Home Posts tagged #belthangady

ಬೆಳ್ತಂಗಡಿ: ಶಿಬಾಜೆಯಲ್ಲಿ ಅಂಗಡಿ ಧ್ವಂಸ: ಸ್ಥಳೀಯ ಮುಖಂಡರಿಂದ ಕೃತ್ಯ ಖಂಡನೆ

ಸುಮಾರು 25 ವರ್ಷಗಳಿಂದ ವರ್ಷಗಳಿಂದ ನಡೆಸುತ್ತಿದ್ದ ಅಂಗಡಿಯನ್ನು ರಾತ್ರೋ ರಾತ್ರಿ ದ್ವಂಸ ಮಾಡಿದ ಘಟನೆ ಬೆಳ್ತಂಗಡಿ ತಾಲೂಕಿನ ಶಿಬಾಜೆ ಗ್ರಾಮದಲ್ಲಿ ನಡೆದಿದೆ. ಗ್ರಾಮದ ವಾಸು ಪೂಜಾರಿ ಎಂಬವರಿಗೆ ಸೇರಿದ ಅಂಗಡಿಯನ್ನು ದ್ವಂಸ ಮಾಡಿದ್ದಾರೆ. ಸ್ಥಳಕ್ಕೆ ಆಗಮಿಸಿದ ಸ್ಥಳೀಯ ಮುಖಂಡ ನವೀನ್ ನೆರಿಯ ಮಾತನಾಡಿ ಶಿಬಾಜೆ ಗ್ರಾಮದಲ್ಲಿ ಹಲವಾರು ಬೇಡದ ಚಟುವಟಿಕೆ ನಡೆಯುತ್ತಿವೆ.

ಬೆಳ್ತಂಗಡಿ: ಶ್ರೀ ವನ ದುರ್ಗಾ ಕೃಪಾಶ್ರಿತ ಸಂಚಾರಿ ನಡುಮನೆ ಯಕ್ಷಗಾನ ಕಲಾವಿದರಿಂದ ಮನೆ ಮನೆ ಯಕ್ಷಗಾನ

ಬೆಳ್ತಂಗಡಿ ತಾಲೂಕಿನ ಶಿಶಿಲ ಶ್ರೀ ವನ ದುರ್ಗಾ ಕೃಪಾಶ್ರಿತ ಸಂಚಾರಿ ನಡುಮನೆ ಯಕ್ಷಗಾನ ಕಲಾವಿದರಿಂದ ಮನೆ ಮನೆ ಯಕ್ಷಗಾನ ಕಾರ್ಯಕ್ರಮ ನಡೆಯಿತು. ಮೇಳದ ಭಾಗವತರಾದ ಮೋಹನ್ ಶಿಶಿಲ ಮಾತನಾಡಿ, ಯಕ್ಷಗಾನ ಕಲೆ ಹಲವಾರು ವರ್ಗಗಳಿಂದ ಇದೆ ಆದರೆ ಜನರು ಈಗೀಗ ಟಿವಿ ಮೊಬೈಲ್ ಗಳಲ್ಲಿ ಬೇರೆ ಬೇರೆ ಕಾರ್ಯಕ್ರಮ ನೋಡುತ್ತಾರೆ ಆದ್ದರಿಂದ ಹಳ್ಳಿ ಜನರಿಗೆ ಯಕ್ಷಗಾನದ ಅರಿವು ಮೂಡಿಸುವ ಕಾರ್ಯಕ್ರಮ ನಾವು ಮಾಡುತ್ತಿದ್ದೇವೆ,ಇದರಿಂದ ಬಂದ ಉಳಿಕೆ ಹಣವನ್ನು ಅಂಗವಿಕಲರಿಗೆ ಹಾಗೂ

ಕೊಕ್ಕಡ: ಯಕ್ಷಗಾನ ನಾಟ್ಯ ತರಬೇತಿ ತರಗತಿ ಉದ್ಘಾಟನೆ

ವೈದ್ಯನಾಥೇಶ್ವರ ಯಕ್ಷಗಾನ ನಾಟ್ಯ ಕಲಾ ಕೇಂದ್ರದ ವತಿಯಿಂದ ಕೊಕ್ಕಡದ ಶ್ರೀರಾಮ ಸೇವಾ ಮಂದಿರದಲ್ಲಿ ಯಕ್ಷಗಾನ ನಾಟ್ಯ ತರಬೇತಿ ತರಗತಿಯು ಸೆ.17ರಂದು ದೀಪ ಪ್ರಜ್ವಲನೆಯ ಮೂಲಕ ಯಕ್ಷಗಾನ ನಾಟ್ಯ ತರಬೇತಿ ತರಗತಿನ್ನು ಉದ್ಘಾಟಿಸಲಾಯಿತು. ವೇದಿಕೆಯಲ್ಲಿ ವೇದಮೂರ್ತಿಬಾಲಕೃಷ್ಣ ಕೆದಿಲಾಯ ಅಧ್ಯಕ್ಷರು ವ್ಯವಸ್ಥಾಪನ ಸಮಿತಿ ಶ್ರೀ ವೈದ್ಯನಾಥೇಶ್ವರ ವಿಷ್ಣುಮೂರ್ತಿ ದೇವಸ್ಥಾನ ಕೊಕ್ಕಡ, ನಾರಾಯಣ ಶೆಟ್ಟಿ ಕುಂಡಡ್ಕ ಹಿರಿಯ ಭಾಗವತರು, ಕುಶಾಲಪ್ಪ ಗೌಡ ಪೂವಾಜೆ ಅಧ್ಯಕ್ಷರು ಶ್ರೀರಾಮ

ಉಜಿರೆ ಎಸ್.ಡಿ.ಎಂ. ಕಾಲೇಜಿನಲ್ಲಿ ‘ಸಂಸ್ಕೃತೋತ್ಸವ’, ‘ಸಂಸ್ಕೃತಸಂಧ್ಯಾ’

ಉಜಿರೆ, ಸೆ.9: ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನಲ್ಲಿ ಸೆ.8ರಂದು ಸಂಸ್ಕೃತ ವಿಭಾಗದ ವತಿಯಿಂದ ‘ಸಂಸ್ಕೃತೋತ್ಸವ’ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಶ್ರೀ ಕ್ಷೇತ್ರ ಧರ್ಮಸ್ಥಳದ ಮಣೆಗಾರ ವಸಂತ ಮಂಜಿತ್ತಾಯ ಅವರು, “ಸಂಸ್ಕೃತವು ಭಾರತೀಯ ಭಾಷೆಗಳ ಮಾತೃ ಸ್ವರೂಪಿಯಾಗಿದೆ. ಸಂಸ್ಕೃತವು ನಮ್ಮ ಜೀವನ ಶೈಲಿ, ನಮ್ಮ ಸಂಸ್ಕಾರ ಹಾಗೂ ಸಂಸ್ಕೃತಿಯೂ ಹೌದು” ಎಂದರು. “ನಮ್ಮ ಜೀವನದ ಮೇಲೆ ಸಂಸ್ಕೃತವು ಬೀರುವ ಪ್ರಭಾವದ ಅಗಾಧತೆಯು ನಾನು

ಬೆಳ್ತಂಗಡಿ: ಮೇಲಂತಬೆಟ್ಟು ಬೈಕ್ ಮುಖಾಮುಖಿ ಢಿಕ್ಕಿ: ನಾಲ್ವರು ಗಂಭೀರ..!

ಬೆಳ್ತಂಗಡಿ: ಮೇಲಂತಬೆಟ್ಟು ಸಮೀಪದ ಕಲ್ಲಗುಡ್ಡೆ ಎಂಬಲ್ಲಿ ಬೈಕ್‍ಗಳೆರಡು ಮುಖಾಮುಖಿ ಡಿಕ್ಕಿ ಹೊಡೆದು ನಾಲ್ವರು ಗಂಭೀರ ಗಾಯಗೊಂಡ ಘಟನೆ ಸಂಭವಿಸಿದೆ. ಬೆಳ್ತಂಗಡಿ ಪೇಟೆಯಿಂದ ಸವಣಾಲು ಕಡೆಗೆ ತೆರಳುತಿದ್ದ ಬೈಕ್ ಹಾಗೂ ಸವಣಾಲು ಕಡೆಯಿಂದ ಬೆಳ್ತಂಗಡಿಗೆ ಬರುತ್ತಿದ್ದ ಬೈಕ್‍ಗಳ ನಡುವೆ ಅಪಘಾತ ಸಂಭವಿಸಿದ್ದು, ಈ ವೇಳೆ ಒಂದು ಬೈಕ್‍ನಲ್ಲಿದ್ದ 2.5 ವರ್ಷದ ಮಗು, ಮಹಿಳೆ ಹಾಗೂ ಬೈಕ್ ಸವಾರ ಮತ್ತು ಇನ್ನೊರ್ವ ಬೈಕ್ ಸವಾರ ಸೇರಿ ನಾಲ್ವರಿಗೂ ಗಂಭೀರ

ವಸಂತ ಬಂಗೇರ ವಿರುದ್ಧ ಸುಳ್ಳು ಸುದ್ದಿ ಹಬ್ಬಿಸಿ ಅಪಪ್ರಚಾರ : ಅಭಿಮಾನಿ ಬಳಗದಿಂದ ದೂರು

ತಮ್ಮ ವಿರುದ್ಧ ಸುಳ್ಳು ಸುದ್ದಿಗಳನ್ನು ಹರಡಿ ಅಪಪ್ರಚಾರ ಮಾಡಲಾಗಿದೆ ಎಂದು ಆರೋಪಿಸಿ ಮಾಜಿ ಶಾಸಕ ವಸಂತ ಬಂಗೇರ ಅವರ ಅಭಿಮಾನಿಗಳು ಪೊಲೀಸರಿಗೆ ದೂರು ನೀಡಿದ್ದಾರೆ. ಸುಳ್ಳು ಸುದ್ದಿ ಹಬ್ಬಿ ಸಮಾಜದಲ್ಲಿ ಅಶಾಂತಿ ಉಂಟುಮಾಡುವ ಪ್ರಯತ್ನವಾಗಿದೆ. ಈ ಸಂದೇಶವನ್ನು ತಾಲೂಕಿನ ಹಲವರು ಹಂಚಿಕೊಂಡು ಗೊಂದಲ ಮೂಡಿಸುತ್ತಿದ್ದಾರೆ ಎಂದು ದೂರಿನಲ್ಲಿ ತಿಳಿಸಿದ್ದಾರೆ. ಈ ಸಂದರ್ಭದಲ್ಲಿ ಚಂದ್ರಹಾಸ ಚಾರ್ಮಾಡಿ, ಅಶೋಕ್ ಪೂಜಾರಿ, ಧನಂಜ ಜೈನ್ ಉಪಸ್ಥಿತರಿದ್ದರು.

ಬೆಳ್ತಂಗಡಿ ನೆರಿಯ ಗ್ರಾಮದಲ್ಲಿ ಸ್ಮಶಾನದ ಕೊರತೆ : ಮೃತ ದೇಹ ಇಟ್ಟು ಗ್ರಾಮಸ್ಥರಿಂದ ಪ್ರತಿಭಟನೆ

ಬೆಳ್ತಂಗಡಿ ತಾಲೂಕಿನ ನೆರಿಯ ಗ್ರಾಮದಲ್ಲಿ ಸ್ಮಶಾನ ಇಲ್ಲದೆ ಶವ ಸಂಸ್ಕಾರಕ್ಕೆ ಸಮಸ್ಯೆ ಆಗುತಿದೆ. ತಕ್ಷಣ ಸ್ಮಶಾನದ ಜಾಗ ನಿಗದಿಗೊಳಿಸುವಂತೆ ಆಗ್ರಹಿಸಿ ಮೃತ ದೇಹ ಇಟ್ಟು ಗ್ರಾಮಸ್ಥರು ಪ್ರತಿಭಟನೆ ಮಾಡಿದ ಘಟನೆ ನೆರಿಯದಲ್ಲಿ ನಡೆದಿದೆ. ಕಳೆದ ಹಲವಾರು ವರ್ಷಗಳಿಂದ ಸ್ಮಶಾನವಿಲ್ಲದೆ ಶವ ಸಂಸ್ಕಾರಕ್ಕಾಗಿ ಗ್ರಾಮಸ್ಥರು ಅಲೆದಾಡುವ ಸ್ಥಿತಿ ಇದ್ದರೂ ಯಾರೂ ಕೂಡ ಗ್ರಾಮಸ್ಥರ ಮನವಿಗೆ ಸ್ಪಂದಿಸುತ್ತಿಲ್ಲ ಸ್ಮಶಾನ ನಿಗದಿಗೊಳಿಸದೇ ಮೃತ ದೇಹದ ಅಂತಿಮ ಸಂಸ್ಕಾರ ಮಾಡುವುದಿಲ್ಲ

ಜು.6: ಉಜಿರೆ ಎಸ್.ಡಿ.ಎಂ. ಕಾಲೇಜಿನಲ್ಲಿ ‘ಹೊಸ ತಲೆಮಾರಿಗೆ ಕುವೆಂಪು ಸಾಹಿತ್ಯ ದರ್ಶನ’ ರಾಜ್ಯಮಟ್ಟದ ವಿಚಾರ ಸಂಕಿರಣ

ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ಕನ್ನಡ ವಿಭಾಗ ಹಾಗೂ ಕುಪ್ಪಳಿಯ ರಾಷ್ಟ್ರಕವಿ ಕುವೆಂಪು ಪ್ರತಿಷ್ಠಾನದ ಸಹಯೋಗದಲ್ಲಿ ‘ಹೊಸ ತಲೆಮಾರಿಗೆ ಕುವೆಂಪು ಸಾಹಿತ್ಯ ದರ್ಶನ’ ರಾಜ್ಯಮಟ್ಟದ ವಿಚಾರ ಸಂಕಿರಣವು ಜು.6ರಂದು ಉಜಿರೆ ಎಸ್.ಡಿ.ಎಂ. ಕಾಲೇಜಿನ ‘ಸಮ್ಯಗ್ದರ್ಶನ’ ಸೆಮಿನಾರ್ ಹಾಲ್ ನಲ್ಲಿ ನಡೆಯಲಿದೆ. ರಾಷ್ಟ್ರಕವಿ ಕುವೆಂಪು ಪ್ರತಿಷ್ಠಾನದ ಸಮಕಾರ್ಯದರ್ಶಿ ಕಡಿದಾಳ್ ಪ್ರಕಾಶ್ ಅವರು ಬೆಳಗ್ಗೆ 9.45ಕ್ಕೆ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಎಸ್.ಡಿ.ಎಂ.

ಬೆಳ್ತಂಗಡಿ ಶಾಸಕನ ವಿರುದ್ಧ ಪೊಲೀಸರಿಗೆ ದೂರು

ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯರವರು 24 ಮಂದಿ ಜನರನ್ನು ಹತ್ಯೆ ಮಾಡಿರುವುದಾಗಿ ಸುಳ್ಳು ಆರೋಪ ಮಾಡಿರುವ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಪುತ್ತೂರು ನಗರಸಭೆ ಸದಸ್ಯ ಮೊಹಮ್ಮದ್ ರಿಯಾಝ್ ಕೆ ಅವರು ಪುತ್ತೂರು ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಮೇ 22ರಂದು ಬೆಳ್ತಂಗಡಿಯಲ್ಲಿ ನಡೆದ ಬಿಜೆಪಿಯ ವಿಜಯೋತ್ಸವ ಸಂದರ್ಭದಲ್ಲಿ ಶಾಸಕ ಹರೀಶ್ ಪೂಂಜ ಅವರು, ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು 24 ಜನರನ್ನು ಹತ್ಯೆ

ಕೆಲಸ ಕೊಡಿಸುವ ನೆಪದಲ್ಲಿ ಮಹಿಳೆಗೆ ಲೈಂಗಿಕ ಕಿರುಕುಳ

ಉದ್ಯಮಿಯಿಂದ ತನ್ನ ಕಾರಿನಲ್ಲಿ ಮಹಿಳಗೆ ಲೈಂಗಿಕ ಕಿರುಕುಳ ಬೆಳ್ತಂಗಡಿ ತಾಲೂಕಿನ ಉಜಿರೆಯಲ್ಲಿ ನಡೆದ ಘಟನೆ. ಕಾರಿನಲ್ಲಿ ಕಿರುಕುಳ ನೀಡುವಾಗ ಕಿರುಚಾಡಿ ಕಾರಿನಿಂದ ಹೊರಬಂದ ಯುವತಿ.ಬೈಕ್ ನಲ್ಲಿ ಬಂದ ಯುವಕರಿಂದ ಮಹಿಳೆಯ ರಕ್ಷಣೆ.ಮಹಾವೀರ ಟೆಕ್ಸ್ ಟೈಲ್ ಹಾಗೂ ಮಹಾವೀರ ಸೂಪರ್ ಮಾರ್ಕೆಟ್ ಮಾಲೀಕ ಪ್ರಭಾಕರ ಹೆಗ್ಡೆ ಮೇಲೆ ಲೈಂಗಿಕ ಕಿರುಕುಳ ಆರೋಪ.ಉಜಿರೆಯಲ್ಲಿರುವ ಮಹಾವೀರ ಟೆಕ್ಸ್ ಟೈಲ್ ಹಾಗೂ ಧರ್ಮಸ್ಥಳದಲ್ಲಿರುವ ಮಹಾವೀರ ಸೂಪರ್ ಮಾರ್ಕೆಟ್.20 ವರ್ಷದ ವಿವಾಹಿತ