Home Posts tagged #bantwala (Page 5)

ಪ್ರವಾಹಪೀಡಿತ ಪ್ರದೇಶಗಳಿಗೆ ಪದ್ಮರಾಜ್ ಆರ್. ಪೂಜಾರಿ ಭೇಟಿ

ಬಂಟ್ವಾಳ ತಾಲೂಕಿನ ನಾವೂರು, ದೇವಸ್ಯಪಡೂರು, ಸರಪಾಡಿ ಗ್ರಾಮದಲ್ಲಿ ಮಳೆಹಾನಿ, ಪ್ರಾಕೃತಿಕ ವಿಕೋಪ, ಪ್ರವಾಹಪೀಡಿತ ಪ್ರದೇಶಗಳಿಗೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್ ಆರ್. ಪೂಜಾರಿ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಅಲ್ಲಿಪಾದೆ ಚರ್ಚ್ ಧರ್ಮಗುರುಗಳಾದ ಫಾ.ರೋಬರ್ಟ್ ಡಿಸೋಜ, ಚರ್ಚ್ ಉಪಾಧ್ಯಕ್ಷರಾದ. ನವೀನ್ ಮೊರಾಸ್, ಸರಪಾಡಿ ಗ್ರಾಮ ಪಂಚಾಯಿತಿ ಸದಸ್ಯರಾದ

ಬಂಟ್ವಾಳ: ಮತ್ತೆ ನೆರೆಯಾತಂಕ, ರಾತ್ರಿ ನಿದ್ದೆ ಬಿಟ್ಟು ಕಾರ್ಯ ನಿರ್ವಹಿಸಿದ ಪುರಸಭೆ ಸಿಬ್ಬಂದಿಗಳು

ಬಂಟ್ವಾಳ: ರಾತ್ರಿ ಮತ್ತೆ ನೆರೆ ಭೀತಿ ಎದುರಾದ ಹಿನ್ನಲೆಯಲ್ಲಿ ಬಂಟ್ವಾಳ ಪುರಸಭೆಯ ಮುಖ್ಯಾಧಿಕಾರಿ ಲೀನಾ ಬ್ರಿಟ್ಟೋ ಅವರು ತನ್ನ ಅಧಿಕಾರಿಗಳು ಹಾಗೂ ಪೌರಕಾರ್ಮಿಕರೊಂದಿಗೆ ಮಧ್ಯರಾತ್ರಿ 1.30 ರ ವೇಳೆಗೆ ನೆರೆಪೀಡಿತ ತಗ್ಗು ಪ್ರದೇಶಗಳಿಗೆ ದೌಡಾಯಿಸಿ ಜನರ ಸುರಕ್ಷತೆಯ ದೃಷ್ಟಿಯಿಂದ ಅಪಾಯಕಾರಿ ರಸ್ತೆಗಳಾದ ಗೂಡಿನಬಳಿ, ಕಂಚುಗಾರ ಪೇಟೆ, ಆಲಡ್ಕ, ನಂದಾವರ, ಬಡ್ಡಕಟ್ಟೆಯಲ್ಲಿ ಬ್ಯಾರಿಕೇಡ್ ಹಾಗೂ ರಿಬ್ಬನ್ ಗಳನ್ನು ಕಟ್ಟಿ ಮುಂಜಾಗೃತ ಕ್ರಮಗಳನ್ನು ಕೈಗೊಂಡರು.

ಬಂಟ್ವಾಳ : ನೇಣು ಬಿಗಿದು ಯುವಕ ಆತ್ಮಹತ್ಯೆ

ಬಂಟ್ವಾಳ : ಯುವಕನೋರ್ವ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಾಣಿ ಸಮೀಪದ ಬುಡೋಳಿ ಮಡಲ ಎಂಬಲ್ಲಿ ನಡೆದಿದೆ. ಬುಡೋಳಿ ಮಡಲ ನಿವಾಸಿ ಸುಶಾಂತ್ (25) ಮೃತ ಯುವಕ. ಸುಶಾಂತ್ ಮಿನಿ ಬಸ್ ಖರೀದಿಸಿ ಸ್ವಂತ ವಾಹನದಲ್ಲಿ ಚಾಲಕನಾಗಿ ದುಡಿಯುತ್ತಿದ್ದ. ಸಾಮಾಜಿಕವಾಗಿ ಸೇವಾಕಾರ್ಯಗಳನ್ನು ಸಂಘಟನೆಯ ಜೊತೆಗೆ ‌ಮಾಡಿಕೊಂಡಿದ್ದು, ಉತ್ತಮ ಯುವಕನಾಗಿ ಗುರುತಿಸಿಕೊಂಡಿದ್ದ. ವಿಟ್ಲ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಆತ್ಮಹತ್ಯೆಗೆ

ಶಾಸಕರಾದ ಗುರುರಾಜ್ ಗಂಟಿಹೊಳೆ ಗುಜ್ಜಾಡಿ ನಾಯಕವಾಡಿ ಕಡಲ ಕೊರೆತ ವೀಕ್ಷಣೆ

ಬೈಂದೂರು; ಶಾಸಕರಾದ ಗುರುರಾಜ್ ಗಂಟಿಹೊಳೆ ಅವರು ತ್ರಾಸಿ ಗ್ರಾಮ ಪಂಚಾಯಿತ ವ್ಯಾಪ್ತಿಯ ಗುಜ್ಜಾಡಿ, ನಾಯಕವಾಡಿ ಕಡಲ್ಕೊರೆತ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.ಸಮುದ್ರ ಅಲೆಗಳ ಆರ್ಭಟದಿಂದ ಉಂಟಾದ ಕಡಲ ತೀರದ ಹಾನಿಗಳ ಕುರಿತು‌ ಸ್ಥಳೀಯರು ಹಾಗೂ ಊರಿನ ಪ್ರಮುಖರಿಂದ ಮಾಹಿತಿ ಪಡೆದು. ತುರ್ತು ಪರಿಹಾರದ ಕಾರ್ಯ ಬಗ್ಗೆ ಮುಂಜಾಗ್ರತಾ ಕ್ರಮದ ಕುರಿತು ಚರ್ಚೆ ನಡೆಸಿದರು. ಕಡಲ್ಕೊರೆತ ಸಮಸ್ಯೆಗೆ ಶಾಶ್ವತ ಪರಿಹಾರಕ್ಕೆ ಸಂಬಂಧಪಟ್ಟ ಇಲಾಖೆ ಹಾಗೂ ‌ಸರಕಾರದ

ಬಂಟ್ವಾಳ: ನದಿ ತೀರದ ತಗ್ಗು ಪ್ರದೇಶಗಳು ನೆರೆ ನೀರಿನಿಂದ ಜಲಾವೃತ

ಬಂಟ್ವಾಳ: ತಾಲೂಕು ವ್ಯಾಪ್ತಿಯಲ್ಲಿ ಬುಧವಾರ ರಾತ್ರಿಯಿಡಿ ಭಾರಿ ಮಳೆ ಸುರಿದಿದ್ದು ನದಿ ತೀರದ ತಗ್ಗು ಪ್ರದೇಶಗಳು ನೆರೆ ನೀರಿನಿಂದ ಜಲಾವೃತಗೊಂಡಿದೆ. ನೇತ್ರಾವತಿ ನದಿಯಲ್ಲಿ ಗುರುವಾರ ಬೆಳಗ್ಗಿನ ವೇಳೆ ನೀರಿನ ಮಟ್ಟ7.8 ಮೀಟರ್ ದಾಖಲಾಗಿದ್ದು ಅಪಾಯದ ಮಟ್ಟವನ್ನು ಮೀರುವ ರೀತಿ ನದಿಯಲ್ಲಿ ನೀರು ಹರಿದು ಬರುತ್ತಿದ್ದು ಜನರಲ್ಲಿ ಆತಂಕ ಮನೆಮಾಡಿತ್ತು. ಪಾಣೆಮಂಗಳೂರು ಬಳಿಯ ಆಲಡ್ಕ ಮಿಲಿಟರಿ ಮೈದಾನ, ಶ್ರೀಶಾರದ ಪ್ರೌಢಶಾಲೆಯ ಮೈದಾನ, ನಂದಾವರ ಬಳಿಯ ಅಡಿಕೆ ತೋಟ ನೆರೆ

ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿಯಾಗಿ ಪದೋನ್ನತಿ ಹೊಂದಿದ ಶ್ರೀ ಸುಂದರ ಗೌಡ ಅವರಿಗೆ ಎವಿಜಿ ಶಾಲೆಯಲ್ಲಿ ಅಭಿನಂದನೆ

ಪುತ್ತೂರು: ಪುತ್ತೂರು ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿಯವರ ಕಛೇರಿಯಲ್ಲಿ ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿಯಾಗಿದ್ದ ಶ್ರೀ ಸುಂದರ ಗೌಡ ಅವರು ಪಧೋನ್ನತಿ ಹೊಂದಿ ರಾಮನಗರ ಜಿಲ್ಲೆಯ ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿಯಾಗಿ ತೆರಳುತ್ತಿರುವ ಈ ಸಂದರ್ಭದಲ್ಲಿ ಪುತ್ತೂರು ಬನ್ನೂರು ಕೃಷ್ಣನಗರದ ಎವಿಜಿ ಇಂಗ್ಲೀಷ್ ಮೀಡಿಯಂ ಸ್ಕೂಲ್ ನಲ್ಲಿ ಅಭಿನಂದಿಸಿ ಗೌರವಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಸ್ಥೆಯ ಆಡಳಿತ ಮಂಡಳಿಯ ಅಧ್ಯಕ್ಷರಾದ ಶ್ರೀ ವೆಂಕಟರಮಣ ಗೌಡ

ಬಿ.ಸಿ. ರೋಡ್‌ನಲ್ಲಿ ರಕ್ತನಿಧಿ ಸೆಂಟರ್ ಲೋಕಾರ್ಪಣೆ

ಬಂಟ್ವಾಳ: ರೋಟರಿಕ್ಲಬ್ ಬಂಟ್ವಾಳ ಬಿ.ಸಿ.ರೋಡಿಗೆ ಸಮೀಪದ ಗೂಡಿನಬಳಿಯಲ್ಲಿರುವ ಕ್ಲಬ್‌ನ ಕಟ್ಟಡದಲ್ಲಿ ಸುಮಾರು ೮೫ ಲಕ್ಷ ರೂ. ವೆಚ್ಚದಲ್ಲಿ ಅನುಷ್ಠಾನಕ್ಕೆ ತಂದಿರುವ ರಕ್ತನಿಧಿ ಸೆಂಟರ್ ಲೋಕಾರ್ಪಣೆ ಗೊಂಡಿತು.ಬಂಟ್ವಾಳ ತಾಲೂಕಿನ ಬಹು ಕಾಲದ ಬೇಡಿಕೆಯೊಂದು ಈಡೇರಿದೆ. ರೋಟರಿ ಜಿಲ್ಲಾ ೩೧೮೧ ರ ಗವರ್ನರ್ ಎಚ್. ಆರ್.ಕೇಶವ ಅವರು ಉದ್ಘಾಟಿಸಿ, ಬಂಟ್ವಾಳ ರೋಟರಿ ಕ್ಲಬ್‌ನ ಸೇವಾ ಕಾರ್ಯವನ್ನು ಶ್ಲಾಘಿಸಿದರು. ಈ ಕ್ಲಬ್‌ನ ಸದಸ್ಯರ ಸಾಮರ್ಥ ಹಾಗೂ ಬದ್ದತೆ ಅಭಿನಂದನೀಯ ಎಂದರು.

ಬಂಟ್ವಾಳ : ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಖಂಡಿಸಿ ಬಿಜೆಪಿ ಮಂಡಲ ವತಿಯಿಂದ ಪ್ರತಿಭಟನೆ

ಬಂಟ್ವಾಳ: ಕರ್ನಾಟಕದಲ್ಲಿ ಪೆಟ್ರೋಲ್ ಡಿಸೇಲ್ ಬೆಲೆ ಏರಿಕೆ ಮಾಡಿದ ಕಾಂಗ್ರೆಸ್ ಸರಕಾರದ ವಿರುದ್ಧ ಪ್ರತಿಭಟನೆ ಹಾಗೂ ರಾಷ್ಡ್ರೀಯ ಹೆದ್ದಾರಿ ತಡೆ ಬಿಜೆಪಿ ಬಂಟ್ವಾಳ ಮಂಡಲದ ವತಿಯಿಂದ ಬಿ.ಸಿ.ರೋಡಿನಲ್ಲಿ ನಡೆಯಿತು. ಶಾಸಕ ರಾಜೇಶ್ ನಾಯ್ಕ್ ಪ್ರತಿಭಟಮಕಾರರನ್ನು ಉದ್ದೇಶಿಸಿ ಮಾತನಾಡಿ ದೇಶದ ಆರ್ಥಿಕ ವ್ಯವಸ್ಥೆಯಲ್ಲಿ ಹಿಂದಿನ ಸರಕಾರದ ಅವಧಿಯಲ್ಲಿ ಕರ್ನಾಟಕ ಮೊದಲ ಸ್ಥಾನದಲ್ಲಿತ್ತು. ಈಗ ನಾಲ್ಕನೇ ಸ್ಥಾನಕ್ಕೆ ಹಿಂದೆ ಸರಿದಿದೆ. ಕಾಂಗ್ರೆಸ್ ಸರಕಾರ ಗ್ಯಾರಂಟಿ ನೆಪದಲ್ಲಿ

ಬಂಟ್ವಾಳ : ಜೂನ್ 15ರಂದು ದಿ.ರಾಜ ಪಲ್ಲಮಜಲು 3ನೇ ಸ್ಮರಣಾರ್ಥ ನುಡಿನಮನ

ಬಂಟ್ವಾಳ: ಸ್ಮಾರ್ಟ್ ಗೈಸ್ ಕೈಕಂಬ, ಅಂಬೇಡ್ಕರ್ ಯುವವೇದಿಕೆ ಬಂಟ್ವಾಳ ಆಶ್ರಯದಲ್ಲಿ ದ.ಕ.ಜಿಲ್ಲಾ ಅಮೆಚೂರ್ ಕಬಡ್ಡಿ ಅಸೋಸಿಯೇಶನ್ ಸಹಭಾಗಿತ್ವದಲ್ಲಿ ಸಮಾಜಮುಖಿ, ಮಾನವತಾವಾದಿ ದಿ.ರಾಜ ಪಲ್ಲಮಜಲು ಅವರು ನಿಧನ ಹೊಂದಿ 3ನೇ ವರ್ಷದ ಸ್ಮರಣಾರ್ಥ, ನುಡಿನಮನ, ಪ್ರತಿಭಾ ಪುರಸ್ಕಾರ ಮತ್ತು ಹೊನಲು ಬೆಳಕಿನ ಮ್ಯಾಟ್ ಕಬಡ್ಡಿ ಪಂದ್ಯಾಟ ಎಸ್.ಜಿ.ಕೆ. ಟ್ರೋಫಿ 2024 ಕಾರ್ಯಕ್ರಮಗಳು ಜೂನ್ 15ರಂದು ಸಂಜೆ ಬಂಟ್ವಾಳ ಸ್ಪರ್ಶ ಕಲಾ ಮಂದಿರದಲ್ಲಿ ನಡೆಯಲಿದೆ. ಈ ವಿಷಯವನ್ನು ಸಂಘಟಕ,

ಬಂಟ್ವಾಳ : ದ.ಕ. ಜಿಲ್ಲಾ ಗ್ಯಾರೇಜು ಮಾಲಕರ ಸಂಘದ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ

ಬಂಟ್ವಾಳ: ದ.ಕ. ಜಿಲ್ಲಾ ಗ್ಯಾರೇಜು ಮಾಲಕರ ಸಂಘ ಬಂಟ್ವಾಳ ವಲಯ ಇದರ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಹಾಗೂ ಪ್ರಥಮ ಮಾಸಿಕ ಸಭೆ ಸಂಘದ ನೂತನ ಅಧ್ಯಕ್ಷ ಸುಧೀರ್ ಪೂಜಾರಿ ಅಧ್ಯಕ್ಷತೆಯಲ್ಲಿ ಬಿ.ಸಿ.ರೋಡಿನ ಗಾಣದಪಡ್ಪುವಿನಲ್ಲಿರುವ ಆಟೋಲೈನ್ಸ್ ಗ್ಯಾರೇಜಿನಲ್ಲಿ ನಡೆಯಿತು. ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ದ.ಕ. ಜಿಲ್ಲಾ ಗ್ಯಾರೇಜು ಮಾಲಕರ ಸೌಹಾರ್ದ ಸಹಕಾರ ಸಂಘದ ಅಧ್ಯಕ್ಷ ಜನಾರ್ದನ ಅತ್ತಾವರ ಅವರು ಮಾತನಾಡಿ ಸದಸ್ಯರ ಸಹಕಾರವಿದ್ದಾಗ ಸಂಘಟನೆ