Home Posts tagged #bantwala (Page 32)

ಬಂಟ್ವಾಳದ ಮಂಡಾಡಿಯಲ್ಲಿ ಭಗವಧ್ವಜ, ಹನುಮಾನ ಚಿತ್ರಕ್ಕೆ ಹಾನಿ : ಪ್ರಕರಣ ದಾಖಲು

ಬಂಟ್ವಾಳದ ಎಸ್‍ಎಸ್ ಕಾಲೇಜಿನ ಬಳಿ ಇರುವ ಮಂಡಾಡಿ ಮಾರ್ಗಸೂಚಿ ಕಟ್ಟೆಹಾಗೂ ಅದರಲ್ಲಿದ್ದ ಭಗವಧ್ವಜ ಹಾಗೂ ಹನುಮನ ಚಿತ್ರವನ್ನು ದುಷ್ಕರ್ಮಿಗಳು ಹಾನಿ ಮಾಡಿದ ಘಟನೆ ನಡೆದಿದೆ. ಕಳೆದ 10-12 ವರ್ಷಗಳಿಂದ ಈ ಕಟ್ಟೆ ಇದ್ದು, ಕಳೆದ ಕೆಲವು ದಿನಗಳ ಹಿಂದೆ ವಿಶ್ವಹಿಂದೂಪರಿಷತ್ ಮಂಡಾಡಿ ಶಾಖೆಯು ನವೀಕರಣಗೊಳಿಸಿತ್ತು. ಇದನ್ನು ಸಹಿಸದ ದುಷ್ಕರ್ಮಿಗಳು ನಿನ್ನೆ ತಡರಾತ್ರಿ 2

ಬಂಟ್ವಾಳ ವ್ಯಾಪ್ತಿಯಲ್ಲಿ ಮಳೆಯಿಂದಾಗಿ ಅಪಾರ ಹಾನಿ

ಬಂಟ್ವಾಳ: ಮಂಗಳವಾರ ಸುರಿದ ಭಾರಿ ಮಳೆಗೆ ಬಂಟ್ವಾಳ ತಾಲೂಕು ವ್ಯಾಪ್ತಿಯಲ್ಲಿ ಸಾಕಷ್ಟು ಹಾನಿ ಉಂಟಾಗಿ ನಷ್ಟ ಸಂಭವಿಸಿದೆ. ಅರಳ ಗ್ರಾಮದ ಗುಡ್ಡೆಯಂಗಡಿ ಎಂಬಲ್ಲಿ ತಡೆಗೋಡೆ ಕುಸಿದು ಬಿದ್ದು ಜನಹಿತಾಯ ವಿದ್ಯಾಸಂಸ್ಥೆಗೆ ಸೇರಿದ ಎರಡು ವಾಹನಗಳು ಸಂಪೂರ್ಣ ಜಖಂಗೊಂಡಿದೆ. ಸಜೀಪನಡು ಗ್ರಾಮದ ದೇರಾಜೆ ಬರೆ ಎಂಬಲ್ಲಿ ಲೀಲಾ ಸಂಜೀವ ಪೂಜಾರಿಯವರ ಮನೆ ಸಮೀಪದ ಗುಡ್ಡ ಜರಿದು ಬಿದ್ದು ಮನೆಯ ಸುತ್ತ ಆವರಿಸಿಕೊಂಡಿದೆ. ಅರಳ ಗ್ರಾಮದ ಸುಂದರ ಎಂಬವರ ಮನೆಯ ಮೇಲೆ ಆವರಣ ಗೋಡೆ ಕುಸಿದು

ಶಿರ್ವ: ದೈವ ನರ್ತನ ಕೆಲಸ ಮಾಡುತ್ತಿದ್ದ ದಿಲೀಪ್ ಪಾಣಾರ ಶವ ಪತ್ತೆ

ಶಿರ್ವದ ನಡಿಬೆಟ್ಟು ಕಿಂಡಿ ಅಣೆಕಟ್ಟು ಬಳಿ ಮೀನಿಗೆ ಗಾಳ ಹಾಕಲು ಹೋಗಿ ಹೊಳೆಗೆ ಬಿದ್ದು ನಾಪತ್ತೆಯಾದ ಯುವಕನ ಶವ ಪತ್ತೆಯಾಗಿದೆ. ದಿಲೀಪ್ ಪಾಣಾರ (30) ಮೃತ ವ್ಯಕ್ತಿ  ದೈವ ನರ್ತನ ಕೆಲಸ ಮಾಡುತ್ತಿದ್ದ ದಿಲೀಪ್ ಪಾಣಾರ ತನ್ನ ಸಹಪಾಠಿಗಳೊಂದಿಗೆ ಭಾನುವಾರ ಹೊಳೆಗೆ ಮೀನು ಹಿಡಿಯಲು ಹೋಗಿದ್ದ ಈತ ಆಕಸ್ಮಿಕವಾಗಿ ಹೊಳೆಗೆ ಬಿದ್ದು ನಾಪತ್ತೆಯಾಗಿದ್ದ, ಸಂಜೆಯವರೆಗೂ ಈತನ ಪತ್ತೆಗಾಗಿ ಹುಡುಕಾಟ ನಡೆಸಿದರಾದರೂ ಕತ್ತಲಾವರಿಸಿದ್ದರಿ ಕಾರ್ಯಚರಣೆ ಸ್ಥಗಿತಗೊಳಿಸಿದ್ದರು. ಮತ್ತೆ

ಸಜೀಪಮುನ್ನೂರು ಮೂರ್ತೆದಾರರ ಸೇವಾ ಸಹಕಾರಿ ಸಂಘ ಇ ಸ್ಟ್ಯಾಂಪಿಂಗ್ ಬಿಡುಗಡೆ

ಬಂಟ್ವಾಳ: ಸಜೀಪಮುನ್ನೂರು ಮೂರ್ತೆದಾರರ ಸೇವಾ ಸಹಕಾರಿ ಸಂಘ ಸಜೀಪಮೂಡ ಇದರ ಸಿದ್ದಕಟ್ಟೆ ಶಾಖೆಯಲ್ಲಿ ಇ ಸ್ಟ್ಯಾಂಪಿಂಗ್ ಬಿಡುಗಡೆ ಸಮಾರಂಭ ನಡೆಯಿತು. ನ್ಯಾಯವಾದಿ ಸುರೇಶ್ ಶೆಟ್ಟಿ ಇ ಸ್ಟ್ಯಾಂಪಿಂಗ್ ಬಿಡುಗಡೆಗೊಳಿಸಿದರು. ಅವರು ಮಾತನಾಡಿ ಇಲ್ಲಿ ಇಸ್ಟ್ಯಾಂಪಿಂಗ್ ಆರಂಭಿಸಿರುವುದರಿಂದ ಗ್ರಾಮೀಣ ಜನರಿಗೆ ತುಂಬಾ ಅನುಕೂಲವಾಗಲಿದೆ. ಪ್ರಸ್ತುತ ದಿನಗಳಲ್ಲಿ ಪ್ರತಿಯೊಂದು ಕೆಲಸಗಳಿಗೂ ಈ ಸ್ಟ್ಯಾಂಪ್ ಅಗತ್ಯವಾಗಿರುವುದರಿಂದ ಜನರು ನಗರಕ್ಕೆ ಹೋಗಬೇಕಾಗುತ್ತದೆ. ಠಸೆ ಪೇಪರ್

ಬಂಟ್ವಾಳ: ಅಪ್ರಾಪ್ತ ಬಾಲಕಿ ಮೇಲೆ ಐವರು ಕಾಮುಕರಿಂದ ಗ್ಯಾಂಗ್ ರೇಪ್

ಬಂಟ್ವಾಳ: ತಾಲೂಕಿನ ಅಮ್ಟಾಡಿ ಗ್ರಾಮ ವ್ಯಾಪ್ತಿಯ ಕೆಂಪುಗುಡ್ಡೆ ಸಾರಿಗೆ ಎಂಬಲ್ಲಿನ ಅಪ್ರಾಪ್ತ ಬಾಲಕಿಯನ್ನು ಅಪಹರಿಸಿ ಸಾಮೂಹಿಕ ಅತ್ಯಾಚಾರ ಎಸಗಿದ ಘಟನೆಯೊಂದು ಬೆಳಕಿಗೆ ಬಂದಿದೆ.ಬಾಲಕಿ ಶುಕ್ರವಾರ ಬೆಳಿಗ್ಗೆ ಸುಮಾರು 7 ಗಂಟೆಯ ವೇಳೆಗೆ ಶಾಲೆಗೆ ನಡೆದು ಕೊಂಡು ಹೋಗುತ್ತಿದ್ದ ವೇಳೆ ಪರಿಚಿತ ವ್ಯಕ್ತಿಯೋರ್ವ ಕಾರಿನಲ್ಲಿ ಬಂದು ಬಾಲಕಿಯನ್ನು ಪುಸಲಾಯಿಸಿ ಇತರರೊಂದಿಗೆ ಅಪಹರಿಸಿ ಸಾಮೂಹಿಕ ಅತ್ಯಾಚಾರ ನಡೆಸಿರುವುದಾಗಿ ದೂರಲಾಗಿದೆ. ಸಂತ್ರಸ್ತ ಬಾಲಕಿಯನ್ನು ಮಂಗಳೂರಿನ

ದಾನಿಗಳ ನೆರವನ್ನು ಎದುರು ನೋಡುತ್ತಿದೆ ಅನಾರೋಗ್ಯದಿಂದ ಬಳಲುತ್ತಿರುವ ಬಡ ಕುಟುಂಬ

ಬಂಟ್ವಾಳ: ಅನಾರೋಗ್ಯದಿಂದ ಬಳಲುತ್ತಿರುವ ಬಡ ಕುಟುಂಬವೊಂದು ಚಿಕಿತ್ಸೆಗಾಗಿ ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದು ದಾನಿಗಳ ನೆರವನ್ನು ಎದುರು ನೋಡುತ್ತಿದೆ. ಈ ಮನೆಯಲ್ಲಿ ವಾಸವಿರುವ ಮೂರು ಮಂದಿಯನ್ನು ಆರೋಗ್ಯ ಸಮಸ್ಯೆ ಕಾಡುತ್ತಿದ್ದು ಮುಂದೇನು ಎನ್ನುವ ದಾರಿ ಕಾಣದೆ ಕಂಗೆಟ್ಟಿದ್ದಾರೆ. ಬಂಟ್ವಾಳ ತಾಲೂಕಿನ ಕೊಯಿಲ ಗ್ರಾಮದ ಬಾಡಿಗೆ ಮನೆಯಲ್ಲಿ ವಾಸಿಸುತ್ತಿರುವ ಸೇಸಮ್ಮ ಪೂಜಾರ್ತಿಯವರದ್ದು ಬಡ ಕುಟುಂಬ. ಸೇಸಮ್ಮ ಅವರ ಹಿರಿಯ ಮಗಳು ವೇದ ಎಲ್ಲರಂತೆ ಲವಲವಿಕೆಯಿಂದ

ಪತ್ರಕರ್ತ, ಸಾಹಿತಿ ಫಾರೂಕ್ ಗೂಡಿನಬಳಿ ನಿಧನ

ಬಂಟ್ವಾಳ : ಪತ್ರಕರ್ತ,ಸಾಹಿತಿ ಫಾರೂಕ್ ಗೂಡಿನಬಳಿ( 38) ಅವರು ಸುದೀರ್ಘ ಕಾಲದ ಅಸೌಖ್ಯದಿಂದ ಶುಕ್ರವಾರ ಸಂಜೆ ಗೂಡಿನಬಳಿಯಲ್ಲಿರುವ ತಮ್ಮ ನಿವಾಸದಲ್ಲಿ ನಿಧನರಾಗಿದ್ದಾರೆ.ವಿವಿಧ ಪತ್ರಿಕೆಗಳಿಗೆ ಬಂಟ್ವಾಳದಿಂದ ವರದಿಗಾರನಾಗಿ ಕಾರ್ಯನಿರ್ವಹಿಸಿದ್ದರು. ಪಾಣೆಮಂಗಳೂರು ಸಮೀಪದ ಗೂಡಿನಬಳಿ ನಿವಾಸಿಯಾಗಿರುವ ಹಲವು ಸಮಯದಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಗ್ರಾಪಂ.ಸದಸ್ಯರಿಗೆ ಪಂಚಾಯತ್ ರಾಜ್ ವ್ಯವಸ್ಥೆಯಲ್ಲಿ ಹಕ್ಕು ಮತ್ತು ಕರ್ತವ್ಯದ ಬಗ್ಗೆ ಹಾಗೂ ಮಕ್ಕಳ ಹಕ್ಕಿನ

ಬಿಜೆಪಿ ಪಕ್ಷಕ್ಕೆ ಕಾರ್ಯಕರ್ತರೆ ಶಕ್ತಿ, ಬೂತ್ ಅಧ್ಯಕ್ಷನೇ ಆತ್ಮ : ನಳಿನ್ ಕುಮಾರ್ ಕಟೀಲ್ ಹೇಳಿಕೆ

ಬಂಟ್ವಾಳ: ಬಿಜೆಪಿ ಪಕ್ಷಕ್ಕೆ ಕಾರ್ಯಕರ್ತರೆ ಶಕ್ತಿ. ಬೂತ್ ಅಧ್ಯಕ್ಷನೇ ಆತ್ಮ. ಬೂತ್ ಅಧ್ಯಕ್ಷರಿಗೆ ಶಕ್ತಿ ತುಂಬಿ, ಗೌರವಿಸುವ ಉದ್ದೇಶದಿಂದ ಪ್ರತೀ ಬೂತ್ ಅಧ್ಯಕ್ಷರ ಮನೆಗೆ ನಾಮಫಲಕ ಅಳವಡಿಸುವ ಕಾರ್ಯಕ್ರಮವನ್ನು ಪಕ್ಷದ ವತಿಯಿಂದ ನಡೆಸಲಾಗುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ, ಸಂಸದ ನಳಿನ್ ಕುಮಾರ್ ಕಟೀಲು ಹೇಳಿದರು. ಪ್ರಧಾನಿ ನರೇಂದ್ರ ಮೋದಿಯವರ 71ನೇ ಜನ್ಮದಿನಾಚರಣೆಯ ಅಂಗವಾಗಿ ಬಿಜೆಪಿ ಮಂಗಳೂರು ವಿಧಾನ ಸಭಾ ಕ್ಷೇತ್ರದ ಪುದು ಶಕ್ತಿ ಕೇಂದ್ರದ ವತಿಯಿಂದ

ಬಂಟ್ವಾಳ ಪುರಸಭೆಯ ಸಾಮಾನ್ಯ ಸಭೆ : ನೀರಿನ ಬಿಲ್ ಗೊಂದಲ, ಅಸಂವಿಧಾನಿಕ ಪದ ಬಳಕೆ

ಬಂಟ್ವಾಳ: ನೀರಿನ ಬಿಲ್ ಗೊಂದಲ, ಕ್ರಿಯಾಯೋಜನೆ ತಯಾರಿಕೆಯಲ್ಲಿ ತಾರತಮ್ಯ, ಪೌರಕಾರ್ಮಿಕ ದಿನಾಚರಣೆ ಊಟದ ವಿಚಾರ, ಅಸಂವಿಧಾನಿಕ ಪದ ಬಳಕೆ.. ಪುರಸಭಾಧ್ಯಕ್ಷ ಮಹಮ್ಮದ್ ಶರೀಫ್ ಅಧ್ಯಕ್ಷತೆಯಲ್ಲಿ ಮಂಗಳವಾರ ನಡೆದ ಪುರಸಭೆಯ ಸಾಮಾನ್ಯ ಸಭೆಯಲ್ಲಿ ಜಟಾಪಟಿಗೆ ಕಾರಣವಾದ ಮುಖ್ಯಾಂಶಗಳು.. ಆದ್ಯತೆಯ ಕಾಮಗಾರಿ ಎಂದು ಹೇಳಿ ತಾರತಮ್ಯ ನೀತಿ ಅನುಸರಿಸಲಾಗುತ್ತಿದೆ. ಕಳೆದ ಒಂದು ವರ್ಷದಿಂದ ಹಣ ಮಾಡಿದ್ದು ಬಿಟ್ಟರೆ ಅಭಿವೃದ್ದಿ ಕಾರ್ಯ ಏನು ಮಾಡಿಲ್ಲ ಎಂದು ವಿಪಕ್ಷ ಸದಸ್ಯ

ರೈತ ಹೋರಾಟಕ್ಕೆ ಬೆಂಬಲ : ಬಂಟ್ವಾಳದಲ್ಲಿ ಬೃಹತ್ ರ್‍ಯಾಲಿ , ರಸ್ತೆ ತಡೆ

ಸಂಯುಕ್ತ ಕಿಸಾನ್ ಮೋರ್ಚಾ ಕರೆ ನೀಡಿರುವ ಭಾರತ್ ಬಂದ್ ಗೆ ಹಾಗೂ ರೈತ ರೋರಾಟಕ್ಕೆ ಬೆಂಬಲ ವ್ಯಕ್ತಪಡಿಸಿ ಸೋಮವಾರ ಬಂಟ್ವಾಳ ತಾಲೂಕಿನ ಬಿ.ಸಿ. ರೋಡ್ ನಲ್ಲಿ ವಿವಿಧ ಸಂಘಟನೆಗಳ ಬೃಹತ್ ಮೆರವಣಿಗೆ ಹಾಗೂ ರಸ್ತೆ ತಡೆ ನಡೆಯಿತು. ದಕ್ಷಿಣ ಕನ್ನಡ ಜಿಲ್ಲಾ ರೈತ , ದಲಿತ , ಕಾರ್ಮಿಕ , ಜನಪರ ಚಳುವಳಿಗಳ ಒಕ್ಕೂಟದ ವತಿಯಿಂದ ಭಾರತ್ ಬಂದ್ ಗೆ ಬೆಂಬಲಿಸಿ ಈ ರ್‍ಯಾಲಿ ಹಾಗೂ ರಸ್ತೆ ತಡೆ ನಡೆಸಲಾಯಿತು. ಪ್ರತಿಭಟನಾ ಸಮಾವೇಶಯಲ್ಲಿ ಪ್ರಸ್ತಾವಿಕವಾಗಿ ಮಾತನಾಡಿದ ಕರ್ನಾಟಕ […]