಿದ್ದು, ಬೂಡಾ ಮಾಜಿ ಅಧ್ಯಕ್ಷ ಬಿ.ದೇವದಾಸ್
ಬಂಟ್ಚಾಳ ತಾಲೂಕಿನ ನರಹರಿ ಪರ್ವತ ಕ್ಷೇತ್ರದಲ್ಲಿ ನಾಲ್ಕು ತೀರ್ಥ ಬಾವಿಗಳು ಸುಡು ಬೇಸಿಗೆಯಲ್ಲೂ ಜಲಸಮೃದ್ದವಾಗಿದೆ. ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಬಿಸಿಲಿನ ತಾಪಕ್ಕೆ ಭೂಮಿಯಲ್ಲಿ ನೀರಿನ ಸೆಲೆ ಬರಡಾಗುತ್ತಿದೆ. ನದಿ, ಕರೆ,ಕುಂಟೆ, ಬಾವಿ, ತೊರೆ, ಡ್ಯಾಂಗಳಲ್ಲಿ ನೀರು ಬತ್ತಿ ತಳ ಕಾಣಿಸುತ್ತಿದ್ದರೂ, 350 ಅಡಿ ಎತ್ತರದಲ್ಲಿ ಕರ್ಗಲ್ಲು ಬೆಟ್ಟದ ಮೇಲಿರುವ ನರಹರಿ ಪರ್ವತದ ತೀರ್ಥ ಬಾವಿಗಳು ನೀರಿನಿಂದ ತುಂಬಿ ತುಳುಕುವ ಮುಲಕ ಭಕ್ತಾಧಿಗಳಲ್ಲಿ ಅಚ್ಚರಿ
ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಪುತ್ತೂರು ಜಿಲ್ಲಾ ಸಂಘ ಚಾಲಕ, ಸಾಮಾಜಿಕ, ಧಾರ್ಮಿಕ,ಸಹಕಾರಿ ನೇತಾರ ಕೊಡ್ಮಾಣ್ ಕಾಂತಪ್ಪ ಶೆಟ್ಟಿ ( 61)ಅವರು ಅಲ್ಪಕಾಲದ ಅಸೌಖ್ಯದಿಂದ ಮಂಗಳೂರಿನ ಆಸ್ಪತ್ರೆಯಲ್ಲಿ ಸೋಮವಾರ ನಿಧನರಾದರು. ಸದಾ ನಗುಮುಖ, ಗಂಭೀರ ವ್ಯಕ್ತಿತ್ವ,ನೇರ ನಡೆ ನುಡಿಯವರಾಗಿದ್ದ ಕೆಲ ಸಮಯಗಳಿಂದ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು,ಆಸ್ಪತ್ರೆಗೆ ದಾಖಲಿಸಲಾಗಿತ್ತು. ಸೋಮವಾರ ಮಧ್ಯಾಹ್ನ 12 ಗಂಟೆಯ ಅವರು ಕೊನೆಯುಸಿರೆಳೆದಿದ್ದಾರೆ ಎಂದು ಆಸ್ಪತ್ರೆಯ ಮೂಲಗಳು
ಬಂಟ್ವಾಳ: ಕೇಂದ್ರ ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯವು ಸ್ವಚ್ಛ ಭಾರತ್ ಮಿಷನ್ ನಗರ 2.0 ಯೋಜನೆಯಡಿ ಸ್ಥಳೀಯ ಮಟ್ಟದಲ್ಲಿ ಪರಿಣಾಮ ಬೀರುವ ಅಭಿಯಾನವನ್ನು ಆರಂಭಿಸಿದ್ದು, ನನ್ನ ಜೀವನ ನನ್ನ ಸ್ವಚ್ಛನಗರ ಯೋಜನೆ ಕಾರ್ಯಕ್ರಮಕ್ಕೆ ಬಂಟ್ವಾಳ ಪುರಸಭೆ ವ್ಯಾಪ್ತಿಯಲ್ಲಿ ಬಿ.ಸಿ.ರೋಡ್ ಬಸ್ ನಿಲ್ದಾಣದಲ್ಲಿ ಶನಿವಾರ ಚಾಲನೆ ನೀಡಲಾಯಿತು. ಮಂಗಳೂರು ನಗರ ಕೋಶದ ಯೋಜನಾ ನಿರ್ದೇಶಕ ಅಬಿದ್ ಗದ್ಯಾಲ್ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.ನವೀಕರಿಸಿ ಮರುಬಳಸಬಹುದಾದ ವಸ್ತುಗಳ
ಬಂಟ್ವಾಳ: ಮಂಗಳೂರು ಶಾಸಕ ಯು.ಟಿ. ಖಾದರ್ ಅವರು ಬುಧವಾರ ಸಂಜೆ ಬಂಟ್ವಾಳದಲ್ಲಿ ಮಾಜಿ ಕೇಂದ್ರ ಸಚಿವ ಬಿ. ಜನಾರ್ದನ ಪೂಜಾರಿಯವರನ್ನು ಭೇಟಿ ಮಾಡಿ ಆರೋಗ್ಯ ವಿಚಾರಿಸಿ ಆಶೀರ್ವಾದ ಪಡೆದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ ಜನಾರ್ದನ ಪೂಜಾರಿಯವರು ನಮ್ಮ ಪಕ್ಷದ ಹಿರಿಯ ನಾಯಕರು. ತನ್ನ ವಿದ್ಯಾರ್ಥಿ ಜೀವನದಲ್ಲಿ ರಾಜಕೀಯ ಚಟುವಟಿಕೆಯಲ್ಲಿ ತೊಡಗಿಸಿಕೊಳ್ಳಲು ಬಿ. ಜನಾರ್ದನ ಪೂಜಾರಿಯವರು ಮಾರ್ಗದರ್ಶನ ಮಾಡಿದ್ದರು. ಅವರ ಕಠಿಣ ಪರಿಶ್ರಮ, ಪ್ರಾಮಾಣಿಕತೆ, ಸಾಮಾಜಿಕ
ಬಂಟ್ವಾಳ: ಮಾರಾಟಕ್ಕಲದ ಸಿಮೆಂಟ್ಗಳನ್ನು ಬಿಜೆಪಿ ಮುಖಂಡನ ಮನೆಯಲ್ಲಿ ಅಕ್ರಮವಾಗಿ ದಾಸ್ತನಿರಿಸಿದ್ದಲ್ಲದೆ ಇದೇ ಸಿಮೆಂಟ್ ಬಳಸಿ ಎರಡು ಮನೆಗಳನ್ನು ನಿರ್ಮಿಸಿರುವ ಬಗ್ಗೆ ಸೂಕ್ತ ಕಾನೂನು ತನಿಖೆ ಆಗಬೇಕೆಂದು ರಾಜೀವ ಗಾಂಧಿ ಪಂಚಾಯತ್ ರಾಜ್ ಸಂಘಟನೆಯ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಜಗದೀಶ್ ಕೊಯಿಲ ಆಗ್ರಹಿಸಿದ್ದಾರೆ. ಬಿ.ಸಿ. ರೋಡಿನ ಪ್ರೆಸ್ಕ್ಲಬ್ನಲ್ಲಿ ಅವರು ಈ ಬಗ್ಗೆ ಸುದ್ದಿಗೋಷ್ಟಿ ನಡೆಸಿ ಮಾತನಾಡಿ ಇತ್ತೀಚೆಗೆ ಬಿ. ಮೂಡ ಗ್ರಾಮದ
ಬಂಟ್ವಾಳ: ರಮಾನಾಥ ರೈ ಒಳ್ಳೆಯ ಮನುಷ್ಯ.. ಒಳ್ಳೆಯ ಅಭಿವೃದ್ಧಿ ಕಾರ್ಯಗಳನ್ನು ಮಾಡಿದ್ದಾರೆ.. ಅವರು ಚುನಾವಣೆಯಲ್ಲಿ ಸೋತರೆ ನಾನು ಸತ್ತಂತೆ.. ನಾನು ಸಾಯಬಾರದೆಂದಿದ್ದರೆ ಅವರನ್ನು ಗೆಲ್ಲಿಸಿ..ಬಂಟ್ವಾಳ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ, ಮಾಜಿ ಸಚಿವ ಬಿ.ರಮಾನಾಥ ರೈ ಅವರ ಪರವಾಗಿ, ಭಾವನಾತ್ಮಕವಾಗಿ ಮೆಚ್ಚುಗೆಯ ಮಾತಗಳನ್ನಾಡಿದ್ದು ಕೇಂದ್ರದ ಮಾಜಿ ಸಚಿವ ಬಿ. ಜನಾರ್ದನ ಪೂಜಾರಿ. ಭಾನುವಾರ ಬಿ.ಸಿ.ರೋಡಿನ ಬಸ್ತಿಪಡ್ಪುವಿನಲ್ಲಿರುವ ತನ್ನ ನಿವಾಸ ಚೆನ್ನಮ್ಮ