Home Posts tagged #bantwala (Page 17)

ಬಂಟ್ವಾಳ ಪುರಸಭೆಯ ಸಾಮಾನ್ಯ ಸಭೆಯನ್ನು ಬಹಿಷ್ಕರಿಸಿದ ವಿಪಕ್ಷ ಸದಸ್ಯರು

ಬಂಟ್ವಾಳ: ಪುರಸಭೆ ವ್ಯಾಪ್ತಿಯಲ್ಲಿ ಅಳವಡಿಸಲಾಗಿರುವ ಸಿಸಿ ಕ್ಯಾಮರಗಳ ಅಸಮರ್ಪಕ ಕಾರ್ಯ ನಿರ್ವಾಹಣೆ ಹಾಗೂ ಅಸಮರ್ಪಕ ಅನುಷ್ಠಾನದ ಬಗ್ಗೆ ಕಳೆದ ಅನೇಕ ಸಾಮಾನ್ಯ ಸಭೆಯಲ್ಲಿ ಚರ್ಚೆಯಾಗುತ್ತಿದ್ದುಗುರುವಾರ ನಡೆದ ಸಾಮಾನ್ಯ ಸಭೆಯಲ್ಲೂ ಸಿಸಿ ಕ್ಯಾಮರ ನಿರ್ವಹಣೆಯ ಬಗ್ಗೆ ಹಿಂದಿನ ಸಭೆಯ ನಿರ್ಣಯ ಕಾರ್ಯಗತವಾಗದಿರುವ ಬಗ್ಗೆ ಅಸಮಾಧಾನ ವ್ಯಕ್ತ ಪಡಿಸಿದ ವಿರೋಧ ಪಕ್ಷದ ಸದಸ್ಯರು

ಸಜೀಪಮುನ್ನೂರು ಮೂರ್ತೆದಾರರ ಸೇವಾ ಸಹಕಾರಿ ಸಂಘದನೂತನ ಶಾಖೆ ಶುಭಾರಂಭ

ಬಂಟ್ವಾಳ: ಸಜೀಪಮುನ್ನೂರು ಮೂರ್ತೆದಾರರ ಸೇವಾ ಸಹಕಾರಿ ಸಂಘ ಇದರ 10 ನೇ ಕಾವಳಮುಡೂರು – ಎನ್. ಸಿ.ರೋಡು ಶಾಖೆ ಕಾವಳಮೂಡೂರು ಗ್ರಾಮದ ಎನ್.ಸಿ. ರೋಡಿನಲ್ಲಿರುವ ತೌಹೀದ್ ಕಾಂಪ್ಲೆಕ್ಸ್‍ನಲ್ಲಿ ಶುಭಾರಂಭಗೊಂಡಿತು.ನೂತನ ಶಾಖೆಯನ್ನು ಕಿಯೋನಿಕ್ಸ್ ಅಧ್ಯಕ್ಷ ಕೆ.ಹರಿಕೃಷ್ಣ ಬಂಟ್ವಾಳ ಉದ್ಘಾಟಿಸಿದರು. ಅವರು ಮಾತನಾಡಿ ಗ್ರಾಮೀಣ ಭಾಗದಲ್ಲಿ ಜನರಿಗೆ ಆರ್ಥಿಕ ವ್ಯವಹಾರವನ್ನು ಒದಗಿಸುವ ಕಾರ್ಯವನ್ನು ಸಜೀಪಮುನ್ನೂರು ಮೂರ್ತೆದಾರರ ಸೇವಾ ಸಹಕಾರಿ ಸಂಘ ಮಾಡಿಕೊಂಡು

ಸರಪಾಡಿ ರಥಬೀದಿ ಬಳಿ ಧರೆಗುರುಳಿದ ಅಶ್ವತ್ಥ ಮರ : ಪಾವಡದ ರೀತಿ ತಪ್ಪಿದ ಅನಾಹುತ

ಬಂಟ್ವಾಳ: ಸರಪಾಡಿ ಶ್ರೀ ಶರಭೇಶ್ವರ ದೇವಸ್ಥಾನದ ರಥಬೀದಿಯಲ್ಲಿದ್ದ ಬೃಹತ್ ಗಾತ್ರದ ಅರಳಿ ಮರ(ಅಶ್ವತ್ಥ)ವೊಂದು ಗುರುವಾರ ಬೆಳೆಗ್ಗೆ ಧರೆಗುರುಳಿದ್ದು, ಮರ ವಿದ್ಯುತ್ ತಂತಿಯ ಮೇಲೆ ಬಿದ್ದು 5-6 ವಿದ್ಯುತ್ ಕಂಬಗಳು ಧರೆಗುರುಳಿರುವ ಜತೆಗೆ ರಸ್ತೆಗೆ ಬಿದ್ದ ಪರಿಣಾಮ ಕೆಲವೊತ್ತು ಸಂಚಾರ ವ್ಯತ್ಯಯ ಉಂಟಾಯಿತು. ಬೆಳ್ಳಗ್ಗಿನ ಹೊತ್ತು ಜನಸಂಚಾರ ಹಾಗೂ ವಾಹನ ಸಂಚಾರ ಹೆಚ್ಚಿರುವ ಸಮಯವಾದರೂ, ದೇವರ ಪವಾಡದ ರೀತಿಯಲ್ಲಿ ಯಾವುದೇ ಜೀವಹಾನಿ ಉಂಟಾಗಿಲ್ಲ. ಕಳೆದೆರಡು ದಿನಗಳಲ್ಲಿ

ಬಿ.ಸಿ.ರೋಡಿನ ಪ್ರಿಯಾ ಎಲೆಕ್ಟ್ರಾನಿಕ್ಸ್‍ನಲ್ಲಿ ಅಗ್ನಿ ಅವಘಡ

ಬಂಟ್ವಾಳ: ಬಿ.ಸಿ.ರೋಡ್ ನ ಹೃದಯಭಾಗದಲ್ಲಿರುವ ಪ್ರಿಯಾ ಎಲೆಕ್ಟ್ರಾನಿಕ್ಸ್ ಫರ್ನಿಚರ್ಸ್ ಮತ್ತು ಕೊಮಾಕಿ ಎಲೆಕ್ಟ್ರಿಕ್ ವೈಕಲ್ ಡಿವಿಜನ್ ನ ಮಳಿಗೆಯ ಮಾಳಿಗೆಯಲ್ಲಿ ದಟ್ಟವಾದ ಹೊಗೆಯೊಂದಿಗೆ ಬೆಂಕಿ ಕಾಣಿಸಿಕೊಂಡಿದ್ದು, ಅಗ್ನಿಶಾಮಕದಳ ಬೆಂಕಿಯನ್ನು ನಂದಿಸುವಲ್ಲಿ ಹರಸಾಹಸ ಮಾಡುತ್ತಿದ್ದಾರೆ. ಎಲೆಕ್ಟ್ರಿಕ್ ವಾಹನಗಳು ಇರುವ ಜಾಗದಲ್ಲಿ ಬೆಂಕಿ ದಟ್ಟವಾಗಿದ್ದು, ವ್ಯಾಪಕವಾಗಿ ಹರಡುತ್ತಿರುವುದು ಕಂಡುಬಂದಿದ್ದು, ಸ್ಥಳದಲ್ಲಿ ಹಲವಾರು ಜನ ಜಮಾವಣೆಗೊಂಡಿದ್ದು, ನಂದಿಸುವ

ನಂದಾವರ ಅಷ್ಟಬಂಧ ಬ್ರಹ್ಮಕಲಶೋತ್ಸವ :ಅದ್ಧೂರಿಯಾಗಿ ಹಸಿರು ಹೊರೆಕಾಣಿಕೆ ಮೆರವಣಿಗೆ

ಬಂಟ್ವಾಳ: ಇತಿಹಾಸ ಪ್ರಸಿದ್ದ ನಂದಾವರ ಶ್ರೀ ವಿನಾಯಕ ಶಂಕರ ನಾರಾಯಣ ದುರ್ಗಾಂಬ ದೇವಸ್ಥಾನದ ಅಷ್ಡಬಂಧ ಬ್ರಹ್ಮಕಲಶೋತ್ಸವದ ಪ್ರಯುಕ್ತ ಅದ್ದೂರಿ ಹೊರೆಕಾಣಿಕೆ ಮೆರವಣಿಗೆಗೆ ಮಾರ್ನಬೈಲಿನ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಬಳಿ ಬ್ರಹ್ಮಕಲಶೋತ್ಸವ ಸಮಿತಿ ಗೌರವಾಧ್ಯಕ್ಷ, ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ. ಪ್ರಭಾಕರ ಭಟ್ ಕಲ್ಲಡ್ಕ ಚಾಲನೆ ನೀಡಿದರು. ಮಾರ್ನಬೈಲು ಮುಖ್ಯ ರಸ್ತೆಯ ಮೂಲಕ ದೇವಸ್ಥಾನಕ್ಕೆ ಸಾಗಿ ಬಂದ ಮೆರವಣಿಗೆಗೆ ಗೊಂಬೆ ಕುಣಿತ,

ಬಂಟ್ವಾಳಕ್ಕೆ ಭೇಟಿ ನೀಡಿದ 13 ದೇಶಗಳ ರೋಟರಿ ಸದಸ್ಯರು

ಬಂಟ್ವಾಳ: ರೈಡ್ ಫಾರ್ ರೋಟರಿ ಕಾರ್ಯಕ್ರಮದಂಗವಾಗಿ 13 ದೇಶಗಳ 41 ಮಂದಿ ರೋಟರಿ ಸದಸ್ಯರು ಬಂಟ್ವಾಳ ರೋಟರಿ ಕ್ಲಬ್‍ಗೆ ಭೇಟಿ ನೀಡಿದರು.ಬೈಕ್ ನಲ್ಲಿ ಆಗಮಿಸಿದ ರೋಟರಿ ಸದಸ್ಯರನ್ನು ರೋಟರಿ ಕ್ಲಬ್ ಬಂಟ್ವಾಳದ ಅಧ್ಯಕ್ಷ ಪುಷ್ಪರಾಜ ಹೆಗ್ಡೆ ಮತ್ತವರ ತಂಡ ಬಿ.ಸಿ.ರೋಡಿನ ರೋಟರಿ ಸಭಾಂಗಣದ ಬಳಿ ಬರಮಾಡಿಕೊಂಡರು. ಬಳಿಕ ನಡೆದ ಜಂಟಿ ಸಭೆಯಲ್ಲಿ ರೋಟರಿ ಜಿಲ್ಲಾ ಗವರ್ನರ್ ಪ್ರಕಾಶ್ ಕಾರಂತ್ ಅವರು ರೋಟರಿ ಕ್ಲಬ್ ಬಂಟ್ವಾಳದ ಕಾರ್ಯಚಟುವಟಿಕೆಯ ಬಗ್ಗೆ ಮಾಹಿತಿ ನೀಡಿದರು.ಈ

ಬಂಟ್ವಾಳ: ಧಾರ್ಮಿಕ, ಸಾಮಾಜಿಕ, ಧುರೀಣ ಕೊಡುಗೈದಾನಿ ಕೆ.ಸೇಸಪ್ಪ ಕೋಟ್ಯಾನ್ ನಿಧನ

ಬಂಟ್ವಾಳ: ಧಾರ್ಮಿಕ, ಸಾಮಾಜಿಕ ಧುರೀಣ, ಕೊಡುಗೈ ದಾನಿಯಾಗಿರುವ ಬಂಟ್ವಾಳ ತಾಲೂಕಿನ ಕೆ.ಸೇಸಪ್ಪ ಕೋಟ್ಯಾನ್(75)ಅವರು ಅಲ್ಪಕಾಲದ ಅಸೌಖ್ಯದಿಂದ ನಿಧನರಾಗಿದ್ದಾರೆ. ಅಲ್ಪಕಾಲದ ಅನಾರೋಗ್ಯದಿಂದ ಮೃತಪಟ್ಟಿದ್ದು, ಇವರ ಮೃತದೇಹವನ್ನು ಇಂದು (ಜ. 27) ಬೆಳಗ್ಗೆ 9ರಿಂದ ಸಾರ್ವಜನಿಕರ ಅಂತಿಮ ದರ್ಶನಕ್ಕಾಗಿ ಮೃತರ ಸ್ವಗೃಹ ಪಚ್ಚಿನಡ್ಕದ ಶುಭ ನಿಲಯದಲ್ಲಿ ಇಡಲಾಗುತ್ತಿದ್ದು, ಮಧ್ಯಾಹ್ನ 12.30ಕ್ಕೆ ಅಂತ್ಯಕ್ರಿಯೆ ನಡೆಯಲಿದೆ ಎಂದು ಮೃತರ ಕುಟುಂಬಸ್ಥರು ತಿಳಿಸಿದ್ದಾರೆ.

ಸಿದ್ದಾಂತ ರಾಜಕೀಯ ಮಾಡುತ್ತೇನೆ ವಿನಃ ದ್ವೇಷದ ರಾಜಕಾರಣ ನನ್ನಲಿಲ್ಲ : ಶಾಸಕ ರಾಜೇಶ್ ನಾಯಕ್

ಬಂಟ್ವಾಳ: ಅಧಿಕಾರ ಶಾಶ್ವತವಲ್ಲ. ಆದರೆ ಶಾಸಕನಾಗಿ ಅಧಿಕಾರದಲ್ಲಿರುವ ವರೆಗೆ ಪ್ರಾಮಾಣಿಕವಾಗಿ ಜನರ ಸೇವೆ ಮಾಡುತ್ತೇನೆ. ನಾನು ಸಿದ್ದಾಂತ ರಾಜಕೀಯ ಮಾಡುತ್ತೇನೆಯೇ ವಿನಃ ದ್ವೇಷದ ರಾಜಕಾರಣ ನನ್ನಲ್ಲಿಲ್ಲ. ಎಂದು ಶಾಸಕ ರಾಜೇಶ್ ನಾಯ್ಕ್ ಹೇಳಿದರು. ಪೆರಾಜೆ ಗ್ರಾಮದ ಗುಡ್ಡ ಚಾಮುಂಡೇಶ್ವರೀ ದೈವಸ್ಥಾನದ ವಠಾರದಲ್ಲಿ ನಡೆದ ಗ್ರಾಮ ವಿಕಾಸ ಪಾದಯಾತ್ರೆಯ 4 ನೇ ದಿನದ ಸಾರ್ವಜನಿಕ ಸಭೆಯಲ್ಲಿ ಅವರು ಪರಿಚಯವೇ ಇಲ್ಲದ ಕ್ಷೇತ್ರದಲ್ಲಿ ಚುನಾವಣೆಯಲ್ಲಿ ಸ್ಪರ್ಧಿಸಿ ಸೋತ

ನೇತ್ರಾವತಿಯಲ್ಲಿ ಯುವಕನ ಮೃತದೇಹ ಪತ್ತೆ

ಪಾಣೆಮಂಗಳೂರು ಹಳೆಯ ಸೇತುವೆಯ ಬಳಿ ನೇತ್ರಾವತಿ ನದಿಯಲ್ಲಿ ಯುವಕನೋರ್ವ ಮೃತದೇಹ ಗುರುವಾರ ಬೆಳಗ್ಗೆ ಪತ್ತೆಯಾಗಿದೆ. ಮೃತರನ್ನು ಬಂಟ್ವಾಳ ತಾಲೂಕಿನ ಸಜಿಪ ನಿವಾಸಿ ರಾಜೇಶ್ ಪೂಜಾರಿ ಸ್ಥಾನಮನೆ(36) ಎಂದು ಗುರುತಿಸಲಾಗಿದೆ. ಪಾಣೆಮಂಗಳೂರು ಹಳೆಯ ಸೇತುವೆಯಲ್ಲಿ ಇಂದು ಬೆಳಗ್ಗೆ ದ್ವಿಚಕ್ರ ವಾಹನವೊಂದು ಅನಾಥ ಸ್ಥಿತಿಯಲ್ಲಿ ಬಿದ್ದುಕೊಂಡಿತು. ಈ ಬಗ್ಗೆ ಸಂಶಯಗೊಂಡ ಸಾರ್ವಜನಿಕರು ಯಾರೋ ಬಂಟ್ವಾಳ ನಗರ ಪೆÇೀಲೀಸ್ ಠಾಣೆಗೆ ಮಾಹಿತಿ ನೀಡಿದ್ದಾರೆ. ಅದರಂತೆ ಸ್ಥಳಕ್ಕೆ ಆಗಮಿಸಿದ

ಕಾರಿಂಜ ಕ್ಷೇತ್ರವನ್ನು ಸೂಕ್ಷ್ಮ ವಲಯವನ್ನಾಗಿ ಘೋಷಿಸುವ ವಿಚಾರ, ಸಿಎಂ ಬೊಮ್ಮಾಯಿ ಜೊತೆ ಮಾತುಕತೆ

ಬಂಟ್ವಾಳ: ಇತಿಹಾಸ ಪ್ರಸಿದ್ಧ ಕಾರಿಂಜೇಶ್ವರ ದೇವಾಲಯವನ್ನು ಸೂಕ್ಷ್ಮ ವಲಯವನ್ನಾಗಿ ಘೋಷಣೆ ಮಾಡುವ ಬಗ್ಗೆ ರಾಜ್ಯದ ಮುಖ್ಯಮಂತ್ರಿ ಜೊತೆ ಮಾತುಕತೆ ನಡೆಸಿದ್ದು, ಜಿಲ್ಲಾಧಿಕಾರಿ ವರದಿ ಬಳಿಕ ಸರಕಾರ ನಿರ್ಧಾರ ತೆಗೆದುಕೊಳ್ಳಲಿದೆ ಎಂದು ಉಸ್ತವಾರಿ ಸಚಿವ ಸುನಿಲ್ ಕುಮಾರ್ ಕಾರ್ಕಳ ತಿಳಿಸಿದರು. ಅವರು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಜೊತೆಗೆ ಕಾರಿಂಜೇಶ್ವರ ದೇವಸ್ಥಾನಕ್ಕೆ ಬೇಟಿ ನೀಡಿದ ಬಳಿಕ ಪತ್ರ ಕರ್ತರ ಜೊತೆ ಮಾತನಾಡಿದರು. ಅಕ್ರಮ ಕಲ್ಲು ಗಣಿಗಾರಿಕೆಯಿಂದ