ಬಂಟ್ವಾಳ: ನಾವು ಎಲ್ಲೆಂದರಲ್ಲಿ ಎಸೆದ ತ್ಯಾಜ್ಯ ಕೊಳೆತು ದುರ್ವಾಸನೆ ಬೀರಿದರೆ ಪರಿಸರಕ್ಕೂ ಹಾನಿ, ಆರೋಗ್ಯಕ್ಕೂ ತೊಂದರೆ. ಒಣ ಕಸಗಳನ್ನು ಹೇಗಾದರೂ ವಿಲೇವಾರಿ ಮಾಡಬಹುದು ಆದರೆ ನಿತ್ಯ ಸಂಗ್ರಹವಾಗುವ ಹಸಿ ಕಸವನ್ನು ವಿಲೇವಾರಿ ಮಾಡುವುದೇ ಪ್ರತೀ ಆಡಳಿತ ವ್ಯವಸ್ಥೆಯ ಮುಂದಿರುವ ಸವಾಲು. ಈ ಸಮಸ್ಯೆಗೆ ಪರಿಹಾರ ಎನ್ನುವಂತೆ ಬಂಟ್ವಾಳ ಶಾಸಕ ರಾಜೇಶ್ ನಾಕ್
ಬಂಟ್ವಾಳ: ಸಮಾಜದ ರಕ್ಷಣೆ ಮಾಡುತ್ತೇವೆಂದು ನೈತಿಕ ಗೂಡಂಗಿರಿ ಮಾಡುವ ಪ್ರವೃತ್ತಿ ಬಿಜೆಪಿ ಹಾಗೂ ಸಂಘಪರಿವಾರಕ್ಕೆ ಸೇರಿದ ವ್ಯಕ್ತಿಗಳಿಂದ ನಡೆಯುತಿದ್ದು ಇದನ್ನು ಬಂಟ್ವಾಳ ಹಾಗೂ ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಖಂಡಿಸುವುದಾಗಿ ಮಾಜಿ ಸಚಿವ, ಕೆಪಿಸಿಸಿ ಉಪಾಧ್ಯಕ್ಷ ಬಿ. ರಮನಾಥ ರೈ ಹೇಳಿದರು. ಅವರು, ಬಿ.ಸಿ.ರೋಡಿನಲ್ಲಿರುವ ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಸಮಿತಿ ಕಚೇರಿಯಲ್ಲಿ ಕರೆದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು ಇಂತಹ ಕೃತ್ಯ ಎಸಗುವವರ ವಿರುದ್ದ
ಬಂಟ್ವಾಳ: ಅರಳ ಗ್ರಾಮದ ದೇಂಬುಡೆ ಎಂಬಲ್ಲಿ ಗುಡ್ಡ ಕುಸಿದು ಅಪಾಯಕಾರಿ ಸ್ಥಿತಿ ನಿರ್ಮಾಣವಾಗಿದೆ. ಇಲ್ಲಿನ ನಿವಾಸಿ ರುಡಾಲ್ಫ್ ಮರ್ಕ್ ಲೋಬೋ ಅವರ ಮನೆ ಬಳಿ ಈ ಘಟನೆ ನಡೆದಿದೆ. ಕಳೆದ ವರ್ಷ ಇದೇ ಸ್ಥಳದಲ್ಲಿ ಗುಡ್ಡ ಕುಸಿದು ಮನೆಮಂದಿಯನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲಾಗಿತ್ತು. ಬಳಿಕ ಮಣ್ಣು ಕುಸಿಯದಂತೆ ಕಾಂಕ್ರೀಟ್ ತಡೆಗೋಡೆಯನ್ನು ನಿರ್ಮಿಸಲಾಗಿತ್ತು. ಆದರೆ ಈ ಭಾರಿ ಮತ್ತೆ ಮೇಲ್ಭಾದ ಗುಡ್ಡ ಕುಸಿದು ಆತಂಕದ ಸ್ಥಿತಿ ನಿರ್ಮಾಣಗೊಂಡಿದೆ. ಗುಡ್ಡದಲ್ಲಿದ್ದ
ಬಂಟ್ಚಾಳ: ಭಾರಿ ಮಳೆಗೆ ಅಮ್ಟಾಡಿ ಗ್ರಾಮದ ಮಹಲ್ ತೋಟ ರಸ್ತೆ ಬಳಿ ಬೃಹತ್ ಗಾತ್ರದ ಬಂಡೆ ಕಲ್ಲೊಂದು ರಸ್ತೆಗೆ ಉರುಳಿ ಬಿದ್ದಿದೆ. ಲೊರಟ್ಟೊ ಪದವಿನಿಂದ ಮಹಲ್ ತೋಟ ಸಂಪರ್ಕಿಸುವ ರಸ್ತೆ ಇದಾಗಿದ್ದು ಬೆಳಿಗ್ಗೆ 8.30ರ ವೇಳೆಗೆ ಈ ಘಟನೆ ನಡೆದಿದೆ. ಪ್ರತಿದಿನ ಈ ರಸ್ತೆಯ ಮೂಲಕ ಶಾಲಾ ವಿದ್ಯಾರ್ಥಿಗಳು ತೆರಳುತ್ತಿದ್ದು ಶಾಲೆಗೆ ರಜೆ ಇದ್ದುದರಿಂದ ದೊಡ್ಡ ಅನಾಹುತವೊಂದು ತಪ್ಪಿದಂತಾಗಿದೆ. ಅಮ್ಟಾಡಿ ಪಂಚಾಯತಿ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಕಲ್ಲು ತೆರವು ಕಾರ್ಯ ಕೈ
ಬಂಟ್ವಾಳ: ಮಣಿಪುರದಲ್ಲಿ ನಡೆದ ಮಹಿಳೆಯರ ಮೇಲಿನ ದೌರ್ಜನ್ಯ, ಆಡಳಿತರೂಢ ಸರಕಾರದ ವೈಫಲ್ಯ ಹಾಗೂ ಮಣಿಪುರ ರಾಜ್ಯದಲ್ಲಿ ಶಾಂತಿ ಸುವ್ಯವಸ್ಥೆಯನ್ನು ಕಾಪಾಡಲು ಒತ್ತಾಯಿಸಿ, ಕೇಂದ್ರ ಸರಕಾರದ ವಿರುದ್ಧ ಮಾಜಿ ಸಚಿವ ಬಿ. ರಮಾನಾಥ ರೈಯವರ ನೇತೃತ್ವದಲ್ಲಿ ಬಂಟ್ವಾಳ ಹಾಗೂ ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ನೇತೃತ್ವದಲ್ಲಿ ಪ್ರತಿಭಟನೆ ಬಿ.ಸಿ.ರೋಡಿಲ್ಲಿ ನಡೆಯಿತು. ಪ್ರತಿಭಟನಾ ಸಭೆಯನ್ನು ಉದ್ದೇಶಿಸಿ ಮಾಜಿ ಸಚಿವ ಬಿ.ರಮಾನಾಥ ರೈ ಮಾತನಾಡಿ ಭೇಟಿ ಬಚಾವೋ ಭೇಟಿ ಪಡಾವೋ ಎಂದು
ಬಂಟ್ವಾಳ ತಾಲೂಕು ವ್ಯಾಪ್ತಿಯಲ್ಲಿ ಭಾರೀ ಮಳೆಯಾಗುತ್ತಿದ್ದು ನದಿ ತೀರದ ತಗ್ಗು ಪ್ರದೇಶಗಳು ಜಲಾವೃತಗೊಂಡಿದೆ. ಪಾಣೆಮಂಗಳೂರು ಸಮೀಪದ ಆಲಡ್ಕ ಪರಿಸರದಲ್ಲಿ ಮನೆಗೆ ನೀರು ನುಗ್ಗಿದ್ದು ಮನೆ ಮಂದಿ ಹಾಗೂ ಸೊತ್ತುಗಳನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರ ಮಾಡಲಾಗುತ್ತಿದೆ. ಪೊಲೀಸರು ಈ ಮನೆಗಳಿಗೆ ತೆರಳಿ ಸ್ಥಳಾಂತರಗೊಳ್ಳುವಂತೆ ಸೂಚಿಸಿದರು. ನದಿಯಲ್ಲಿ ನೀರಿನ ಮಟ್ಟ ಕ್ಷಣದಿಂದ ಕ್ಷಣಕ್ಕೆ ಏರಿಕೆಯಾಗುತ್ತಿದ್ದು ಜನತೆಯಲ್ಲಿ ಆತಂಕ ಮೂಡಿಸಿದೆ.
ಬಂಟ್ವಾಳ: ಜಿಲ್ಲೆಯ ಹವಾಗುಣಕ್ಕೆ ಬೆಳೆ ಹೊಂದಿಕೆಯಾಗುವುದಿಲ್ಲ, ನೀರಾವರಿ ಸಮಸ್ಯೆ, ಅತಿವೃಷಿ, ಅನಾವೃಷಿಯಿಂದಾಗಿ ಉತ್ತಮ ಇಳುವರಿ ಪಡೆಯಲು ಸಾಧ್ಯವಿಲ್ಲ ಎನ್ನುವ ಕಾರಣಕ್ಕೆ ಸಾಕಷ್ಟು ಜಮೀನಿದ್ದರೂ ಕೂಡ ದೊಡ್ಡ ಮಟ್ಟದಲ್ಲಿ ವಿದೇಶಿ ಹಣ್ಣುಗಳನ್ನು ಬೆಳೆಯಲು ಜಿಲ್ಲೆಯ ರೈತರು ನಿರಾಸಕ್ತಿ ತೋರುತ್ತಾರೆ. ಆದರೆ ಬಂಟ್ವಾಳದ ಹೊಟೇಲ್ ಉದ್ಯಮಿಯೊಬ್ಬರು ಸುಮಾರು 2 ಎಕರೆ ಭೂ ಪ್ರದೇಶದಲ್ಲಿ ಡ್ರ್ಯಾಗನ್ ಪ್ರೂಟ್ ಬೆಳೆದು ಯಶಸ್ವಿಯಾಗುವುದರ ಜೊತೆಗೆ ಉತ್ತಮ ಆದಾಯವನ್ನು
ಬಂಟ್ವಾಳ: ಬಿ.ಸಿ.ರೋಡ್ ಬಸ್ ನಿಲ್ದಾಣದಲ್ಲಿರುವ ಪುರಸಭೆಯ ವಾಣಿಜ್ಯ ಸಂಕೀರ್ಣದ ಮುಂಭಾಗ ಖಾಸಗಿ ಬಸ್ಸುಗಳು ತಂಗುತ್ತವೆ. ಪ್ರಯಾಣಿಕರು ವಾಣಿಜ್ಯ ಕೇಂದ್ರದ ಅಂಗಡಿಗಳ ಮುಂಭಾಗದ ಪ್ಯಾಸೇಜ್ ನಲ್ಲಿ ನಿಲ್ಲುತ್ತಾರೆ. ಖಾಲಿ ಬಿಟ್ಟ ಕೋಣೆಯಲ್ಲಿ ಸೊಳ್ಳೆಗಳ ಸಾಮ್ರಾಜ್ಯ. ಅದು ಒಂದು ಭಾಗವಾದರೆ, ಇನ್ನೊಂದು ಸಮಸ್ಯೆ ಈ ಸಂಕೀರ್ಣದ ಹಿಂದೆ ಮತ್ತೊಂದು ವಾಣಿಜ್ಯ ಸಂಕೀರ್ಣವಿದೆ. ಇವೆರಡರ ಮಧ್ಯೆ ರಸ್ತೆಯೂ ಇದೆ. ಇಲ್ಲಿನ ಮಳಿಗೆಗಳಿಗೆ ನೂರಾರು ಮಂದಿ ನಿತ್ಯ ಓಡಾಡುತ್ತಾರೆ. ಆದರೆ
ಬಂಟ್ವಾಳ ತಾಲೂಕಿನ ನಂದಾವರ ಎಂಬಲ್ಲಿ ಗುಡ್ಡ ಕುಸಿತವಾಗಿದ್ದು, ಅದು ಮನೆಯೊಂದರ ಮೇಲೆ ಬಿದ್ದು ಮಹಿಳೆ ಮೃತಪಟ್ಟ ಘಟನೆ ನಡೆದಿದೆ. ಮಹಮ್ಮದ್ ಎಂಬವರ ಮನೆಯ ಮೇಲೆ ಇಂದು ಬೆಳಿಗ್ಗೆ ಗುಡ್ಡ ಕುಸಿದು ಬಿದ್ದಿದೆ. ಝರೀನಾ ಮತ್ತು ಸಫಾ ಎಂಬವರು ಸಿಲುಕಿಕೊಂಡಿದ್ದು ಸಫಾ ಅವರನ್ನು ರಕ್ಷಿಸಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಝರೀನಾ ಮನೆಯೊಳಗೆ ಅಸುನೀಗಿದ್ದಾರೆ. ಸ್ಥಳಕ್ಕೆ ಎನ್.ಡಿ.ಆರ್.ಎಫ್, ಅಗ್ನಿಶಾಮಕ ಸಿಬಂದಿ ಸ್ಥಳೀಯರೊಂದಿಗೆ ಸುರಿಯುವ ಮಳೆಯಲ್ಲೂ ರಕ್ಷಣಾ
ಬಂಟ್ವಾಳ: ಹಲವು ವರ್ಷಗಳಿಂದ ಸ್ವಂತ ಸೂರಿಲ್ಲದೆ ಗುಡಿಸಲಿನಲ್ಲಿ ವಾಸವಾಗಿದ್ದ ಪರಿಶಿಷ್ಠ ಜಾತಿ ಸಮುದಾಯದ ಬಡ ಕುಟುಂಬಕ್ಕೆ ಸಜೀಪಮೂಡ ವಲಯ ಕಾಂಗ್ರೆಸ್ ನೇತೃತ್ವದಲ್ಲಿ ಸುಜ್ಜಿತವಾದ ಮನೆಯೊಂದು ನಿರ್ಮಾಣಗೊಳ್ಳುತ್ತಿದೆ. ಸ್ಥಳೀಯ ಯುವ ಸಿವಿಲ್ ಇಂಜಿನಿಯರ್ ಶೈಲೇಶ್ ಪೂಜಾರಿ ಕುಚ್ಚಿಗುಡ್ಡೆ ಮಾನವೀಯ ನೆಲೆಯಲ್ಲಿ ಮನೆ ನಿರ್ಮಿಸಿ ಕೊಡುತ್ತಿದ್ದಾರೆ. ಸಜೀಪಮೂಡ ಗ್ರಾಮದ ಕುಚ್ಚಿಗುಡ್ಡೆ ಎಂಬಲ್ಲಿ ಪರಿಶಿಷ್ಠ ಜಾತಿ ಸಮುದಾಯಕ್ಕೆ ಸೇರಿದ ಬಾಡ ಹಾಗೂ ನೊಕ್ಕೆ ದಂಪತಿ ಕುಟುಂಬ




























