Home Posts tagged #belthangadi (Page 3)

ನೆಲ್ಯಾಡಿ: ವಿಶ್ವವಿದ್ಯಾನಿಲಯ ಕಾಲೇಜು; 68ನೇ ಕನ್ನಡ ರಾಜ್ಯೋತ್ಸವ ಸಂಭ್ರಮಾಚರಣೆ

ನೆಲ್ಯಾಡಿಯ ವಿಶ್ವವಿದ್ಯಾನಿಲಯ ಘಟಕ ಕಾಲೇಜಿನಲ್ಲಿ 68ನೇ ಕನ್ನಡ ರಾಜ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು. ಜ್ಯೋತಿ ಬೆಳಗಿಸಿ ತಾಯಿ ಭುವನೇಶ್ವರಿಗೆ ಪುಷ್ಪಾರ್ಚನೆ ಮಾಡುವ ಮೂಲಕ ಅರ್ಥಶಾಸ್ತ್ರ ವಿಭಾಗದ ಉಪನ್ಯಾಸಕರಾದ ಸಚಿನ್ ಅವರು ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಅಧ್ಯಕ್ಷೀಯ ನುಡಿಗಳಲ್ಲಿ ಕನ್ನಡ ಭಾಷೆಯ ಐತಿಹಾಸಿಕ ಹಿನ್ನೆಲೆಯ ಕುರಿತು ಇಂದಿನ ಯುವ ಸಮುದಾಯ

ಬೆಳ್ತಂಗಡಿ: ಕಳೆಂಜ ಗ್ರಾಮದ ಅರಣ್ಯ ವಾಸಿಗಳಿಗೆ ಪರ್ಯಾಯ ವ್ಯವಸ್ಥೆ ಕಲ್ಪಿಸಿ: ಪ್ರತಾಪ್ ಸಿಂಹ ನಾಯಕ್

ಬೆಳ್ತಂಗಡಿ ತಾಲೂಕಿನ ಕಳೆಂಜ ಗ್ರಾಮದಲ್ಲಿ ಅರಣ್ಯ ವಾಸಿಗಳಿಗೆ ಪರ್ಯಾಯ ವ್ಯವಸ್ಥೆ ಮಾಡಬೇಕು ಎಂದು ವಿಧಾನ ಪರಿಷತ್ ಸದಸ್ಯರಾದ ಪ್ರತಾಪ್ ಸಿಂಹ ನಾಯಕ್ ಹೇಳಿದರು. ಅವರು ಬೆಳ್ತಂಗಡಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿ, ಹಿಂದೆ 2016ರಲ್ಲಿ ಸಿದ್ದರಾಮಯ್ಯನವರ ಸರ್ಕಾರ ಇರುವಾಗ ಪ್ರಸ್ತಾಪ ಸಲ್ಲಿಸಿದ್ದರು. ನಂತರ ಬಿಜೆಪಿ ಸರ್ಕಾರ ಬಂದ ನಂತರ ಕಾರ್ಯರೂಪಕ್ಕೆ ತಂದಿದ್ದೇವೆ. ಈಗ ಸಿದ್ದರಾಮಯ್ಯರ ಸರಕಾರ ಅದನ್ನು ಮುಂದುವರೆಸಿಕೊಡು ಹೋಗಬೇಕು ಎಂದು ಹೇಳಿದರು.

ನೆಲ್ಯಾಡಿ: ಕಾರು ಅಪಘಾತ; ಮೂವರಿಗೆ ಗಾಯ

ನೆಲ್ಯಾಡಿ: ಕೊಣಾಲು ಗ್ರಾಮದ ಕೊಲ್ಪೆ ಎಂಬಲ್ಲಿ ಕಾರು ಅಪಘಾತಗೊಂಡು ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಚಾಲಕ ಸೇರಿ ಮೂವರು ಗಾಯಗೊಂಡಿರುವ ಘಟನೆ ಅ.30ರಂದು ಬೆಳಿಗ್ಗೆ ಘಟನೆ ನಡೆದಿದೆ. ಬೆಂಗಳೂರಿನಿಂದ ಮಂಗಳೂರಿಗೆ ಬರುತ್ತಿದ್ದ ಕಾರು ರಸ್ತೆ ಬದಿಯ ಚರಂಡಿಯ ತಡೆಗೋಡೆಗೆ ಡಿಕ್ಕಿಯಾಗಿ, ಡಿಕ್ಕಿ ರಬಸಕ್ಕೆ ಕಾರು ನಜ್ಜುಗುಜ್ಜಾಗಿದ್ದು, ಕಾರಿನಲ್ಲಿದ್ದ ಪ್ರಯಾಣಿಕರು ನೆಲ್ಯಾಡಿ ಯ ಖಾಸಗಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆಯನ್ನು ಪಡೆದು ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ

ಬೆಳ್ತಂಗಡಿ: ತಂದೆ-ಮಗನ ನಡುವೆ ವೈದ್ಯಕೀಯ ದಾಖಲೆ ವಿಷಯದಲ್ಲಿ ಜಗಳ: ಚೂರಿಯಿಂದ ಇರಿದು ಮಗನನ್ನು ಕೊಲೆಗೈದ ತಂದೆ

ಬೆಳ್ತಂಗಡಿ: ವೈದ್ಯಕೀಯ ಚಿಕಿತ್ಸೆಯ ದಾಖಲೆ ನೀಡುವಂತೆ ನಡೆದ ತಂದೆ-ಮಗನ ಜಗಳ ವಿಕೋಪಕ್ಕೆ ತೆರಳಿ ತಂದೆಯೇ ಮಗನನ್ನು ಚೂರಿಯಿಂದ ಇರಿದು ಕೊಲೆ ಮಾಡಿದ ಘಟನೆ ನಿನ್ನೆ(ಅ.29) ರಾತ್ರಿ ಉಜಿರೆಯಲ್ಲಿ ಸಂಭವಿಸಿದೆ. ಉಜಿರೆ ಗ್ರಾಮದ ಕೊಡೆಕಲ್ಲು ನಿವಾಸಿ ಕೃಷ್ಣಯ್ಯ ಆಚಾರ್(75ವ) ಅವರ ಪುತ್ರ ಜಗದೀಶ್(30ವ) ಎಂಬವರು ಈ ಘಟನೆಯಲ್ಲಿ ಮೃತಪಟ್ಟವರಾಗಿದ್ದಾರೆ. ಇವರ ತಂದೆ ಕೃಷ್ಣಯ್ಯ ಆಚಾರ್ ಚೂರಿಯಿಂದ ಇರಿದು ಮಗನನ್ನು ಕೊಲೆಗೈದ ಆರೋಪಿಯಾಗಿದ್ದಾರೆ. ರಾತ್ರಿಯ ವೇಳೆ ವೈದ್ಯಕೀಯ

ನೆಲ್ಯಾಡಿ: ಶಿರಾಡಿ ಘಾಟ್‍ನಲ್ಲಿ ಅಕ್ಕಿ ಸಾಗಾಟದ ಲಾರಿ ಬೆಂಕಿಗಾಹುತಿ

ನೆಲ್ಯಾಡಿ: ಶಿರಾಡಿ ಘಾಟ್‍ನ ಡಬಲ್ ಟರ್ನ್‍ನಲ್ಲಿ ಹಾಸನ ಕಡೆಯಿಂದ ಮಂಗಳೂರಿಗೆ ಬರುತ್ತಿದ್ದ ಅಕ್ಕಿ ಸಾಗಾಟದ ಲಾರಿಯೊಂದು ಬೆಂಕಿಗಾಹುತಿ ಆಗಿರುವ ಘಟನೆ ನಡೆದಿದೆ. ಶಿರಾಡಿ ಘಾಟ್‍ನ ಡಬಲ್ ಟರ್ನ್‍ನಲ್ಲಿ ಹಾಸನ ಕಡೆಯಿಂದ ಮಂಗಳೂರಿಗೆ ಅಕ್ಕಿ ಸಾಗಾಟ ಮಾಡುತ್ತಿದ್ದ ಲಾರಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಲಾರಿ ಚಾಲಕ ಹಾಗೂ ಕ್ಲೀನರ್‍ಗೆ ಅಪಾಯದ ಮುನ್ಸೂಚನೆ ಸಿಗುತ್ತಿದ್ದಂತೆ ಲಾರಿಯನ್ನು ನಿಲ್ಲಿಸಿ ಕೆಳಗಿಳಿದು, ಅಪಾಯದಿಂದ

ನೆಲ್ಯಾಡಿ: ಅವಾಚ್ಯ ಪದ ಬಳಕೆ : ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ವಿರುದ್ಧ ಪ್ರಕರಣ ದಾಖಲು

ನೆಲ್ಯಾಡಿ: ವಲಯ ಅರಣ್ಯಾಧಿಕಾರಿಗಳನ್ನು ಅವಾಚ್ಯ ಪದಗಳಿಂದ ನಿಂದಿಸಿದ್ದು, ಬೆದರಿಕೆಯನ್ನು ಕೂಡ ಹಾಕಿದ್ದಾರಲ್ಲದೆ, ಅರಣ್ಯ ಇಲಾಖೆ ಅಧಿಕಾರಿಗಳು ಕರ್ತವ್ಯ ನಿರ್ವಹಿಸುತ್ತಿರುವಾಗ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಾರೆ ಎಂಬ ಕಾರಣಕ್ಕೆ ಉಪ್ಪಿನಂಗಡಿ ವಲಯ ಅರಣ್ಯ ಅಧಿಕಾರಿ ಜಯಪ್ರಕಾಶ್ ಕೆ.ಕೆ. ನೀಡಿದ ದೂರಿನಂತೆ ಧರ್ಮಸ್ಥಳ ಠಾಣೆಯಲ್ಲಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ವಿರುದ್ಧ ದೂರು ದಾಖಲಾಗಿದೆ. ಧರ್ಮಸ್ಥಳ ಪೊಲೀಸರು ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ. ಬೆಳ್ತಂಗಡಿ

ನೆಲ್ಯಾಡಿ: ನೂಜಿಬಾಳ್ತಿಲ ಸಿಡಿಲು ಬಡಿದು ಹಾನಿಯಾದ ಮನೆಗೆ ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಭೇಟಿ

ನೆಲ್ಯಾಡಿ: ಕಡಬ ತಾಲೂಕಿನ ನೂಜಿಬಾಳ್ತಿಲ ಗ್ರಾಮದ ನಡುವಳಿಕೆ ನೇಮಣ್ಣ ಗೌಡ ಅವರ ಮನೆಗೆ ಸಿಡಿಲು ಬಡಿದುಸಿಡಿಲು ಬಡಿದು ಹಾನಿಗೊಂಡಿರುತ್ತದೆ. ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ರವರು ಅವರ ಮನೆಗೆ ಭೇಟಿ ನೀಡಿ ಸಿಡಿಲು ಬಡಿದ ಸ್ಥಳವನ್ನು ವೀಕ್ಷಿಸಿದರು. ಈ ಸಂದರ್ಭದಲ್ಲಿ ಅಧಿಕಾರಿಗಳ ಜೊತೆ ಮಾತನಾಡಿ ಸಿಡಿಲಿನಿಂದ ಹಾನಿಯಾದ ಮನೆಗೆ ಸರ್ಕಾರದಿಂದ ಪರಿಹಾರವನ್ನು ಶೀಘ್ರವಾಗಿ ನೀಡಬೇಕು ಎಂದು ಸೂಚಿಸಿದರು. ಈ ಸಂದರ್ಭದಲ್ಲಿ ರಾಕೇಶ್ ರೈ ಕೆಡೆಂಜಿ, ಭಾಸ್ಕರ ಗೌಡ ಇಚಿಲಂಪಾಡಿ,

ನೆಲ್ಯಾಡಿ :ಸುರಿದ ಭಾರಿ ಗಾಳಿ ಮಳೆಗೆ ಸೌತಡ್ಕ ಸಮೀಪದ ಕೆಲವು ಮನೆಗಳಿಗೆ ಹಾನಿ

ನೆಲ್ಯಾಡಿ : ಸೋಮವಾರ ಸಂಜೆ ಸುರಿದ ಭಾರಿ ಗಾಳಿ ಮಳೆಗೆ ಸೌತಡ್ಕ ಸಮೀಪದ ಕೆಲವು ಮನೆಗಳಿಗೆ ಹಾನಿಯಾಗಿದ್ದು, ಮನೆಯಲ್ಲಿದ್ದವರು ಪ್ರಾಣಪಾಯದಿಂದ ಪಾರಾಗಿದ್ದಾರೆ. ಇಲ್ಲಿ ನಿವಾಸಿಗಳಾದ ಜಮೀಲಾ, ಮರಿಯಮ್ಮ, ಪಾರ್ವತಿ, ಸುರೇಶ್ ಪೂಜಾರಿ, ಮೂಸೆ ಕುಂಞಿ, ಜೋಹರ, ಹಮೀದ್ ಎಂಬುವರ ಮನೆಗೆ ಭಾಗಶಃ ಹಾನಿಯಾಗಿದ್ದು, ಮನೆಯ ಹೆಂಚು ಮತ್ತು ಶೀಟುಗಳು ಹಾರಿಹೋಗಿವೆ. ಈ ಸಂದರ್ಭ ಕೆಲವು ಮನೆಗಳಲ್ಲಿ ಹಿರಿಯರು ಮತ್ತು ಪುಟ್ಟ ಮಗು ಮನೆಯೊಳಗಿದ್ದು ಅದೃಷ್ಟವಶಾತ್ ಯಾವುದೇ ತೊಂದರೆಯಾಗದೆ

ಆದರ್ಶ್ ಶೆಟ್ಟಿ ನೆಲ್ಯಾಡಿ ರಾಷ್ಟ್ರಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆ

ನೆಲ್ಯಾಡಿ: ತೆಲಂಗಾಣ ರಾಜ್ಯದ ವಾರಂಗಲ್ ನಲ್ಲಿ ನಡೆಯುತ್ತಿರುವ ದಕ್ಷಿಣ ವಲಯ ಅಂತರ್ ರಾಜ್ಯ ಮಟ್ಟದ ಜೂನಿಯರ್ ಅಥ್ಲೆಟಿಕ್ಸ್ 18ರ ವಯೋಮಾನದ ಬಾಲಕರ ಕ್ರೀಡಾಕೂಟದಲ್ಲಿ ಆದರ್ಶ್ ಶೆಟ್ಟಿ ಇವರು ಎತ್ತರ ಜಿಗಿತ ಸ್ಪರ್ಧೆಯಲ್ಲಿ ಬೆಳ್ಳಿಯ ಪದಕದೊಂದಿಗೆ ದ್ವಿತೀಯ ಸ್ಥಾನ ಪಡೆದು ರಾಷ್ಟ್ರಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ ದೈಹಿಕ ಶಿಕ್ಷಕರಾದ ಏಲಿಯಸ್ ಪಿಂಟೋ, ರಾಜೇಶ್ ಮೂಲ್ಯ ಹಾಗೂ ಪುಷ್ಪರಾಜ್ ಇವರಿಗೆ ತರಬೇತಿಯನ್ನು ನೀಡಿದ್ದಾರೆ. ಪ್ರಸ್ತುತ ಇವರು ಪುತ್ತೂರು ಸಂತ

ನೆಲ್ಯಾಡಿ: ಅರಣ್ಯ ಇಲಾಖೆ ವತಿಯಿಂದ ಚಿಣ್ಣರ ವನ್ಯ ದರ್ಶನ, ಅಧ್ಯಯನ ಪ್ರವಾಸ

ನೆಲ್ಯಾಡಿ: ಅರಣ್ಯ ಇಲಾಖೆ ವತಿಯಿಂದ ಚಿಣ್ಣರ ವನ್ಯ ದರ್ಶನಕ್ಕೆ ಕಳೆಂಜ ಗ್ರಾಮದ ಮರಕ್ಕಡ ಪ್ರೌಢ ಶಾಲೆಯಿಂದ ವಿದ್ಯಾರ್ಥಿಗಳು ಕುದುರೆಮುಖ, ಶೃಂಗೇರಿ, ಹೊರನಾಡು, ಇತರ ಪರಿಸರಗಳಿಗೆ ಅಧ್ಯಯನ ಪ್ರವಾಸ ಕೈಗೊಂಡರು. ಪ್ರಯಾಣಕ್ಕೆ ಕಳೆಂಜ ಅರಣ್ಯ ಸಮಿತಿ ಅಧ್ಯಕ್ಷ ಧನಂಜಯ ಗೌಡ ಹಸಿರು ನಿಶಾನೆ ತೋರಿಸಿ ಶುಭಕೋರಿದರು. ಈ ಸಂದರ್ಭದಲ್ಲಿ ಉಪ್ಪಿನಂಗಡಿ ವಲಯ ಅರಣ್ಯ ಅಧಿಕಾರಿ ಜಯಪ್ರಕಾಶ್ ಕೆ.ಕೆ, ಕಳೆಂಜ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಮಂಜುನಾಥ ಗೌಡ, ಅರಣ್ಯ ಪಾಲಕರಾದ ಪ್ರಶಾಂತ್,