Home Posts tagged #bantwala (Page 32)

ಪತ್ರಕರ್ತ, ಸಾಹಿತಿ ಫಾರೂಕ್ ಗೂಡಿನಬಳಿ ನಿಧನ

ಬಂಟ್ವಾಳ : ಪತ್ರಕರ್ತ,ಸಾಹಿತಿ ಫಾರೂಕ್ ಗೂಡಿನಬಳಿ( 38) ಅವರು ಸುದೀರ್ಘ ಕಾಲದ ಅಸೌಖ್ಯದಿಂದ ಶುಕ್ರವಾರ ಸಂಜೆ ಗೂಡಿನಬಳಿಯಲ್ಲಿರುವ ತಮ್ಮ ನಿವಾಸದಲ್ಲಿ ನಿಧನರಾಗಿದ್ದಾರೆ.ವಿವಿಧ ಪತ್ರಿಕೆಗಳಿಗೆ ಬಂಟ್ವಾಳದಿಂದ ವರದಿಗಾರನಾಗಿ ಕಾರ್ಯನಿರ್ವಹಿಸಿದ್ದರು. ಪಾಣೆಮಂಗಳೂರು ಸಮೀಪದ ಗೂಡಿನಬಳಿ ನಿವಾಸಿಯಾಗಿರುವ ಹಲವು ಸಮಯದಿಂದ ಅನಾರೋಗ್ಯದಿಂದ ಬಳಲುತ್ತಿದ್ದರು.

ಬಿಜೆಪಿ ಪಕ್ಷಕ್ಕೆ ಕಾರ್ಯಕರ್ತರೆ ಶಕ್ತಿ, ಬೂತ್ ಅಧ್ಯಕ್ಷನೇ ಆತ್ಮ : ನಳಿನ್ ಕುಮಾರ್ ಕಟೀಲ್ ಹೇಳಿಕೆ

ಬಂಟ್ವಾಳ: ಬಿಜೆಪಿ ಪಕ್ಷಕ್ಕೆ ಕಾರ್ಯಕರ್ತರೆ ಶಕ್ತಿ. ಬೂತ್ ಅಧ್ಯಕ್ಷನೇ ಆತ್ಮ. ಬೂತ್ ಅಧ್ಯಕ್ಷರಿಗೆ ಶಕ್ತಿ ತುಂಬಿ, ಗೌರವಿಸುವ ಉದ್ದೇಶದಿಂದ ಪ್ರತೀ ಬೂತ್ ಅಧ್ಯಕ್ಷರ ಮನೆಗೆ ನಾಮಫಲಕ ಅಳವಡಿಸುವ ಕಾರ್ಯಕ್ರಮವನ್ನು ಪಕ್ಷದ ವತಿಯಿಂದ ನಡೆಸಲಾಗುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ, ಸಂಸದ ನಳಿನ್ ಕುಮಾರ್ ಕಟೀಲು ಹೇಳಿದರು. ಪ್ರಧಾನಿ ನರೇಂದ್ರ ಮೋದಿಯವರ 71ನೇ ಜನ್ಮದಿನಾಚರಣೆಯ ಅಂಗವಾಗಿ ಬಿಜೆಪಿ ಮಂಗಳೂರು ವಿಧಾನ ಸಭಾ ಕ್ಷೇತ್ರದ ಪುದು ಶಕ್ತಿ ಕೇಂದ್ರದ ವತಿಯಿಂದ

ಬಂಟ್ವಾಳ ಪುರಸಭೆಯ ಸಾಮಾನ್ಯ ಸಭೆ : ನೀರಿನ ಬಿಲ್ ಗೊಂದಲ, ಅಸಂವಿಧಾನಿಕ ಪದ ಬಳಕೆ

ಬಂಟ್ವಾಳ: ನೀರಿನ ಬಿಲ್ ಗೊಂದಲ, ಕ್ರಿಯಾಯೋಜನೆ ತಯಾರಿಕೆಯಲ್ಲಿ ತಾರತಮ್ಯ, ಪೌರಕಾರ್ಮಿಕ ದಿನಾಚರಣೆ ಊಟದ ವಿಚಾರ, ಅಸಂವಿಧಾನಿಕ ಪದ ಬಳಕೆ.. ಪುರಸಭಾಧ್ಯಕ್ಷ ಮಹಮ್ಮದ್ ಶರೀಫ್ ಅಧ್ಯಕ್ಷತೆಯಲ್ಲಿ ಮಂಗಳವಾರ ನಡೆದ ಪುರಸಭೆಯ ಸಾಮಾನ್ಯ ಸಭೆಯಲ್ಲಿ ಜಟಾಪಟಿಗೆ ಕಾರಣವಾದ ಮುಖ್ಯಾಂಶಗಳು.. ಆದ್ಯತೆಯ ಕಾಮಗಾರಿ ಎಂದು ಹೇಳಿ ತಾರತಮ್ಯ ನೀತಿ ಅನುಸರಿಸಲಾಗುತ್ತಿದೆ. ಕಳೆದ ಒಂದು ವರ್ಷದಿಂದ ಹಣ ಮಾಡಿದ್ದು ಬಿಟ್ಟರೆ ಅಭಿವೃದ್ದಿ ಕಾರ್ಯ ಏನು ಮಾಡಿಲ್ಲ ಎಂದು ವಿಪಕ್ಷ ಸದಸ್ಯ

ರೈತ ಹೋರಾಟಕ್ಕೆ ಬೆಂಬಲ : ಬಂಟ್ವಾಳದಲ್ಲಿ ಬೃಹತ್ ರ್‍ಯಾಲಿ , ರಸ್ತೆ ತಡೆ

ಸಂಯುಕ್ತ ಕಿಸಾನ್ ಮೋರ್ಚಾ ಕರೆ ನೀಡಿರುವ ಭಾರತ್ ಬಂದ್ ಗೆ ಹಾಗೂ ರೈತ ರೋರಾಟಕ್ಕೆ ಬೆಂಬಲ ವ್ಯಕ್ತಪಡಿಸಿ ಸೋಮವಾರ ಬಂಟ್ವಾಳ ತಾಲೂಕಿನ ಬಿ.ಸಿ. ರೋಡ್ ನಲ್ಲಿ ವಿವಿಧ ಸಂಘಟನೆಗಳ ಬೃಹತ್ ಮೆರವಣಿಗೆ ಹಾಗೂ ರಸ್ತೆ ತಡೆ ನಡೆಯಿತು. ದಕ್ಷಿಣ ಕನ್ನಡ ಜಿಲ್ಲಾ ರೈತ , ದಲಿತ , ಕಾರ್ಮಿಕ , ಜನಪರ ಚಳುವಳಿಗಳ ಒಕ್ಕೂಟದ ವತಿಯಿಂದ ಭಾರತ್ ಬಂದ್ ಗೆ ಬೆಂಬಲಿಸಿ ಈ ರ್‍ಯಾಲಿ ಹಾಗೂ ರಸ್ತೆ ತಡೆ ನಡೆಸಲಾಯಿತು. ಪ್ರತಿಭಟನಾ ಸಮಾವೇಶಯಲ್ಲಿ ಪ್ರಸ್ತಾವಿಕವಾಗಿ ಮಾತನಾಡಿದ ಕರ್ನಾಟಕ […]

ಕೃಷಿ ಮಸೂದೆ ವಾಪಸ್ಸಾತಿ, ಬೆಲೆ ಏರಿಕೆ ವಿರುದ್ಧ ಸೆ.27ರಂದು ಪ್ರತಿಭಟನಾ ಸಭೆ

ಬಂಟ್ವಾಳ: ಕೇಂದ್ರ ಸರಕಾರ ಜಾರಿಗೆ ತಂದಿರುವ ಕೃಷಿ ಮಸೂದೆಗಳ ವಾಪಸ್ಸಾತಿಗೆ ಹಾಗೂ ಕೃಷಿ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆಯನ್ನು ಕಾನೂನಾತ್ಮಕಗೊಳಿಸಲು ಆಗ್ರಹಿಸಿ ದೆಹಲಿಯ ಹೊರವಲಯದಲ್ಲಿ ನಡೆಯುತ್ತಿರುವ ಐತಿಹಾಸಿಕ ಚಳುವಳಿಗೆ ಸೆ. 26ನೇ ತಾರೀಖಿಗೆ ಹತ್ತು ತಿಂಗಳು ತುಂಬಲಿರುವ ಹಿನ್ನಲೆಯಲ್ಲಿ ಸಂಯುಕ್ತ ಹೋರಾಟ ಕಿಸಾನ್ ಮೋರ್ಚಾ ಸೆ.27ರಂದು ಭಾರತ್ ಬಂದ್‍ಗೆ ಕರೆ ನೀಡಿದ್ದು ಅಂದು ಬೆಳಿಗ್ಗೆ 10 ಗಂಟೆಗೆ ಬಿ.ಸಿ.ರೋಡಿನ ಮಿನಿ ವಿಧಾನ ಸೌಧದ ಬಳಿಯಿಂದ

ದೇವಸ್ಥಾನ ಕೆಡವಿರುವುದಕ್ಕೆ ಖಂಡಿಸಿ ಬಿ.ಸಿ.ರೋಡಿನಲ್ಲಿ ಕಾಂಗ್ರೆಸ್‍ನಿಂದ ಬೃಹತ್ ಪ್ರತಿಭಟನೆ

ನಂಜನಗೂಡಿನಲ್ಲಿ ದೇವಸ್ಥಾನ ಕೆಡವಿರುವುದಕ್ಕೆ ಅಧಿಕಾರದಲ್ಲಿರುವ ಬಿಜೆಪಿ ಸರಕಾರವೇ ನೇರ ಹೊಣೆ, 2008ರಲ್ಲಿ ಆದ ಸುಪ್ರೀ ಕೋರ್ಟ್ ಆದೇಶವನ್ನು ಪ್ರಯೋಗಕ್ಕೆ ಒಳಪಡಿಸಿದ್ದು ಬಿಜೆಪಿ ಸರಕಾರ, ಇದು ಸರಕಾರ ಪ್ರಾಯೋಜಿತ ಕಾರ್ಯಕ್ರಮ ಎಂದು ಎಂದು ಮಾಜಿ ಸಚಿವ ಬಿ.ರಮನಾಥ ರೈ ಆಕ್ರೋಶ ವ್ಯಕತಪಡಿಸಿದರು. ರಾಜ್ಯ ಬಿಜೆಪಿ ಸರಕಾರ ಧಾರ್ಮಿಕ ಕೇಂದ್ರಗಳನ್ನು ಧ್ವಂಸಗೊಳಿಸಿದ ಹಾಗೂ ಅನೇಕ ದೇವಸ್ಥಾನ, ದೈವಸ್ಥಾನ ಮತ್ತು ಪ್ರಾರ್ಥನಾ ಮಂದಿರಗಳನ್ನು ತೆರವುಗೊಳಿಸುವುದರ ವಿರುದ್ದ

ಕಾರಿಂಜ ಮಹತೋಭಾರ ಶ್ರೀ ಕಾರಿಂಜೇಶ್ವರ ದೇವಸ್ಥಾನದಲ್ಲಿ ತೆನೆ ಹಬ್ಬ

ಬಂಟ್ವಾಳದ ಕಾವಳಮೂಡೂರು ಗ್ರಾಮದ ಕಾರಿಂಜ ಮಹತೋಭಾರ ಶ್ರೀ ಕಾರಿಂಜೇಶ್ವರ ದೇವಸ್ಥಾನದಲ್ಲಿ ತೆನೆ ಹಬ್ಬ ಆಚರಣೆ ಸಂಪನ್ನಗೊಂಡಿತು. ಪ್ರತಿ ವರ್ಷ ಕನ್ಯಾ ಸಂಕ್ರಮಣದ ಮರು ದಿವಸ ನಡೆಯುವ ತೆನೆ ಹಬ್ಬ ಆಚರಣೆಗಾಗಿ ಕಾರಿಂಜದಿಂದ ಸುಮಾರು  9ಕಿ.ಮೀ. ದೂರವಿರುವ ಸರಪಾಡಿ ಹಲ್ಲಂಗಾರು ಗದ್ದೆಯೊಂದರಿಂದ ತೆನೆಗಳನ್ನು ತರಲಾಗುತ್ತಿದ್ದು, ಈ ಬಾರಿಯೂ ಸಂಪ್ರದಾಯದಂತೆ ನೆರವೇರಿಸಲಾಯಿತು. ಸೂರ್ಯೋದಯದ ಮುಂಚೆ ಶ್ರೀ ಕ್ಷೇತ್ರ ಕಾರಿಂಜದಿಂದ ವಾದ್ಯ ವೃಂದ ಸಹಿತ ಅರ್ಚಕರು, ತಂತ್ರಿಗಳು,

ರಸ್ತೆ ಬದಿಯ ಗಿಡಗಳನ್ನು ಕಿತ್ತೆಸೆದ ದುಷ್ಕರ್ಮಿಗಳು : ಅರಣ್ಯ ಹಾಗೂ ಪೊಲೀಸರಿಗೆ ದೂರು

ಪರಿಸರ ಪ್ರೇಮಿಯೋರ್ವರು ಸಾರ್ವಜನಿಕವಾಗಿ ರಸ್ತೆ ಬದಿಯಲ್ಲಿ ನೆಟ್ಟಿರುವ ಗಿಡಗಳನ್ನು ದುಷ್ಕರ್ಮಿಗಳು ಕಿತ್ತೆಸೆದ ಘಟನೆ ಬಡಗಕಜೆಕಾರು ಗ್ರಾಮದ ದೆತ್ತಿಮಾರು ಎಂಬಲ್ಲಿ ಸಂಭವಿಸಿದ್ದು, ಈ ಬಗ್ಗೆ ಅರಣ್ಯ ಹಾಗೂ ಪೊಲೀಸ್ ಇಲಾಖೆಗೆ ದೂರು ನೀಡಲಾಗಿದೆ. ಇನ್ನು ರಾತೋರಾತ್ರಿ ಸ್ಥಳೀಯ ಐವರು ವ್ಯಕ್ತಿಗಳು ಕಿತ್ತೆಸೆದು ಧ್ವಂಸಗೊಳಿಸಿರುವುದಾಗಿ ಮಾರ್ಕ್ ಸೇರಾ ಅವರು ದೂರು ನೀಡಿದ್ದಾರೆ. ನೆಟ್ಟ ಗಿಡಗಳನ್ನು ಕಿತ್ತು ಬಿಸಾಕಿದ ಘಟನೆ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಖಂಡನೆ

ಅಡಿಕೆ ಮರ ಏರುವ ಬೈಕ್ ಆವಿಷ್ಕಾರ

ಬಂಟ್ವಾಳ: ಅಡಿಕೆ ಮರ ಏರುವ ಬೈಕ್ ಆವಿಷ್ಕರಿಸಿ ಜಗತ್ತಿನ ಗಮನ ಸೆಳೆದ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಸಜೀಪಮೂಡ ಗ್ರಾಮದ ಪ್ರಗತಿಪರ ಕೃಷಿಕ, ಸಂಶೋಧಕ ಗಣಪತಿ ಭಟ್ ಮತ್ತೊಮ್ಮೆ ಸುದ್ದಿಯಾಗುತ್ತಿದ್ದಾರೆ. ಮುಂದಿನ ವಿಶ್ವ ಟಿ-20 ಕ್ರಿಕೆಟ್ ಟೂರ್ನಿ ಸಂದರ್ಭ ಭಾರತ ಗೆದ್ದು ಬರುವಂತೆ ಜಾಹೀರಾತಿನಲ್ಲಿ ಗಣಪತಿ ಭಟ್, ಭಾರತ ಕ್ರಿಕೆಟ್ ತಂಡದ ಸದಸ್ಯರಿಗೆ ಚಿಯರ್ಸ್ ಮಾಡಲಿದ್ದಾರೆ. ಸ್ಟಾರ್ ಸ್ಪೋಟ್ಸ್ ಚಾನಲ್ ಈ ಅವಕಾಶವನ್ನು ಗ್ರಾಮೀಣ ಭಾಗದ ಒರ್ವ ಕೃಷಿಕನಿಗೆ

ಸಜೀಪಮೂಡ‌ದಲ್ಲಿ ಪುರುಷಾಮೃಗದ ಅಪರೂಪದ ಶಿಲ್ಪವುಳ್ಳ ಬಂಗರಸನ ಶಾಸನ ಪತ್ತೆ

ದಕ್ಷಿಣ ಕನ್ನಡ‌ ಜಿಲ್ಲೆಯ ಬಂಟ್ವಾಳ ತಾಲೂಕಿನ ಸಜೀಪಮೂಡ ಗ್ರಾಮದ ಅನ್ನಪಾಡಿ ಬಾಲಗಣಪತಿ ದೇವಾಲಯದ ಬಳಿಯ ದಿ. ಮೋನಪ್ಪ ಪೂಜಾರಿಯವರ ತೋಟದಲ್ಲಿರುವ ಶಾಸನವನ್ನು ಸಂಚಯಗಿರಿ ರಾಣಿ ಅಬ್ಬಕ್ಕ ತುಳು ಅಧ್ಯಯನ ಕೇಂದ್ರ ಇದರ ಅಧ್ಯಕ್ಷರಾದ ಡಾ| ತುಕಾರಾಮ ಪೂಜಾರಿಯವರು ಹಾಗೂ ಬಂಟ್ವಾಳ ತಾಲೂಕು ಪಂಚಾಯತಿನ ಮಾಜಿ ಅಧ್ಯಕ್ಷರಾದ ಶ್ರೀ ಯಶವಂತ ದೇರಾಜೆ ಅವರು ಈ ಮೊದಲು ಪತ್ತೆ ಮಾಡಿರುತ್ತಾರೆ. ಪ್ರಾಚ್ಯಸಂಚಯ ಸಂಶೋಧನಾ ಕೇಂದ್ರ – ಉಡುಪಿ (ಎನ್.ಟಿ‌.ಸಿ- ಎ.ಒ.ಎಂ ನ ಅಂಗ