Home Posts tagged #bantwala (Page 13)

ಸಜೀಪಮುನ್ನೂರು ಗ್ರಾ.ಪಂ. ಅಭಿವೃದ್ಧಿ ಅಧಿಕಾರಿಯಿಂದ ಅಧಿಕಾರ ದುರುಪಯೋಗ: ಕಾನೂನು ಕ್ರಮಕ್ಕೆ ಎಸ್‌ಡಿಪಿಐ ಬೆಂಬಲಿತ ಸದಸ್ಯರ ಆಗ್ರಹ

ಬಂಟ್ವಾಳ: ಸಜೀಪಮುನ್ನೂರು ಗ್ರಾಮ ಪಂಚಾಯತಿ ಅಭಿವೃದ್ದಿ ಅಧಿಕಾರಿಯು ಅಧಿಕಾರ ದುರುಪಯೋಗ ಪಡಿಸುತ್ತಿದ್ದು ಅವರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಿ ಕರ್ತವ್ಯದಿಂದ ವಜಾಗೊಳಿಸುವಂತೆ ಸಜೀಪಮುನ್ನೂರು ಗ್ರಾ.ಪಂ.ನ ಎಸ್‌ಡಿಪಿಐ ಬೆಂಬಲಿತ ಸದಸ್ಯರು ಆಗ್ರಹಿಸಿದ್ದಾರೆ. ಬಿ.ಸಿ.ರೋಡಿನ ಪ್ರೆಸ್‌ಕ್ಲಬ್‌ನಲ್ಲಿ ಸುದ್ದಿಗೋಷ್ಟಿಯಲ್ಲಿ ಸ್ಥಳೀಯ ನಾಯಕ ಮುಬಾರಕ್ ಕಾರಾಜೆ

ಬಂಟ್ವಾಳ: ಗೂಡ್ಸ್ ಟೆಂಪೋ ಡಿಕ್ಕಿ, ಒಂದೇ ದಿನದಲ್ಲಿ ಕಿತ್ತು ಹೋಯಿತು ಸೇತುವೆ ತಡೆಬೇಲಿ!

ಬಂಟ್ವಾಳ: ಬ್ರಿಟಿಷರ ಕಾಲದಲ್ಲಿ ನಿರ್ಮಾಣಗೊಂಡು ಶತಮಾನ ಪೂರೈಸಿರುವ ಪಾಣೆಮಂಗಳೂರಿನ ಹಳೆ ಉಕ್ಕಿನ ಸೇತುವೆಯಲ್ಲಿ ಘನವಾಹನಗಳ ಸಂಚಾರ ನಿಷೇಧಿಸುವ ಉದ್ದೇಶದಿಂದ ಮೇಲ್ಭಾಗಕ್ಕೆ ಹಾಕಿರುವ ತಡೆಬೇಲಿ ಒಂದೇ ದಿನದಲ್ಲಿ ಕಿತ್ತು ಬಿದ್ದಿದೆ. ಶುಕ್ರವಾರ ಸೇತುವೆಯ ಎರಡೂ ಬದಿಗಳಲ್ಲೂ ಕಬ್ಬಿಣದ ತಡೆಬೇಲಿ ಅಳವಾಡಿಸಲಾಗಿತ್ತು. ಸರಕು ಸಾಗಿಸುವ ಗೂಡ್ಸ್ ಟೆಂಪೋವೊಂದು ತಡೆಬೇಲಿಯ ಅರಿವಿಲ್ಲದೆ ಸಂಚರಿಸಿದ ಕಾರಣ ಒಂದು ಪಾರ್ಶ್ವದ ಕಬ್ಬಿಣದ ಬೀಮ್ ಕೆಳಕ್ಕುರುಳಿದೆ. ಕಳೆದ ಕೆಲ ದಿನಗಳ

ಬಂಟ್ವಾಳ|| ಪಾಳುಬಿದ್ದಿರುವ ಹಳೆಯ ತಾಲೂಕು ಕಚೇರಿ: ನಿರ್ವಹಣೆಯಿಲ್ಲದ ಕಟ್ಟಡದ ಸುತ್ತಮುತ್ತ ಪೊದೆಗಳ ರಾಶಿ

ಬಂಟ್ವಾಳ: ಬಿ.ಸಿ.ರೋಡಿನ ಸಿವಿಲ್ ನ್ಯಾಯಾಲಯದ ಬಳಿ ತಾಲೂಕು ಕಚೇರಿ ಎನ್ನುವ ಕಟ್ಟಡವೊಂದಿದೆ. ಯಾರಾದರೂ ಸಾರ್ವಜನಿಕರು ಇದೇ ತಾಲೂಕು ಕಚೇರಿ ಎಂದು ಈ ಕಟ್ಟಡದ ಸುತ್ತ ಸುತ್ತುತ್ತಿದ್ದರೆ ದಿನವಿಡಿ ಸುತ್ತುತಲೇ ಇರಬೇಕಾಗುತ್ತದೆ. ತಾಲೂಕು ಕಚೇರಿ ಇಲ್ಲಿಂದ ಸ್ಥಳಾಂತರಗೊಂಡರೂ ಹಳೆ ಕಟ್ಟಡ ಇನ್ನೂ ಅದೇ ಹೆಸರಿನಲ್ಲಿ ಉಳಿದಿರುವುದರಿಂದ ಸಾರ್ವಜನಿಕರಲ್ಲಿ ಗೊಂದಲ ಮೂಡಿಸುತ್ತಿದೆ. ಬಿ.ಸಿ.ರೋಡಿನಲ್ಲಿದ್ದ ಹಳೇ ತಾಲೂಕು ಕಚೇರಿಯನ್ನು ತೆರವುಗೊಳಿಸಿ ಅದೇ ಸ್ಥಳದಲ್ಲಿ ಮಿನಿವಿಧಾನ

ಬಂಟ್ವಾಳ: ವಿಷ ಜಂತುಗಳ ಆವಾಸ ಸ್ಥಾನವಾಗಿರುವ ಬಿ.ಸಿ ರೋಡ್‍ನಲ್ಲಿದ್ದ ಹಳೆಯ ಉಪನೋಂದಾವಣೆ ಕಚೇರಿ

ಬಂಟ್ವಾಳ: ಬಿ.ಸಿ.ರೋಡಿನ ಉಪನೋಂದಾವಣೆ ಕಚೇರಿ ತಾಲೂಕು ಆಡಳಿತ ಸೌಧಕ್ಕೆ ಸ್ಥಳಾಂತರಗೊಂಡ ಬಳಿಕ ನ್ಯಾಯಾಲಯ ರಸ್ತೆಯಲ್ಲಿರುವ ಹಳೆ ಕಟ್ಟಡ ನಿರ್ವಹಣೆಯ ಕೊರತೆಯಿಂದ ಪಾಳು ಬಿದ್ದಂತಿದೆ. ಕಟ್ಟಡದ ಸುತ್ತ ಪೆÇದೆಗಳು ಬೆಳೆದು ವಿಷ ಜಂತುಗಳ ಆವಸ ಸ್ಥಾನವಾಗಿದೆ. ಸಾರ್ವಜನಿಕರಿಗೆ, ಭಿಕ್ಷಕರಿಗೆ ಉಚಿತವಾಗಿ ಮಲಮೂತ್ರ ವಿಸರ್ಜನೆ ಮಾಡುವ ಸ್ಥಳವಾಗಿ ಮಾರ್ಪಟ್ಟಿದ್ದು, ನಗರ ಮಧ್ಯೆ ರೋಗವಾಹಕಗಳು ಸಂತಾನಾಭಿವೃದ್ದಿ ಮಾಡುವ ಸ್ಥಳವಾಗಿ ಪರಿವರ್ತನೆಗೊಂಡಿದೆ.

ಬಂಟ್ವಾಳ: ಕಾರು ಡಿಕ್ಕಿ ಹೊಡೆದು ಪಾದಚಾರಿ ಯುವತಿ ಸಾವು

ಬಂಟ್ವಾಳ: ಕಾರು ಡಿಕ್ಕಿ ಹೊಡೆದು ಪಾದಚಾರಿ ಯುವತಿಯೋರ್ವಳು ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ ೭೫ ರ ಕಲ್ಲಡ್ಕ ಸಮೀಪದ ದಾಸಕೋಡಿ ಎಂಬಲ್ಲಿ ನಡೆದಿದೆ. ವೀರಕಂಭ ಗ್ರಾಮದ ಬಾಯಿಲ ನಿವಾಸಿ ಶೇಖರ ಪೂಜಾರಿ ಅವರ ಪುತ್ರಿ ಪಾವನ (೨೩) ಮೃತಪಟ್ಟ ಯುವತಿ. ಬಿ.ಸಿ.ರೋಡಿನ ಸ್ಕ್ಯಾನಿಂಗ್ ಸೆಂಟರ್‌ನಲ್ಲಿ ಕೆಲಸ ಮಾಡುತ್ತಿದ್ದ ಯುವತಿ ಸಂಜೆ ಕೆಲಸ ಬಿಟ್ಟು ದಾಸಕೋಡಿ ಎಂಬಲ್ಲಿ ಬಸ್ಸಿನಿಂದ ಇಳಿದು ಹೆದ್ದಾರಿ ಬದಿಯಲ್ಲಿ ನಡೆದುಕೊಂಡು ಹೋಗುವ ವೇಳೆ ಕಾರು ಡಿಕ್ಕಿ ಹೊಡೆದಿದೆ

ಬಂಟ್ವಾಳ: ರೈಲ್ವೆ ಹಳಿ ಮೇಲೆ ಉರುಳಿಬಿದ್ದ ಸಿಮೆಂಟ್ ಮಿಕ್ಸರ್ ಯಂತ್ರವಿದ್ದ ವಾಹನ, ಚಾಲಕನಿಗೆ ಗಾಯ

ಬಂಟ್ವಾಳ ರೈಲ್ವೆ ನಿಲ್ದಾಣದ ಎರಡನೇ ಪ್ಲಾಟ್ ಫಾರ್ಮ್ ನಲ್ಲಿ ಅಭಿವೃದ್ಧಿ ಕಾಮಗಾರಿ ನಡೆಯುತ್ತಿದ್ದು, ಈ ಸಂದರ್ಭ ಚಲಿಸುವ ಸಿಮೆಂಟ್ ಮಿಕ್ಸರ್ ಯಂತ್ರ ಒಳಗೊಂಡ ವಾಹನವೊಂದು ರೈಲ್ವೆ ಹಳಿ ಮೇಲೆ ಉರುಳಿಬಿದ್ದಿದೆ. ಘಟನೆಯಲ್ಲಿ ಅದನ್ನು ಚಲಾಯಿಸುತ್ತಿದ್ದ ಚಾಲಕ ಗಾಯಗೊಂಡಿದ್ದಾರೆ. ಎರಡನೇ ಪ್ಲಾಟ್ ಫಾರ್ಮ್ ನಲ್ಲೂ ರೈಲ್ವೆ ಸಂಚಾರವಿದ್ದು, ಘಟನೆ ಸಂಭವಿಸುವ ಹೊತ್ತಿನಲ್ಲಿ ರೈಲು ಇರದಿದ್ದ ಕಾರಣ ದೊಡ್ಡ ಅನಾಹುತ ತಪ್ಪಿಹೋಗಿದೆ. ಬಳಿಕ ಅದರ ತೆರವು ಕಾರ್ಯಾಚರಣೆಗೆ

ಬಂಟ್ವಾಳ: ಪಾಣೆಮಂಗಳೂರು ಹಳೆ ಸೇತುವೆಯಲ್ಲಿ ಬಿರುಕು?

ಬಂಟ್ವಾಳ: ಬ್ರಿಟಿಷರ ಕಾಲದಲ್ಲಿ ನಿರ್ಮಾಣಗೊಂಡಿರುವ ಪಾಣೆಮಂಗಳೂರಿನ ಹಳೆ ಉಕ್ಕಿನ ಸೇತುವೆಯಲ್ಲಿ ಬಿರುಕು ಕಾಣಿಸಿಕೊಂಡಿದೆ.ಸ್ಥಳೀಯರೊಬ್ಬರು ಭಾನುವಾರ ರಾತ್ರಿ ಸೇತುವೆಯಲ್ಲಿ ಬಿರುಕನ್ನು ಗಮನಿಸಿ ಕಂದಾಯ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದಿದ್ದಾರೆ. ತಕ್ಷಣ ಕಂದಾಯ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಘನ ವಾಹನಗಳು ಸೇತುವೆಯಲ್ಲಿ ಸಂಚರಿಸದಂತೆ ನಿರ್ಭಂದ ವಿಧಿಸಲು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪಾಣೆಮಂಗಳೂರಿನ ಹಳೆಯ ಉಕ್ಕಿನ ಸೇತುವೆ 1914ರಲ್ಲಿ

ನೋಡುಗರ ಕಣ್ ಮನಸೆಳೆದ ಮೀಟರ್ ನುಗ್ಗೆಕಾಯಿ..!!

ಬಂಟ್ವಾಳ : ನುಗ್ಗೆಕಾಯಿ ಎಂಬ ಕ್ಷಣ ನಮಗೆ ಅದರ ಔಷಧೀಯ ಗುಣಗಳು ನೆನಪಿಗೆ ಬರುತ್ತದೆ ಹಾಗೆ ನುಗ್ಗೆ ಸೊಪ್ಪಿನಲ್ಲಿ ರಕ್ತಹೀನತೆಗೆ ಒಳ್ಳೆಯ ಔಷಧಿ ಕ್ಯಾಲ್ಸಿಯಂ ವಿಟಮಿನ್ ಎ ವಿಟಮಿನ್ ಇ ಪೊಟ್ಯಾಷಿಯಂ ಲೈಂಗಿಕ ಕಾಯಿಲೆಗಳಿಗೆ ನುಗ್ಗೇಕಾಯಿ ರಾಮಬಾಣ ನುಗ್ಗೆಕಾಯಿಯನ್ನು ತಿನ್ನುವುದರಿಂದ ಸಿಡುಬು ಬರುವುದಿಲ್ಲ ಮೂಳೆಗಳ ಬಲ ಹೆಚ್ಚುತ್ತದೆ ಲೈಂಗಿಕ ಶಕ್ತಿ ಹೆಚ್ಚುತ್ತದೆ ಮದುಮೇಹಿಗಳಿಗೆ ಉತ್ತಮಚೋಟುದ್ದ ವಿದ್ದ ನುಗ್ಗೆಕಾಯಿ ಫಿಟುದ್ದ ಆಯಿತು ಹೈಬ್ರಿಡ್ ಬಂತು ಆದರೆ

ಬಂಟ್ವಾಳ:ಇರಾ ಕುರಿಯಾಡಿ ತೋಟ ಸದಾಶಿವ ಶೆಟ್ಟಿ ನಿಧನ

ಬಂಟ್ವಾಳ: ಇರಾ ಗ್ರಾಮದ ಕುರಿಯಾಡಿ ತೋಟ ನಿವಾಸಿ ಸದಾಶಿವ ಶೆಟ್ಟಿ (80) ಗುರುವಾರ ಸಂಜೆ ಸ್ವಗ್ರಹದಲ್ಲಿ ಅಲ್ಪಕಾಲದ ಅಸೌಖ್ಯದಿಂದ ನಿಧನರಾದರು. ದೇರಳಕಟ್ಟೆ ಖಾಸಗಿ ಆಸ್ಪತ್ರೆಯಲ್ಲಿ ಕೆಲದಿನಗಳ ಹಿಂದೆ ಚಿಕಿತ್ಸೆ ಪಡೆದು ಮನೆಯಲ್ಲಿ ವಿಶ್ರಾಂತಿ ಪಡೆಯುತ್ತಿದ್ದವರು ಸಂಜೆ 6ರ ಹೊತ್ತಿಗೆ ಹ್ರದಯಘಾತದಿಂದ ಕೊನೆಯುಸಿರೆಳೆದರು. ಊರಿನಲ್ಲಿ ಕೃಷಿ ಕುಟುಂಬದ ಹಿನ್ನೆಲೆ ಹೊಂದಿದ್ದು ಬಳಿಕ ಸ್ವಂತ ಉದ್ಯಮವನ್ನು ಅರಸಿ ಮುಂಬೈಗೆ ತೆರಳಿ ಸುದೀರ್ಘವಾಗಿ ಅಲ್ಲೇ ಕುಟುಂಬದೊಂದಿಗೆ

ಹಿಂದಿ ಶಿಕ್ಷಕ ರತ್ನ ರಾಜ್ಯ ಪ್ರಶಸ್ತಿಗೆ ದಡ್ಡಲಕಾಡು ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಮುಖ್ಯ ಶಿಕ್ಷಕ ರಮಾನಂದ ಆಯ್ಕೆ

ಬಂಟ್ವಾಳ: ಹಿಂದಿ ಶಿಕ್ಷಕರಿಗೆ ಕೊಡುವ ರಾಜ್ಯ ಹಿಂದಿ ಶಿಕ್ಷಕ ರತ್ನ ಪ್ರಶಸ್ತಿಗೆ ಸರಕಾರಿ ಆಂಗ್ಲ ಮಾಧ್ಯಮ ಪ್ರೌಢ ಶಾಲೆ ದಡ್ಡಲ ಕಾಡು ಹಿಂದಿ ಭಾಷಾ ಶಿಕ್ಷಕ ರಮಾನಂದ ಇವರು ಆಯ್ಕೆಯಾಗಿರುತ್ತಾರೆ. ಹಿಂದಿ ವಿಷಯದ ರಾಜ್ಯ ಸಂಪನ್ಮೂಲ ವ್ಯಕ್ತಿಯಾಗಿ, ತಾಲೂಕು ಹಾಗೂ ಜಿಲ್ಲಾ ಸಂಘದ ಪದಾಧಿಕಾರಿಗಳಾಗಿ, ಹಿಂದಿ ಸಂಪನ್ಮೂಲ ಕ್ರೋಡಿಕರಣ ಹಾಗೂ ಪುಸ್ತಕ ರಚನಾ ಕಾರ್ಯದಲ್ಲಿ ತೊಡಗಿಸಿಕೊಂಡು ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆ ಪ್ರಮಾಣಿಕ ಪ್ರಯತ್ನ ಹಾಗೂ ಕರ್ತವ್ಯ