Home Posts tagged #belthangadi (Page 10)

ಬೆಳ್ತಂಗಡಿಯ ಶಿಬಾಜೆಯಲ್ಲಿ ನಡೆದ ದಲಿತ ಯುವಕನ ಕೊಲೆ ಪ್ರಕರಣ : ಆರೋಪಿಗಳ ಬಂಧನಕ್ಕೆ ಒತ್ತಾಯ

ಬೆಳ್ತಂಗಡಿ ತಾಲೂಕಿನ ಶಿಬಾಜೆ ಕುರುಂಜಿ ಗ್ರಾಮದ ತೋಟದ ಕಾರ್ಮಿಕನಾಗಿ ದುಡಿಯುತ್ತಿದ್ದ ದಲಿತ ಸಮುದಾಯಕ್ಕೆ ಸೇರಿದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ ಹತ್ಯೆ ಗೈದಿರುವ ಆರೋಪಿಗಳ ಮೇಲೆ ಕೊಲೆ, ದರೋಡೆ, ಹಲ್ಲೆ, ದಲಿತ ದೌರ್ಜನ್ಯ ದಾಖಲಾದರೂ ರಾಜಕೀಯ ಒತ್ತಡಕ್ಕೆ ಒಳಗಾದ ಪೊಲೀಸ್ ಇಲಾಖೆ ಆರೋಪಿಗಳನ್ನು ಬಂಧಿಸದೆ ರಕ್ಷಣೆಗೆ ಮುಂದಾಗಿರುವ ಘಟನೆ ನಡೆದಿದೆ.

ಡಿ.17ರಂದು ಬೆಳ್ತಂಗಡಿಗೆ ವಿಪಕ್ಷ ನಾಯಕ ಸಿದ್ದರಾಮಯ್ಯ ಭೇಟಿ

ಇದೇ ತಿಂಗಳ 17 ರಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಬೆಳ್ತಂಗಡಿ ಗೆ ಆಗಮಿಸಲಿದ್ದಾರೆ ಎಂದು ಬೆಳ್ತಂಗಡಿಯ ಮಾಜಿ ಶಾಸಕ ವಸಂತ ಬಂಗೇರ ಅವರು ಹೇಳಿದರು. ಅವರು ಬೆಳ್ತಂಗಡಿಯಲ್ಲಿ ಮಾದ್ಯಮದ ಜೊತೆ ಮಾತನಾಡಿ ಈ ತಿಂಗಳ 17ರಂದು ವಸಂತ ವಿನ್ಯಾಸ ಪುಸ್ತಕ ಬಿಡುಗಡೆ ಗೊಳಿಸಿ ನಂತರ ಕಾಂಗ್ರೆಸ್ ವತಿಯಿಂದ ಜಿಲ್ಲಾ ಮಟ್ಟದ ಕಬಡ್ಡಿ ಪಂದ್ಯಾಟ ಉದ್ಘಾಟನೆ ಮಾಡಲಿದ್ದಾರೆ ಎಂದು ಹೇಳಿದರು.ಬೆಳ್ತಂಗಡಿ ಕಾಂಗ್ರೆಸ್ ಕಾರ್ಯಕರ್ತರ ಹುರಿದುಂಬಿಸಲು ಪಕ್ಷ ಬಲವರ್ಧನೆ ಮತ್ತು ಪಕ್ಷ

ಆಟೋ ಮತ್ತು ಸ್ಕೂಟರ್ ಢಿಕ್ಕಿ-ಪ್ರಗತಿಪರ ಕೃಷಿಕ ದಾರುಣ ಅಂತ್ಯ – belthangady

ಬೆಳ್ತಂಗಡಿ: ಆಟೋ ಮತ್ತು ಸ್ಕೂಟರ್ ಪರಸ್ಪರ ಢಿಕ್ಕಿ ಹೊಡೆದು ಪ್ರಗತಿಪರ ಕೃಷಿಕರೋರ್ವರು ಮೃತಪಟ್ಟ ಘಟನೆ ಬೆಳ್ತಂಗಡಿಯ ಕಾಶಿಪಟ್ಟ ಗ್ರಾಮದಲ್ಲಿ ನಡೆದಿದೆ.ಕೊಕ್ರಾಡಿ- ಶಿರ್ತಾಡಿ ರಸ್ತೆಯ ಪೆರಂದಡ್ಕ ಎಂಬಲ್ಲಿ ಅಪಘಾತ ಸಂಭವಿಸಿದೆ ಎಂದು ತಿಳಿದುಬಂದಿದೆ. ಬೆಳ್ತಂಗಡಿ ತಾಲೂಕಿನ ನಾರಾವಿ ಗ್ರಾಮದ ಹಂಬಡ ನಿವಾಸಿ,ನಿತ್ಯಾನಂದ ಪೂಜಾರಿ (48) ಮೃತಪಟ್ಟ ದುರ್ದೈವಿ. ನಿತ್ಯಾನಂದ ಪೂಜಾರಿ ಅವರು ಶಿರ್ತಾಡಿ ಕಡೆಯಿಂದ ಪೆರಾಡಿಯತ್ತ ಸ್ಕೂಟರ್‌ನಲ್ಲಿ ಸಾಗುತ್ತಿದ್ದರು. ವಿರುದ್ಧ

ನಟ ಶಿವರಾಜ್ ಕುಮಾರ್ ಧರ್ಮಸ್ಥಳಕ್ಕೆ ಭೇಟಿ

ಬೆಳ್ತಂಗಡಿ : ಧರ್ಮಸ್ಥಳದ ಶ್ರೀ ಮಂಜುನಾಥನ ಸನ್ನಿಧಾನಕ್ಕೆ ಕನ್ನಡ ಚಿತ್ರ ನಟ ಶಿವರಾಜ್ ಕುಮಾರ್ ಅವರು ಕುಟುಂಬ ಸಹಿತವಾಗಿ ಭೇಟಿ ನೀಡಿ ದೇವರ ದರ್ಶನ ಪಡೆದಿದ್ದಾರೆ. ನಟ ಶಿವರಾಜ್ ಕುಮಾರ್ ಮತ್ತು ಕುಟುಂಬ ವಿವಿಧ ದೇವಸ್ಥಾನಗಳಿಗೆ ಭೇಟಿ ನೀಡಿ ದೇವರ ದರ್ಶನ ಪಡೆದಿದ್ದು ಡಿ.9 ರಂದು ಸಂಜೆ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಶಿವರಾಜ್ ಕುಮಾರ್ ಕುಟುಂಬ ಅಗಮಿಸಿದ್ದು ಮಂಜುನಾಥ ಸ್ವಾಮಿಯ ದರ್ಶನ ಪಡೆದರು. ಈ ವೇಳೆ ಪತ್ನಿ ಗೀತಾ ಶಿವರಾಜ್ ಕುಮಾರ್, ಪುತ್ರಿಯರಾದ ನಿರುಪಮ

ವಕೀಲರ ಮೇಲಿನ ದೌರ್ಜನ್ಯ ಆರೋಪ : ಬೆಳ್ತಂಗಡಿಯಲ್ಲಿ ವಕೀಲರ ಸಂಘದಿಂದ ಪ್ರತಿಭಟನೆ

ವಕೀಲರ ಮೇಲಿನ ದೌರ್ಜನ್ಯವನ್ನು ಖಂಡಿಸಿ ಬೆಳ್ತಂಗಡಿಯಲ್ಲಿ ವಕೀಲರ ಸಂಘದವರು ಪ್ರತಿಭಟನೆ ನಡೆಸಿದರು. ಈ ಸಂದರ್ಭದಲ್ಲಿ ಮಾತನಾಡಿದ ವಕೀಲರ ಸಂಘದ ಅಧ್ಯಕ್ಷರಾದ ಪ್ರಸಾದ್ ಕೆ.ಎಸ್. ಅವರು, ವಕೀಲರ ಮನೆಗೆ ಬಂದು ಪೊಲೀಸರು ಹಲ್ಲೆ ಮಾಡಿರುವುದು ಖಂಡನೀಯ, ಹಲ್ಲೆಗೈದ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಅಲ್ಲದೆ ಪುಂಜಾಲಕಟ್ಟೆ ಲೀಸ್ ಉಪನಿರೀಕ್ಷಕರನ್ನು ಕೂಡಲೇ ಅಮಾನತು ಮಾಡಬೇಕು ಇಲ್ಲದೆ ಹೋದರೆ ಮುಂದಕ್ಕೆ ಉಗ್ರವಾದ ಹೋರಾಟ ಮಾಡುವುದಾಗಿ ಹೇಳಿದರು.

ಬೆಳ್ತಂಗಡಿಯಲ್ಲಿ ಸ್ಯಾಟಲೈಟ್ ಕರೆ ಹೋಗಿರುವುದು ದೃಢಪಟ್ಟಿಲ್ಲ: ಎಸ್ಪಿ ರಿಷಿಕೇಶ್ ಸೋನಾವಣೆ

ಬೆಳ್ತಂಗಡಿ ತಾಲೂಕಿನ ತೋಟತ್ತಾಡಿ ಗ್ರಾಮದ ಬೆಂದ್ರಾಳ ಅರಣ್ಯ ಪ್ರದೇಶದಿಂದ ಸ್ಯಾಟ್ ಲೈಟ್ ಕರೆ ಹೋಗಿದೆ ಎಂಬ ವಿಚಾರವಾಗಿ ಧರ್ಮಸ್ಥಳ ಪೊಲೀಸರು ಪರಿಶೀಲನೆ ನಡೆಸಿದ್ದು, ಈ ಬಗ್ಗೆ ಯಾವುದೇ ನಿರ್ದಿಷ್ಟ ಮಾಹಿತಿ ದೃಢೀಕರಿಸಲ್ಪಟ್ಟಿಲ್ಲ ಎಂದು ದ.ಕ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಿಷಿಕೇಶ್ ಭಗವಾನ್ ಸೋನಾವಣೆ ತಿಳಿಸಿದ್ದಾರೆ. ಬೆಂದ್ರಾಳ ಅರಣ್ಯ ಪ್ರದೇಶದಿಂದ ಸ್ಯಾಟ್ ಲೈಟ್ ಕರೆ ಹೋಗಿದೆ, ಭಾರೀ ಸ್ಫೋಟದ ಸದ್ದು ಕೇಳಿಸಿದೆ ಎನ್ನುವ ವದಂತಿ ಹರಡಿದ ಹಿನ್ನೆಲೆಯಲ್ಲಿ

ಧರ್ಮಸ್ಥಳದ ಖಾವಂದರಿಗೆ 75ರ ಸಂಭ್ರಮ

ಶ್ರೀ ಕ್ಷೇತ್ರ ಧರ್ಮಸ್ಥಳ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆ ಅವರು ನ. 25ರಂದು 75ನೇ ವಸಂತಕ್ಕೆ ಕಾಲಿಡಲಿದ್ದು, ತಮ್ಮ ನಿವಾಸದಲ್ಲಿ ಸರಳವಾಗಿ ಜನ್ಮದಿನಾಚರಣೆ ಆಚರಿಸಿಕೊಳ್ಳಲಿರುವರು. ಧರ್ಮಾಧಿಕಾರಿಗಳಾಗಿದ್ದ ಕೀರ್ತಿಶೇಷ ಡಿ. ರತ್ಮವರ್ಮ ಹೆಗ್ಗಡ ಮತ್ತು ರತ್ನಮ್ಮ ದಂಪತಿಯ ಹಿರಿಯ ಪುತ್ರನಾಗಿ 1948ರ ನ. 25ರಂದು ಜನಿಸಿದ ವೀರೇಂದ್ರ ಕುಮಾರ್‌ ಅವರು ಡಿ. ವೀರೇಂದ್ರ ಹೆಗ್ಗಡೆಯಾಗಿ 1964ರ ಅ. 24ರಂದು ಧರ್ಮಸ್ಥಳದ 21 ನೇ ಧರ್ಮಾಧಿಕಾರಿಯಾಗಿ ನೆಲ್ಯಾಡಿ

ಬೆಳ್ತಂಗಡಿ : ಬೈಕ್ ಅಪಘಾತದಲ್ಲಿ ಯುವಕ ಮೃತ್ಯು

ಬೆಳ್ತಂಗಡಿ : ಬೈಕ್ ಸ್ಕಿಡ್ ಆಗಿ ಕಲ್ಲಿನ‌ಕಂಬಕ್ಕೆ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಮೃತಪಟ್ಟ ಘಟನೆ ಮುಂಡಾಜೆ ಗ್ರಾಮದ ದುರ್ಗಾಪರಮೇಶ್ವರೀ ದೇವಸ್ಥಾನದ ಪಕ್ಕದ ತಿರುವು ರಸ್ತೆಯಲ್ಲಿ ನಡೆದಿದೆ.ಅಣಿಯೂರಿನ ನೆರಿಯದ ಪ್ರದೀಪ ಗೌಡ (22) ಮೃತ ಯುವಕ.ಅಣಿಯೂರಿನ ನೋಣಯ್ಯ‌ ಗೌಡ ಎಂಬವರ ಪುತ್ರರಾಗಿರುವ ಪ್ರದೀಪ ಅವರು ಸಂಬಂಧಿಗಳ ಮನೆಯಲ್ಲಿ ಇರುವ ಶುಭ ಕಾರ್ಯದ ನಿಮಿತ್ತ ವಸ್ತುವೊಂದನ್ನು ನೀಡಲು ತೆರಳುತ್ತಿದ್ದರು.ಈ ವೇಳೆ ಪ್ರದೀಪ್ ಚಲಾಯಿಸುತ್ತಿದ್ದ ಬೈಕ್ ನಿಯಂತ್ರಣ

ಉಡವೊಂದನ್ನು ಬೇಟೆಯಾಡಿದ ಬೃಹತ್ ಗಾತ್ರದ ಕಾಳಿಂಗ ಸರ್ಪ

ಬೆಳ್ತಂಗಡಿ ತಾಲೂಕಿನ ಮೇಲಂತಬೆಟ್ಟು ಗ್ರಾಮದ ಕಡಂಬು ಎಂಬಲ್ಲಿ ಯುವ ಉದ್ಯಮಿ ಶಶಿರಾಜ್ ಶೆಟ್ಟಿ ಅವರ ಮನೆಯ ಹಿಂಭಾಗ ಉಡವೊಂದನ್ನು ಬೇಟೆಯಾಡಿದ ಬೃಹತ್ ಗಾತ್ರದ ಕಾಳಿಂಗ ಸರ್ಪವೊಂದನ್ನು ಸೆರೆ ಹಿಡಿಯಲಾಯಿತು. ಉದ್ಯಮಿ ಶಶಿರಾಜ್ ಶೆಟ್ಟಿ ಯವರ ಮನೆಯ ಹಿಂಭಾಗದಲ್ಲಿ ದೊಡ್ಡ ಗಾತ್ರದ ಉಡವನ್ನು ಬೃಹತ್ ಗಾತ್ರದ ಕಾಳಿಂಗ ಸರ್ಪವೊಂದು ಬೇಟೆಯಾಡುವುದನ್ನು ಗಮನಿಸಿ ಸ್ನೇಕ್ ಅಶೋಕ್ ಕುಮಾರ್ ಲಾಯಿಲ ಅವರಿಗೆ ಮಾಹಿತಿ ನೀಡಿದರು. ತಕ್ಷಣ ಆಗಮಿಸಿದ ಸ್ನೇಕ್ ಅಶೋಕ್ ಕುಮಾರ್ ಅವರು

ಬೆಳ್ತಂಗಡಿ :ಹೊಂಡಮಯ ರಸ್ತೆಗಳಿಗೆ ತೇಪೆ ಕಾರ್ಯ

ಬೆಳ್ತoಗಡಿತಾಲೂಕಿನಲ್ಲಿರಾಷ್ಟೀಯ ಹೆದ್ದಾರಿ 73ರಲ್ಲಿ ಗುರುವಾಯನಕೆರೆಯಿಂದ ಉಜಿರೆವರೆಗೆ ಹೊಂಡಮಯವಾಗಿರುವ ಸ್ಥಳಗಳಿಗೆ ಕಡೆಗೂ ತೇಪೆ ಕಾರ್ಯಕ್ಕೆ ಇಲಾಖೆ ಮುಂದಾಗಿದೆ.ಪೂoಜಾಲಕಟ್ಟೆಯಿoದ ಚಾರ್ಮಾಡಿ ವರೆಗಿನ ರಸ್ತೆಯಲ್ಲಿ ಅಲ್ಲಲ್ಲಿ ಹೊಂಡಗುAಡಿ ಸೃಷ್ಟಿಯಾಗಿದ್ದು, ವಾಹನ ಸವಾರರು ಹರಸಾಹಸ ಪಡುವಂತಾಗಿತ್ತು. ದುರಸ್ತಿಗೆ ಅನೇಕ ಬಾರಿ ಪ್ರತಿಭಟನೆಗಳು ನಡೆದರೂ ಮಳೆಯಿಂದಾಗಿ ದುರಸ್ತಿ ಕಾರ್ಯ ಮುಂದೂಡಲೇ ಹೋಗಿತ್ತು. ಇದೀಗ ಕಳೆದ ಕೆಲ ದಿನಗಳಿಂದ ಮಳೆ ನಿಂತಿರುವುದಿರAದ